ದಿನ ಭವಿಷ್ಯ

19-06-2025

Jun 19, 2025 - 03:00
ದಿನ ಭವಿಷ್ಯ


               ಜ್ಯೋತಿರ್ಮಯ

ಅದೃಷ್ಟ ಸಂಖ್ಯೆ 1

೧.ಮೇಷ:

ದೇಹ, ಮನಸ್ಸು ಎರಡರ ಆರೋಗ್ಯವೂ ಉತ್ತಮ. ಉದ್ಯೋಗಸ್ಥರು ವ್ಯವಹಾರಸ್ಥರಿಗೆ ವಿಪುಲ‌ ಅವಕಾಶ. ಹಲವು ಕಾಲದಿಂದ ಕಾಡುತ್ತಿರುವ ಜಟಿಲ ಸಮಸ್ಯೆಗೆ ಪರಿಹಾರ. ಶುಭ ಕಾರ್ಯಕ್ಕೊದಗಿದ ವಿಘ್ನ ದೂರ. ಗೃಹಿಣಿಯರಿಗೆ, ಮಕ್ಕಳಿಗೆ ಆನಂದದ ದಿನ. ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.

೨. ವೃಷಭ:

ವೃತ್ತಿರಂಗದಲ್ಲಿ  ಮುನ್ನಡೆ. ಸ್ವತಂತ್ರ ಉದ್ಯಮಿಗಳಿಗೆ ಎದುರಾಳಿಗಳಿಂದ  ಸ್ಪರ್ಧೆ. ಗುರುಸಮಾನರ ಅಕಸ್ಮಾತ್ ಭೇಟಿ. ಸಂಗಾತಿಯ ಮನೋತವನ್ನು ಗೌರವಿಸಿ ನಡೆದುಕೊಂಡರೆ ಕ್ಷೇಮ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ಗಣೇಶ ಕವಚ, ವಿಷ್ಣು ಸಹಸ್ರನಾಮ, ಗುರುಸ್ತೋತ್ರ ಓದಿ.

೩.ಮಿಥುನ:

ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ. ಶುಭ ಕಾರ್ಯ ನಡೆಸುವ ಬಗ್ಗೆ ಚಿಂತನೆ.  ಜೀವನದಲ್ಲಿಹಿರಿಯರ ಆರೋಗ್ಯದತ್ತ ಗಮನವಿರಲಿ. ಪೂರ್ವ ದಿಕ್ಕಿನಿಂದ  ಶುಭ  ಸಮಾಚಾರ ನಿರೀಕ್ಷೆ. ಗೃಹಿಣಿಯರಿಗೆ ಸಮಾಧಾನ. ಗಣೇಶ ಅಷ್ಟೋತ್ತರ ಶತನಾಮ ಸ್ತೋತ್ರ, ಶಿವಪಂಚಾಕ್ಷರ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.


೪.ಕರ್ಕಾಟಕ:

ನಾಮಸ್ಮರಣೆಯ  ಮೂಲಕ  ಖಿನ್ನತೆಯನ್ನು ತೊಲಗಿಸಿ.  ಉದ್ಯೋಗ, ವ್ಯವಹಾರದಲ್ಲಿ ಯಶಸ್ಸಿನತ್ತ ದಾಪುಗಾಲು. ವೈವಾಹಿಕ  ಜೀವನದಲ್ಲಿ ಸಂತೃಪ್ತಿ. ಪಾಲುದಾರಿಕೆ  ವ್ಯವಹಾರದಲ್ಲಿ ಲಾಭ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಆನಂದ. ಗಣೇಶ ಪಂಚರತ್ನ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ಮಹಿಷಮರ್ದಿನಿ ಸ್ತೋತ್ರ ಓದಿ.

೫. ಸಿಂಹ:

ಕಾರ್ಯತತ್ಪರರಿಗೆ ಶ್ಲಾಘನೆ. ಹೊಸ ಅವಕಾಶಕ್ಕಾಗಿ ಹುಡುಕಾಟ.. ಗೆಳೆಯರಿಂದ ಉಪಯುಕ್ತ ಮಾಹಿತಿ. ಅನಿರೀಕ್ಷಿತ ಧನಾಗಮ.ಗುರುಹಿರಿಯರ ಮಾರ್ಗದರ್ಶನದಿಂದ ಕಾರ್ಯ ಯಶಸ್ವಿ . ಗಣೇಶ ಕವಚ, ರಾಮರಕ್ಷಾ ಸ್ತೋತ್ರ, ನವಗ್ರಹ ಮಂಗಲಾಷ್ಟಕ  ಓದಿ.

೬. ಕನ್ಯಾ:

ಆವಶ್ಯಕತೆಗೆ ಸರಿಯಾಗಿ ಧನಾಗಮ.ದೂರದಿಂದ  ಶುಭವಾರ್ತೆ. ವಾಹನ  ಖರೀದಿ  ಯೋಜನೆ ಮುನ್ನಡೆ.ದ್ರವ ಪದಾರ್ಥ ವ್ಯಾಪಾರಿಗಳಿಗೆ ಲಾಭ. ಹಿರಿಯರ ಮತ್ತು ಗೃಹಿಣಿಯರ  ಆರೋಗ್ಯ ಗಮನಿಸಿ. ವರ- ವಧು ಅನ್ವೇಷಣೆಯಲ್ಲಿ  ಪ್ರಗತಿ.ಗಣೇಶ ಕವಚ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

೭.ತುಲಾ:

ಚಿತ್ತ ಚಾಂಚಲ್ಯಕ್ಕೆ  ಎಡೆಗೊಡದಿರಿ. ಪತಿ- ಪತ್ನಿಯರೊಳಗೆ ಪರಸ್ಪರ ಸಹಾಯ. ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ. ಗುರುಹಿರಿಯರ ಮಾರ್ಗದರ್ಶನ ಲಭ್ಯ.ಮಕ್ಕಳಿಂದ ಮನೆಯಲ್ಲಿ ಸಂತಸ. ಗಣೇಶ ದ್ವಾದಶನಾಮ ಸ್ತೋತ್ರ, ವೆಂಕಟೇಶ್ವರ ಸ್ತೋತ್ರ, ಮಹಾಲಕ್ಷ್ಮಿ ಅಷ್ಟಕ ಓದಿ.

೮.ವೃಶ್ಚಿಕ:
ಸತ್ಕರ್ಮಗಳ ಫಲ ಲಭಿಸುವ‌   ಸಮಯ. ಹಿರಿಯರಿಗೆ ಆರೋಗ್ಯ ಉತ್ತಮ. ತಾಳ್ಮೆಯಿಂದ ಕಾರ್ಯದಲ್ಲಿ ಯಶಸ್ಸು. ಪಶ್ಚಿಮ  ದಿಕ್ಕಿಗೆ  ಪಯಣ ಸಂಭವ. ಗೃಹಿಣಿಯರಿಗೆ, ಮಕ್ಕಳಿಗೆ  ಶುಭ. ಗಣೇಶ ಸ್ತೋತ್ರ, ದತ್ತಾತ್ರೇಯ ಸ್ತೋತ್ರ, ಕನಕಧಾರಾ ಸ್ತೋತ್ರ ಓದಿ.

೯. ಧನು:
ಸಮಾಧಾನದ ವರ್ತನೆಯಿಂದ  ಸಕಲ‌ ಕಾರ್ಯಸಿದ್ಧಿ. ವಸ್ತ್ರೋದ್ಯಮಿಗಳಿಗೆ ಲಾಭ. ಉದ್ಯೋಗಸ್ಥರಿಗೆ ಮಂದ ಗತಿಯಲ್ಲಿ ಮುನ್ನಡೆ. ವಿವಾಹ ಮಾತುಕತೆ ಯಶಸ್ವಿ. ಮಕ್ಕಳ ವಿದ್ಯಾಭ್ಯಾಸ ಮುನ್ನಡೆ.ಗಣಪತಿ ಅಥರ್ವಶೀರ್ಷ, ಶಿವಪಂಚಾಕ್ಷರ ಸ್ತೋತ್ರ, ಮಹಾಲಕ್ಷ್ಮಿ ಅಷ್ಟಕ ಓದಿ.


೧೦.ಮಕರ: 

ಅಭಿಪ್ರಾಯ ವ್ಯಕ್ತಪಡಿಸಲು  ಆತುರ ಬೇಡ.  ಉದ್ಯೋಗ, ವ್ಯವಹಾರ ಪ್ರಗತಿ. ಸಾಗರೋತ್ಪನ್ನ ವ್ಯಾಪಾರಿಗಳಿಗೆ ಹೇರಳ  ಲಾಭ. ದೇವತಾರ್ಚನೆಯಲ್ಲಿ  ಆಸಕ್ತಿ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಶುಭ. ಗಣೇಶ ಕವಚ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.

೧೧. ಕುಂಭ:
 
ಸೇವಾ ಕಾರ್ಯಗಳಲ್ಲಿ ಆಸಕ್ತಿ ಉದ್ಯೋಗಸ್ಥರಿಗೆ ಹುದ್ದೆಯಲ್ಲಿ ಪದೋನ್ನತಿ ಸಂಭವ. ಗೃಹಿಣಿಯರಿಗೆ ದ್ರವ್ಯಲಾಭ. ಉನ್ನತ ವ್ಸಾಸಂಗಾಸಕ್ತರಿಗೆ  ಅನುಕೂಲದ ವಾತಾವರಣ. ಹಿರಿಯರಿಗೆ, ಮಕ್ಕಳಿಗೆ ಸಂತಸದ ವಾತಾವರಣ. ಗಣೇಶ ಕವಚ, ರಾಮರಕ್ಷಾ ಸ್ತೋತ್ರ ಶನಿಮಹಾತ್ಮೆ ಓದಿ.


೧೨. ಮೀನ:

ದೂರದ ಸ್ಥಳಕ್ಕೆ ಭೇಟಿ ಸಂಭವ. ಹೊಸ ಕಾರ್ಯಾರಂಭಕ್ಕೆ ವಿಘ್ನ. ಹಳೆಯ ವಿವಾದ ಪರಿಹಾರ.ಕೃಷ್ಯುತ್ಪನ್ನಗಳಿಂದ  ಲಾಭ. ಹಿರಿಯರ, ಗೃಹಿಣಿಯರ,ಮಕ್ಕಳ ಆರೋಗ್ಯ ಸ್ಥಿರ. ರಾತ್ರಿ ಪ್ರಯಾಣ ಮಾಡದಿರಿ.ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.