ದಿನ ಭವಿಷ್ಯ

29-06-2025

Jun 29, 2025 - 03:00
ದಿನ ಭವಿಷ್ಯ


                 ಜ್ಯೋತಿರ್ಮಯ

ಅದೃಷ್ಟ ಸಂಖ್ಯೆ  2

೧.ಮೇಷ:

 ಕೊಂಚ  ತಿರುಗಾಟದ ಸಾಧ್ಯತೆ. ಪರಿಶ್ರಮಕ್ಕೆ ತಕ್ಕ ಪ್ರತಿಫಲದ ಭರವಸೆ. ಉದ್ಯೋಗಸ್ಥ ಮಹಿಳೆಯರಿಂದ ವಿರಾಮದ ಸದುಪಯೋಗ. ಆಪ್ತರಿಂದ ಅಯಾಚಿತ ನೆರವು ಲಭ್ಯ. ಹಿರಿಯರ  ಆರೋಗ್ಯದ ಕಡೆಗೆ ಗಮನ ಇರಲಿ. ಮನೆಗೆ ಅತಿಥಿಗಳ ಆಗಮನ. ಗಣೇಶ ಕವಚ, ವಿಷ್ಣು ಸಹಸ್ರನಾಮ, ಶನಿಮಹಾತ್ಮೆಓದಿ.

೨.ವೃಷಭ:

ತಕ್ಕಮಟ್ಟಿಗೆ ನೆಮ್ಮದಿಯ ದಿನ. ಸಂಸಾರದ ಆವಶ್ಯಕತೆಗತ್ತ ಗಮನ. ಸರಕಾರಿ ಅಧಿಕಾರಿಗಳಿಗೆ ವಿರಾಮದಲ್ಲೂ ಒತ್ತಡ. ಉದ್ಯಮಗಳಲ್ಲಿ ಉತ್ಪಾದನೆ ಹೆಚ್ಚಳ. ಹತ್ತಿರದ ದೇವತಾ ಸಾನ್ನಿಧ್ಯಕ್ಕೆ  ಭೇಟಿ. ಗಣಪತಿ ಅಥರ್ವಶೀರ್ಷ,  ರಾಮರಕ್ಷಾ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.


೩. ಮಿಥುನ:

  ಅಪವಾದಕ್ಕೆ ಗುರಿತಾಗದಂತೆ ಎಚ್ಚರ ವಹಿಸಿ. ಬಂಧುವರ್ಗದೊಳಗಿನ ಹಿತಶತ್ರುಗಳಿಂದ ತೊಂದರೆ. ಉದ್ಯಮದಲ್ಲಿ  ಪ್ರಗತಿ ತೃಪ್ತಿಕರ. ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣದ ಸಾಧ್ಯತೆ. ಸಂಗಾತಿಗೆ ಮನಸ್ಥೈರ್ಯ ತುಂಬಲು ಪ್ರಯತ್ನ. ಗಣೇಶ ಸ್ತೋತ್ರ, ಶಿವಸಹಸ್ರನಾಮ,ಆದಿತ್ಯ ಹೃದಯ ಓದಿ.


೪.ಕರ್ಕಾಟಕ:

  ವಿರಾಮವಾಗಿರುವುದರಿಂದ ಸ್ವಂತ ಕಾರ್ಯಗಳತ್ತ ಲಜ್ಷ್ಯ. ಉತ್ಪಾದನೆಗಳಲ್ಲಿ   ವೈವಿಧ್ಯ ಕಾಯ್ದುಕೊಳ್ಳುವ ಪ್ರಯತ್ನ. ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ವೃದ್ಧಿ. ಅಲ್ಪಾವಧಿ ಹೂಡಿಕೆ ಬೇಡ. ಎಲ್ಲ ಮನೆಮಂದಿಗೂ ಉಲ್ಲಾಸದ ವಾತಾವರಣ. ಗಣಪತಿ ಅಥರ್ವಶೀರ್ಷ, ಸುಬ್ರಹ್ಮಣ್ಯ ಭುಜಂಗಸ್ತೋತ್ರ, ಅನ್ನಪೂರ್ಣಾ ಸ್ತೋತ್ರ ಓದಿ.


೫_ಸಿಂಹ:

  ವ್ಯವಹಾರಸ್ಥರಿಗೆ ಶುಭವಾರ್ತೆ. ಹೊಸ ಪರಿಚಯಸ್ಥರ ಸಹಾಯದಿಂದ  ವ್ಯಾಪಾರ ವೃದ್ಧಿ. ಕಟ್ಟಡ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ. ಪಾಲುದಾರರೊಡನೆ ಕುಶಲವಾರ್ತೆ. ಮನೆಯಲ್ಲಿ ಮಂಗಲ ಕಾರ್ಯದ ಸಿದ್ಧತೆ.  ಗಣೇಶ ಪಂಚರತ್ನ, ನರಸಿಂಹ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.


೬.ಕನ್ಯಾ:

ಶಾಂತಿ,ಸಮಾಧಾನದ ಕ್ಷಣಗಳು. ಆತ್ಮೀಯರ ಭೇಟಿಯಿಂದ ಹರ್ಷ. ಸಾಂಸಾರಿಕ ಕ್ಷೇತ್ರದಲ್ಲಿ  ನೆಮ್ಮದಿ. ಉದ್ಯೋಗಾಸಕ್ತರಿಗೆ ಉತ್ತಮ ಅವಕಾಶಗಳು. ಕೃಷಿ ಕ್ಷೇತ್ರದಲ್ಲಿ ಒಳ್ಳೆಯ ಪ್ರತಿಫಲ.. 
ಗಣೇಶ ದ್ವಾದಶನಾಮ ಸ್ತೋತ್ರ, ಶಿವಪಂಚಾಕ್ಷರ ಸ್ತೋತ್ರ, ಗುರುಸ್ತೋತ್ರ ಓದಿ.

೭ತುಲಾ:

ಎಲ್ಲ ಸಮಸ್ಯೆಗಳಿಂದ ಮುಕ್ತಿ .ಸಮಾಜದಲ್ಲಿ ಗೌರವ.  ಅಕಸ್ಮಾತ್ ಧನಾಗಮ. ಗೃಹಾಲಂಕಾರಕ್ಕೆ ಧನವ್ಯಯ. ಕುಶಲಕರ್ಮಿಗಳ ಕೃತಿಗಳಿಗೆ ಉತ್ತಮ ಬೇಡಿಕೆ. ಸಂಗೀತ, ಕೀರ್ತನೆ, ಭಜನೆ ಶ್ರವಣದಿಂದ ಸಮಾಧಾನ‌. ಗಣೇಶ ಅಷ್ಟಕ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ದೇವೀಸ್ತೋತ್ರ ಓದಿ.


೮.ವೃಶ್ಚಿಕ:

 ಕುಟುಂಬದಲ್ಲಿ ಸಾಮರಸ್ಯ ಸ್ಥಾಪನೆ. ವಿದ್ವತ್ತು, ಪ್ರತಿಭೆಗೆ ಗೌರವ ಪ್ರಾಪ್ತಿ. ಉತ್ಪನ್ನಗಳ ಗುಣಮಟ್ಟಕ್ಕೆ ಜನರಿಂದ ಶ್ಲಾಘನೆ. ಕುಶಲಕರ್ಮಿಗಳಿಗೆ, ಹೊಲಿಗೆ ಕೆಲಸ ಬಲ್ಲವರಿಗೆ ಉದ್ಯೋಗಾವಕಾಶ. ಗಣೇಶ ಪಂಚರತ್ನ. ದತ್ತಾತ್ರೇಯ ಸ್ತೋತ್ರ, ಆಂಜನೇಯ ಸ್ತೋತ್ರ ಓದಿ.


೯. ಧನು:

  ಹಿತೈಷಿಗಳಿಂದ  ಆವಶ್ಯಕತೆಗೆ ತಕ್ಕಂತೆ ಸಹಾಯ. ಸಮಾಜದಲ್ಲಿ ಗೌರವ, ಸದಭಿಪ್ರಾಯಕ್ಕೆ ಪಾತ್ರರಾಗುವಿರಿ.  ಸಣ್ಣ ಪ್ರಮಾಣದ  ಉದ್ಯಮಗಳ ಅಭಿವೃದ್ಧಿ. ಹೈನುಗಾರಿಕೆ, ಜೇನು ವ್ಯವಸಾಯದಲ್ಲಿ ಆಸಕ್ತಿ. ಬಾಳ ಸಂಗಾತಿಯ ಆರೋಗ್ಯ ಸುಧಾರಣೆ‌. ಗಣೇಶ  ಅಷ್ಟಕ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ಗುರುಸ್ತೋತ್ರ ಓದಿ.


೧೦. ಮಕರ:
 ಮಹಿಳಾ ಉದ್ಯೋಗಿಗಳಿಗೆ ಅನುಕೂಲದ ದಿನ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ನಿವೇಶನ ಖರೀದಿ- ಮಾರಾಟ ವ್ಯವಹಾರಸ್ಥರಿಗೆ  ಅನುಕೂಲ. ಕೃಷ್ಯುತ್ಪನ್ನಗಳ ಮಾರಾಟದಿಂದ ಲಾಭ. ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ. ಗಣೇಶ ಪಂಚರತ್ನ, ಶಿವಪಂಚಾಕ್ಷರ ಸ್ತೋತ್ರ,  ಹನುಮಾನ್ ಚಾಲೀಸಾ ಓದಿ.

೧೧.ಕುಂಭ:

 ಲಾಭದಾಯಕ ಯೋಜನೆಗಳಲ್ಲಿ ಹೂಡಿಕೆ. ಉದ್ಯಮದಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ಊರಿನ ಬಂಧುಗಳ  ಆಗಮನ. ಸೇವಾಕಾರ್ಯಗಳಲ್ಲಿ ಕೈಜೋಡಿಸಲು ಎಲ್ಲರ ಪೂರ್ಣ ಸಹಕಾರ. ಮುದ್ರಣ ಸಾಮಗ್ರಿ ವಿತರಕರ ವ್ಯಾಪಾರ ವೃದ್ಧಿ. ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.

೧೨.ಮೀನ:

ಹಲವು ಶುಭಫಲಗಳ ದಿನ. ಹಳೆಯ ಪಾಲುದಾರರೊಂದಿಗೆ ಮಿಲನ. ಹಿರಿಯ ಉದ್ಯಮಿಯ ಪರಿಚಯಲಾಭ. ಅಪರಿಚಿತ  ವ್ಯಕ್ತಿಗಳಿಂದ  ಅನಿರೀಕ್ಷಿತ ಸಹಾಯ. ವ್ಯವಹಾರ ಸಂಬಂಧ ರಾಜಕಾರಣಿಯ ಭೇಟಿ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ದೇವೀಸ್ತೋತ್ರ. ಓದಿ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.