ದಿನ ಭವಿಷ್ಯ

24-06-2025

Jun 24, 2025 - 03:00
ದಿನ ಭವಿಷ್ಯ

                 ಜ್ಯೋತಿರ್ಮಯ

ಅದೃಷ್ಟ ಸಂಖ್ಯೆ 1


         

೧. ಮೇಷ:

 ಉದ್ಯೋಗ ಸ್ಥಾನದಲ್ಲಿ ಏಕರೀತಿಯ ಪರಿಸ್ಥಿತಿ. ಉದ್ಯಮಿಗಳಿಗೆ  ಸಮಸ್ಯೆಗಳಿಂದ ಮುಕ್ತಿ.  ವಸ್ತ್ರ, ಸಿದ್ಧ ಉಡುಪು, ಶೋಕಿಸಾಮಗ್ರಿ ವ್ಯಾಪಾರಿಗಳಿಗೆ ಅದೃಷ್ಟ. ಮಹಿಳಾ ಉದ್ಯಮಿಗಳಿಗೆ ಸಾಮಾನ್ಯ ಯಶಸ್ಸು. ಗೃಹೋತ್ಪನ್ನಗಳಿಗೆ ಅಧಿಕ ಬೇಡಿಕೆ. ಗಣೇಶ ಪಂಚರತ್ನ, ಸುಬ್ರಹ್ಮಣ್ಯ ಕವಚ, ಗುರುಸ್ತೋತ್ರ ಓದಿ.

೨.ವೃಷಭ:
 ಹೊಸ  ಕ್ಷೇತ್ರಕ್ಕೆ ಸುಲಭ ಪ್ರವೇಶ. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ವ್ಯಾಪಾರಿಗಳಿಗೆ ಹೇರಳ ಲಾಭ. ತಾಂತ್ರಿಕ ಪರಿಣತರಿಗೆ  ಉದ್ಯೋಗಾವಕಾಶ. ಲೇವಾದೇವಿ ಯಂತ್ರೋಪಕರಣ ವ್ಯಾಪಾರಿಗಳಿಗೆ ಅನುಕೂಲ. ವಾಹನ ಚಾಲನೆಯಲ್ಲಿ ಎಚ್ಚರ. ಗಣಪತಿ ಅಥರ್ವಶೀರ್ಷ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ದಾರಿದ್ರ್ಯದಹನ ಶಿವಸ್ತೋತ್ರ ಓದಿ.

೩.ಮಿಥುನ:
 ಕಲ್ಪನೆಗಳನ್ನು ಸಾಕಾರಗೊಳಿಸುವ ಪ್ರಯತ್ನ‌. ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ. ಅಪಾತ್ರರಿಗೆ ಸಲಹೆ ನೀಡಿ ಅವಮಾನ. ಕೆಲವು ವರ್ಗದ ವ್ಯಾಪಾರಿಗಳಿಗೆ ಹೇರಳ ಲಾಭ. ಬಂಧುಗಳ ಮನೆಗೆ ಹಠಾತ್ ಭೇಟಿ. ಗಣೇಶ ಅಷ್ಟಕ, ರಾಮರಕ್ಷಾ ಸ್ತೋತ್ರ ನವಗ್ರಹ ಮಂಗಲಾಷ್ಟಕ ಓದಿ.

೪. ಕರ್ಕಾಟಕ:

ಉದ್ಯೋಗಸ್ಥರಿಗೆ ಸೌಲಭ್ಯಗಳ ಹೆಚ್ಚಳ.  ಉದ್ಯಮಗಳಿಗೆ ಸರಕಾರಿ ಸಬ್ಸಿಡಿ ಕೈಸೇರಲು ವಿಳಂಬ. ಸರಕಾರಿ  ಪುಕ್ಕಟೆ ಆಮಿಷಗಳಿಗೆ‌ ಬಲಿಯಾಗದಿರಿ. ಮಹಿಳೆಯರ ಸ್ವೋದ್ಯೋಗ  ಉತ್ಪನ್ನಗಳಿಗೆ ಕೀರ್ತಿ. ಕುತಂತ್ರಿಗಳ ಪಿತೂರಿಗೆ ಸೋಲು. ಸಂಕಷ್ಟನಾಶನ ಗಣೇಶ ಸ್ತೋತ್ರ, ದತ್ತಾತ್ರೇಯ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.


೫.ಸಿಂಹ:

  ಉದ್ಯೋಗಸ್ಥರಿಗೆ ಘಟಕದ‌ ನೇತೃತ್ವ ಲಭ್ಯ. ಉದ್ಯಮದ ಪರಿಸರಕ್ಕೆ ಹೊಸ ರೂಪ. ಕುಟುಂಬದ ಮನೆಯಲ್ಲಿ ದೇವತಾರಾಧನೆ. ಹಿರಿಯರು, ಗೃಹಿಣಿಯರು, ಮಕ್ಕಳು ಎಲ್ಲರಿಗೂ ಉತ್ತಮ ಆರೋಗ್ಯ. ವ್ಯವಹಾರದ ನಿಮಿತ್ತ ಸಣ್ಣ ಪ್ರಯಾಣ. ಗಣಪತಿ ಅಥರ್ವಶೀರ್ಷ, ರಾಮ ಭುಜಂಗಪ್ರಯಾತ ಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ.


೬ ಕನ್ಯಾ:

  ಹೊಸ ವ್ಯವಹಾರದಲ್ಲಿ ಮುನ್ನಡೆ.  ಹಿರಿಯರ ಆಸ್ತಿಯಲ್ಲಿ ಕೃಷಿಯ ಕಡೆಗೆ ಗಮನ. ಪಾಲುದಾರಿಕೆ ಉದ್ಯಮ ಮುನ್ನಡೆ. ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ. ಸಂಸಾರಿಗಳಿಗೆ ಅಧ್ಯಾತ್ಮ ಸಾಧನೆಗೆ ಅನುಕೂಲ. ಗಣೇಶ ಕವಚ, ದತ್ತಪಂಜರ ಸ್ತೋತ್ರ, ಸೂರ್ಯಮಂಡಲ ಸ್ತೋತ್ರ ಓದಿ. 


೭.ತುಲಾ:

  ಅಕಾರಣವಾಗಿ ಪ್ರೀತಿ ತೋರುವವರ ಬಗೆಗೆ ಎಚ್ಚರ. ಪೈಪೋಟಿ ಎದುರಿಸಲು ಉದ್ಯಮಿಗಳ ಸಿದ್ಧತೆ. ಉದ್ಯೋಗಕ್ಕಾಗಿ ಕಾಯುತ್ತಿರುವವರಿಗೆ  ಮಾರ್ಗದರ್ಶನ ಮಾಡುವ ಅವಕಾಶ. ಲೇವಾದೇವಿ ವ್ಯವಹಾರದಿಂದ ದೂರವಿರಿ. ಗಣೇಶ ದ್ವಾದಶನಾಮ ಸ್ತೋತ್ರ, ವಿಷ್ಣು ಸಹಸ್ರನಾಮ, ನವಗ್ರಹ ಸ್ತೋತ್ರ ಓದಿ.

೮. ವೃಶ್ಚಿಕ:

 ಪರಿಸ್ಥಿತಿಯ ಸದುಪಯೋಗ ಪಡೆಯುವ ಪ್ರಯತ್ನ. ಉದ್ಯೋಗಸ್ಥರ ಸ್ಥಾನ ಗೌರವ ಅಬಾಧಿತ. ಸರಕಾರಿ ಅಧಿಕಾರಿಗಳಿಗೆ ಕೆಲಸದ ಹೊರೆಯ ಚಿಂತೆ. ರಾಜಕಾರಣಿಗಳಿಗೆ ಕೊಂಚ ಇಕ್ಕಟ್ಟಿನ ಪರಿಸ್ಥಿತಿ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಗಣಪತಿ ಅಥರ್ವಶೀರ್ಷ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ಮಹಿಷಮರ್ದಿನಿ ಸ್ತೋತ್ರ ಓದಿ.

೯. ಧನು:

 ಉದ್ಯೋಗ ಘಟಕದ ಕಾರ್ಯ  ಸುಧಾರಣೆಯ ಹೊಣೆಗಾರಿಕೆ. ಉದ್ಯಮದ ವೈವಿಧ್ಯೀಕರಣ ಕ್ರಮ ಮುನ್ನಡೆ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ಸಿಗದಂತೆ ಅಡ್ಡಗಾಲು. ಮಕ್ಕಳ ಅಧ್ಯಯನಾಸಕ್ತಿ ಬೆಳೆಸಲು ಪ್ರಯತ್ನ. ರಾತ್ರಿ ಪ್ರಯಾಷ ಮಾಡದಿರುವುದು ಒಳ್ಳೆಯದು. ಗಣೇಶ ಕವಚ, ಶಿವಾಷ್ಟೋತ್ತರ ಶತನಾಮ ಸ್ತೋತ್ರ , ದೇವೀಕವಚ ಓದಿ.


೧೦. ಮಕರ:
  ಕಾರ್ಯಸಾಮರ್ಥ್ಯ ಪರೀಕ್ಷೆಗಳಲ್ಲಿ  ವಿಜಯ. ಉದ್ಯಮಿಗಳಿಗೆ ಹಠಾತ್ ನಷ್ಟವಾಗುವ ಸಾಧ್ಯತೆ. ಹಿರಿಯರ, ಮಕ್ಕಳ ಆರೋಗ್ಯ ಸುಧಾರಣೆ. ದೀರ್ಘಾವಧಿ ಹೂಡಿಕೆಯಲ್ಲಿ ಲಾಭ. ದಿಢೀರ್ ಲಾಭದ ಆಮಿಷದಿಂದ ದೂರವಿರಿ. ಗಣೇಶ ಕಬಚ, ದತ್ತಾತ್ರೇಯ ಸ್ತೋತ್ರ, ಶನಿಸ್ತೋತ್ರ ಓದಿ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಹನುಮಾನ್ ಚಾಲೀಸಾ ಓದಿ

೧೧.ಕುಂಭ:

  ಕೆಲಸ, ಕಾರ್ಯಗಳು ಸುಗಮ. ಉದ್ಯೋಗಸ್ಥರಿಗೆ ಯಥಾರೀತಿಯ ಅನುಭವ. ಸರಕಾರಿ ನೌಕರರಿಗೆ ಅಧಿಕ ಕೆಲಸದ ಚಿಂತೆ. ಶೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆಯಿಂದ ಲಾಭ. ಸಂಗೀತ, ನೃತ್ಯ ಕಲೆಗಳನ್ನು ಅಭ್ಯಾಸ ಮಾಡುವವರಿಗೆ ಸಂತಸ. ವ್ಯವಹಾರದ ನಿಮಿತ್ತ ಸಣ್ಣ ಪ್ರಯಾಣ ಸಂಭವ. ಗಣೇಶ ಪಂಚರತ್ನ, ನರಸಿಂಹ ಸ್ತೋತ್ರ ಶನಿಸ್ತೋತ್ರ ಓದಿ.


೧೨. ಮೀನ:

ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾರೂಪದ ಕಾರ್ಯಗಳು ಯಶಸ್ವಿ. ಪುನರಾರಂಭಗೊಂಡ ಗಣೇಶ ಮುನ್ನಡೆ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಮಕ್ಕಳ ಶೈಕ್ಚಣಿಕ‌ ಸಾಧನೆಯಿಂದ ಹರ್ಷ. ಗಣಪತಿ ಅಥರ್ವಶೀರ್ಷ, ವಿಷ್ಷು ಸಹಸ್ರನಾಮ, ಶನಿಸ್ತೋತ್ರ ಓದಿ.