ದಿನ ಭವಿಷ್ಯ

15-06-2025

Jun 15, 2025 - 03:00
 ದಿನ ಭವಿಷ್ಯ


                   ಜ್ಯೋತಿರ್ಮಯ

ಅದೃಷ್ಟ ಸಂಖ್ಯೆ  6.

೧. ಮೇಷ:
 ಕಷ್ಟ, ಸುಖಗಳ ಚಿಂತೆ ಬೇಡ. ಉದ್ಯೋಗ, ವ್ಯವಹಾರಗಳಿಗೆ ವಿರಾಮ.  ಕಟ್ಟಡ ನಿರ್ಮಾಣ ಕಾರ್ಯಗಳ ವೇಗ ವರ್ಧನೆ ಅಪರೂಪದ  ಬಂಧುಗಳ ಭೇಟಿ. ವ್ಯವಹಾರದ ಸಂಬಂಧ ಸಣ್ಣ ಪ್ರಯಾಣ‌. ಗಣೇಶ ದ್ವಾದಶನಾಮ ಸ್ತೋತ್ರ, ವಿಷ್ಣು ಸಹಸ್ರ ನಾಮ, ಶನಿಮಹಾತ್ಮೆ ಓದಿ.


೨. ವೃಷಭ:
 ನಿರೀಕ್ಷೆಗಿಂತ ಹೆಚ್ಚು ಅನುಕೂಲದ ಸನ್ನಿವೇಶ. ಹಣಕಾಸು ವ್ಯವಹಾರ ಸುಗಮ. ಸರಕಾರಿ  ನೌಕರರಿಗೆ  ಕೊಂಚ ಆತಂಕ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ಗೃಹೋತ್ಪನ್ನ ಖಾದ್ಯ ಪದಾರ್ಥಗಳ ಮಾರಾಟ ಹೆಚ್ಚಳ. ಗಣಪತಿ ಅಥರ್ವಶೀರ್ಷ, ಸುಬ್ರಹ್ಮಣ್ಯ ಸ್ತೋತ್ರ, ಗುರುಸ್ತೋತ್ರ ಓದಿ.


೩ಮಿಥುನ:
ವ್ಯಾವಹಾರಿಕ ದೃಷ್ಟಿಯಿಂದ ಶುಭಕಾಲ. ಶಾರೀರಿಕ ತೊಂದರೆಗಳಿಂದ ಮುಕ್ತಿ.  ಉದ್ಯೋಗಸ್ಥರಿಗೆ ವಿರಾಮದಿಂದ ನಿಶ್ಚಿಂತೆ.  ವ್ಯವಹಾರಸ್ಥರಿಗೆ ಅನುಕೂಲದ ದಿನ. ದೃಢವಾದ  ಆತ್ಮವಿಶ್ವಾಸದಿಂದ  ಕಾರ್ಯಜಯ. ಗಣೇಶ ಕವಚ, ರಾಮ ಭುಜಂಗಪ್ರಯಾತ ಸ್ತೋತ್ರ, ಆದಿತ್ಯ ಹೃದಯ ಓದಿ.


೪. ಕರ್ಕಾಟಕ:

 ಒಟ್ಟಿನಲ್ಲಿ ಶುಭಫಲಗಳೇ ಅಧಿಕವಾಗಲಿವೆ. ಉದ್ಯೋಗಸ್ಥರಿಗೆ   ನೆಮ್ಮದಿಯ ಅನುಭವ. ಪಾಲುದಾರಿಕೆ ವ್ಯವಹಾರ ಕುಂಠಿತ. ಕಟ್ಟಡ ನಿರ್ಮಾಣ-ಮಾರಾಟ  ವ್ಯವಹಾರಸ್ಥರಿಗೆ   ಉತ್ತಮ ಲಾಭ. ವ್ಯವಹಾರ ಸಂಬಂಧ ಸಣ್ಣ ಪ್ರವಾಸ. ಸಂಕಷ್ಟನಾಶನ ಗಣೇಶ ಸ್ತೋತ್ರ, ಶಿವಪಂಚಾಕ್ಷರ ಸ್ತೋತ್ರ, ಮಹಾಲಕ್ಷ್ಮಿ ಅಷ್ಟಕ ಓದಿ.
 


೫.ಸಿಂಹ:
ಆನಂದವನ್ನು ಹಂಚಿಕೊಂಡಷ್ಟೂ ವೃದ್ಧಿಯಾಗುತ್ತದೆ. ಸ್ವಯಂ ಉದ್ಯೋಗಸ್ಥರಿಗೆ ಲಕ್ಷ್ಮೀ ಕಟಾಕ್ಷ.  ಉಡುಪು ತಯಾರಿ ಉದ್ದಿಮೆಯವರಿಗೆ ಅಪಾರ ಲಾಭ. ಗೃಹಿಣಿಯರ ಸ್ವಾವಲಂಬನೆ ಯತ್ನಕ್ಕೆ  ಯಶಸ್ಸು. ಹತ್ತಿರದ ದೇವೀಕ್ಷೇತ್ರಕ್ಕೆ ಭೇಟಿ. ಗಣೇಶ ಪಂಚರತ್ನ, ದತ್ತಾತ್ರೇಯ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.

 ೬. ಕನ್ಯಾ:
ದೈವಾನುಗ್ರಹದಿಂದ ಸರ್ವವೂ ಶುಭ. ಅನಿರೀಕ್ಷಿತ ಮೂಲದಿಂದ  ಧನಪ್ರಾಪ್ತಿ.  ಉದ್ಯೋಗಸ್ಥರಿಗೆ , ಸಹೋದ್ಯೋಗಿಗಳ ಮಿಲನ. ಉದ್ಯೋಗಾಪೇಕ್ಷಿಗಳಿಗೆ ಯೋಗ್ಯ ಅವಕಾಶ ಗೋಚರ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ಗಣೇಶ ಕವಚ, ದಕ್ಷಿಣಾಮೂರ್ತಿ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

೭. ತುಲಾ:
ಬಹಳವಾಗಿ ನಿರೀಕ್ಷಿಸುತ್ತಿದ್ದ ಅತಿಥಿಯ ಆಗಮನ.  ಕಾರ್ಯಾಲಯಕ್ಕೆ ರಜೆಯಾಗಿರುವುದರಿಂದ ನಿಶ್ಚಿಂತೆ. ನಿವೇಶನ, ಮನೆ ಖರೀದಿ- ಮಾರಾಟ ವ್ಯವಹಾರಸ್ಥರಿಗೆ ಅನುಕೂಲ. ಕೃಷಿ ಉತ್ಪನ್ನ ಮಾರಾಟಗಾರರಿಗೆ  ತೃಪ್ತಿಕರ  ಲಾಭ. ಹಿರಿಯರಿಗೆ ಉಲ್ಲಾಸದ ವಾತಾವರಣ.  ಗಣಪತಿ ಅಥರ್ವಶೀರ್ಷ, ರಾಮರಕ್ಷಾ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.


೮.ವೃಶ್ಚಿಕ:
ಹೆಚ್ಚುಕಡಿಮೆ ಎಲ್ಲವೂ ನಿರೀಕ್ಷೆಯಂತೆ ಕೈಗೂಡುತ್ತದೆ. ಮಾಲಿಕ- ನೌಕರರ ಬಾಂಧವ್ಯ ವೃದ್ಧಿ. ಆಸ್ತಿ, ಮನೆ ದಳ್ಳಾಳಿಗಳಿಗೆ ಅನುಕೂಲ. ಲೇವಾದೇವಿ ವ್ಯವಹಾರಸ್ಥರಿಗೆ  ಸಾಮಾನ್ಯ ಲಾಭ.  ಚಿನ್ನ, ಬೆಳ್ಳಿ ವ್ಯಾಪಾರಿಗಳಿಗೆ  ಉತ್ತಮ ಲಾಭ. ಗಣೇಶ ಸ್ತೋತ್ರ, ದಾರಿದ್ರ್ಯದಹನ ಶಿವಸ್ತೋತ್ರ, ವೆಂಕಟೇಶ್ವರ ಸ್ತೋತ್ರ ಓದಿ.

೯.ಧನು:
ಸಮರ್ಪಿತ ಮನೋಭಾವದ ಕರ್ಮಕ್ಕೆ ಶುಭಫಲ. ಹೊಂದಾಣಿಕೆ,  ಕಾರ್ಯನಿಷ್ಠೆಗಳಿಂದ  ಯಶಸ್ಸು. ಕಾರ್ಯದಕ್ಷತೆಗೆ ಮೇಲಧಿಕಾರಿಗಳಿಂದ ಪ್ರಶಂಸೆ. ದೇವತಾರ್ಚನೆಯಲ್ಲಿ ಆಸಕ್ತಿ. ವ್ಯವಹಾರ ಸಂಬಂಧ ಪ್ರಯಾಣ ಸಂಭವ. ಮಕ್ಕಳ ಪ್ರತಿಭೆ ವಿಕಾಸಕ್ಕೆ ವ್ಯವಸ್ಥೆ. ಗಣೇಶ ಕವಚ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.


೧೦.ಮಕರ:
ಆತುರ, ಉದ್ವೇಗವನ್ನು ಕಡಿಮೆ ಮಾಡಿಕೊಳ್ಳಿ. ವಿರಾಮದ ಆನಂದವನ್ನು ಮುಕ್ತವಾಗಿ ಅನುಭವಿಸಿ. ಪಾಲುದಾರಿಕೆ ವ್ಯವಹಾರದಲ್ಲಿ ಸಾಮಾನ್ಯ ಲಾಭ.  ಕೆಲವು ವರ್ಗಗಳ ವ್ಯಾಪಾರಿಗಳಿಗೆ ಅಧಿಕ ಲಾಭ. ಹೆಚ್ಚಿನವರಿಗೆ ಮಿಶ್ರಫಲ ಕೊಡುವ ದಿನ. ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ,  ಹನುಮಾನ್‌ ಚಾಲೀಸಾ ಓದಿ.


೧೧. ಕುಂಭ:
ಸಾಮಾಜಿಕ ಚಟುವಟಿಕೆಗಳ ಒತ್ತಡ. ನಾಳೆಯ ಕೆಲಸಗಳ ಚಿಂತನೆ. ಅವಿಶ್ರಾಂತ  ಚಟುವಟಿಕೆಗಳಿಂದ ಆಯಾಸ. ಗೃಹಿಣಿಯರ ಉದ್ಯಮಗಳ ಜನಪ್ರಿಯತೆ ವೃದ್ಧಿ. ವೃದ್ಧಾಶ್ರಮ, ಅನಾಥಾಶ್ರಮಕ್ಕೆ ಭೇಟಿ. ಗಣೇಶ ಕವಚ, ನರಸಿಂಹ ಸ್ತೋತ್ರ, ಶನಿಮಹಾತ್ಮೆ  ಓದಿ.

೧೨. ಮೀನ:
ಇನ್ನಷ್ಟು ಹೊಣೆಗಾರಿಕೆಗಳನ್ನು ನಿರೀಕ್ಷಿಸಿರಿ. ಕಾರ್ಯಕ್ಷೇತ್ರದಲ್ಲಿ ಪ್ರಯತ್ನಕ್ಕೆ ತಕ್ಕ ಫಲ. ಹಿರಿಯರ ಆರೋಗ್ಯದ ಕಡೆ ಗಮನವಿರಲಿ. ವಸ್ತ್ರ, ಶೋಕಿಸಾಮಗ್ರಿ ವ್ಯಾಪಾರಿಗಳಿಗೆ ಅನುಕೂಲ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.