ದಿನ ಭವಿಷ್ಯ

24-07-2025

Jul 24, 2025 - 03:00
ದಿನ ಭವಿಷ್ಯ

                 ಜ್ಯೋತಿರ್ಮಯ

ಅದೃಷ್ಟ ಸಂಖ್ಯೆ  6

೧. ಮೇಷ:

  ಮಾನಸಿಕ ತುಮುಲದಿಂದ ಹೊರಬರಲು ಉದ್ಯೋಗಸ್ಥರ ಪ್ರಯತ್ನ.   ಸಹೋದ್ಯೋಗಿಗಳಿಗೆ ಮಾರ್ಗದರ್ಶನ. ನಿರ್ಮಾಣ ಸಂಸ್ಥೆ ನೌಕರರಿಗೆ ಕೊಂಚ ಸಮಾಧಾನ. ಸಂಸಾರ ಸುಖ, ಆರೋಗ್ಯ ಉತ್ತಮ. ವಿದೇಶೀ ಮೂಲದಿಂದ ಧನಾಗಮದ ಸಾಧ್ಯತೆ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.


೨. ವೃಷಭ:

  ಸುಗಮವಾದ ಹಣಕಾಸು ವ್ಯವಹಾರ. ಸರಕಾರಿ  ನೌಕರರಿಗೆ  ವರ್ಗಾವಣೆಯ ಸೂಚನೆ. ಮನೆಯಲ್ಲಿ  ನೆಮ್ಮದಿಯ ವಾತಾವರಣ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ಕೇಟರಿಂಗ್ ವ್ಯವಹಾರಸ್ಥರಿಗೆ ಸಮಯ ಪಾಲನೆಯ ಸವಾಲು. ಗಣಪತಿ ಅಥರ್ವಶೀರ್ಷ, ರಾಮರಕ್ಷಾ ಸ್ತೋತ್ರ, ಮಹಾಲಕ್ಷ್ಮಿ ಅಷ್ಟಕ ಓದಿ.


೩ಮಿಥುನ:

 ಗಟ್ಟಿ ಮನಸ್ಸಿನಿಂದ ಮಾಡುವ ಪ್ರಯತ್ನಕ್ಕೆ ಜಯ. ಉದ್ಯೋಗಸ್ಥರ  ಕಾರ್ಯ ನಿರ್ವಹಣೆ  ನಿರಾತಂಕ. ವ್ಯವಹಾರಸ್ಥರಿಗೆ ತಾತ್ಕಾಲಿಕ ತೊಂದರೆ. ವಾಹನ ಚಾಲನೆಯಲ್ಲಿ ಎಚ್ಚರ. ಗೃಹಿಣಿಯರು,ಮಕ್ಕಳಿಗೆ ಸಂತೋಷ. ಗಣೇಶ ದ್ವಾದಶನಾಮ ಸ್ತೋತ್ರ, ವಿಷ್ಣು ಸಹಸ್ರನಾಮ, ನವಗ್ರಹ ಸ್ತೋತ್ರ ಓದಿ.


೪. ಕರ್ಕಾಟಕ:


  ಉದ್ಯೋಗ ಸ್ಥಾನದಲ್ಲಿ ಮಾಮೂಲು ವಾತಾವರಣ. ಪಾಲುದಾರಿಕೆ ವ್ಯವಹಾರ ತೃಪ್ತಿಕರ. ಭೂಮಿ  ವ್ಯವಹಾರ ಮಾಡುವವರಿಗೆ‌  ಉತ್ತಮ ಲಾಭ. ವ್ಯವಹಾರ ಸಂಬಂಧ ಸಣ್ಣ ಪ್ರವಾಸ ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಅನುಕೂಲ. ಗಣಪತಿ ಅಥರ್ವಶೀರ್ಷ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ.
 


೫.ಸಿಂಹ:

  ಸ್ವಯಂ ಉದ್ಯೋಗಸ್ಥರಿಗೆ ದೈವಾನುಗ್ರಹ. ಉಡುಪು ತಯಾರಿ ಉದ್ದಿಮೆಯವರಿಗೆ ಅಪಾರ ಲಾಭ. ಹಿರಿಯರ ಯೋಗಕ್ಷೇಮ ವಿಚಾರಿಸಿ. ಗೃಹಿಣಿಯರ ಉದ್ಯಮಗಳಿಗೆ ಶುಭದಿನ. ಮುದ್ರಣ ವ್ಯವಹಾರದವರಿಗೆ ಅನುಕೂಲ. ಗಣೇಶ ಪಂಚರತ್ನ, ಶಿವಕವಚ, ನವಗ್ರಹ ಸ್ತೋತ್ರ ಓದಿ.

೬. ಕನ್ಯಾ:

 ಹಳೆಯ ಹೂಡಿಕೆಯಿಂದ ದೊಡ್ಡ ಮೊತ್ತ ಲಭ್ಯ.   ಉನ್ನತ ಉದ್ಯೋಗಸ್ಥರಿಗೆ. ಅಸಹಾಯಕರಿಗೆ ಸಹಾಯ ಮಾಡುವ ಯೋಗ. ಉದ್ಯೋಗಾಪೇಕ್ಷಿಗಳಿಗೆ ಯೋಗ್ಯ ಅವಕಾಶ ಗೋಚರ. ಮಕ್ಕಳಿಗೆ ಸಮಯದ ಸದುಪಯೋಗಕ್ಕೆ ಮಾರ್ಗದರ್ಶನ‌. ಗಣೇಶ ತ್ರಿಶತಿ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.

೭. ತುಲಾ:

  ಉದ್ಯೋಗ ಸ್ಥಾನದಲ್ಲಿ ಹೆಚ್ಚುವರಿ ಜವಾಬ್ದಾರಿ. ನಿವೇಶನ, ಮನೆ ಖರೀದಿ- ಮಾರಾಟ ವ್ಯವಹಾರಸ್ಥರಿಗೆ ಅನುಕೂಲ. ಕೃಷಿ ಉತ್ಪನ್ನ ಮಾರಾಟಗಾರರಿಗೆ  ತೃಪ್ತಿಕರ ಆದಾಯ. ಪಾಲುದಾರಿಕೆ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ಹಿರಿಯರಿಗೆ ಉಲ್ಲಾಸದವಾತಾವರಣ.  ಗಣೇಶ ಕವಚ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.


೮.ವೃಶ್ಚಿಕ:

 ಉದ್ಯೋಗ, ವ್ಯವಹಾರಗಳಲ್ಲಿ  ಸಮಾಧಾನ. ಮಾಲಿಕ- ನೌಕರರ ಬಾಂಧವ್ಯ ಸುಧಾರಣೆ. ಆಸ್ತಿ ಖರೀದಿ, ಮಾರಾಟ ವ್ಯವಹಾರಕ್ಕೆ ಅನುಕೂಲ. ಲೇವಾದೇವಿ ವ್ಯವಹಾರಸ್ಥರಿಗೆ  ಸ್ವಲ್ಪಮಟ್ಟಿನ ಲಾಭ. ಚಿನ್ನ, ಬೆಳ್ಳಿ ವ್ಯಾಪಾರಿಗಳಿಗೆ  ಉತ್ತಮ ಲಾಭ. ಗಣೇಶ ಕವಚ, ರಾಮರಕ್ಷಾ ಸ್ತೋತ್ರ, ಕನಕಧಾರಾ ಸ್ತೋತ್ರ ಓದಿ


೯.ಧನು:

 ಹೊಂದಾಣಿಕೆ,  ಕಾರ್ಯನಿಷ್ಠೆ ಜೊತೆಗೂಡಿ ಯಶಸ್ಸು. ಹಿತಶತ್ರುಗಳ ಬಗ್ಗೆ ಎಚ್ಚರಿಕೆ. ಕಾರ್ಯದಕ್ಷತೆಗೆ ಮೇಲಧಿಕಾರಿಗಳಿಂದ ಪ್ರಶಂಸೆ. ದೇವತಾರ್ಚನೆಯಲ್ಲಿ ಆಸಕ್ತಿ. ವ್ಯವಹಾರದಲ್ಲಿ ಎಡವದಂತೆ ಎಚ್ಚರ. ಮಕ್ಕಳ ಓದಿನತ್ತ ಗಮನವಿರಲಿ. ಸಂಕಷ್ಟಹರ ಗಣೇಶ ಸ್ತೋತ್ರ, ದಾರಿದ್ರ್ಯದಹನ ಶಿವಸ್ತೋತ್ರ, ಹನುಮಾನ್‌ ಚಾಲೀಸಾ ಓದಿ.


೧೦.ಮಕರ:

  ಉದ್ಯೋಗ ಸ್ಥಾನದಲ್ಲಿ ಸ್ವತಂತ್ರ ಜವಾಬ್ದಾರಿ. ಮನೆಮಂದಿಯ ಸಹಕಾರ,ಉತ್ತಮ. ಪಾಲುದಾರಿಕೆ ವ್ಯವಹಾರಸ್ಥರಿಗೆ ಕೊಂಚ ಹಿನ್ನಡೆ. ದ್ರವಪದಾರ್ಥ ವ್ಯಾಪಾರಿಗಳಿಗೆ ಅಧಿಕ ಲಾಭ. ಹೆಚ್ಚಿನವರಿಗೆ ಮಿಶ್ರಫಲ ಕೊಡುವ ದಿನ. ಗಣಪತಿ ಅಥರ್ವಶೀರ್ಷ, ಕಾರ್ತಿಕೇಯ ಸ್ತೋತ್ರ, ಗುರುಸ್ತೋತ್ರ ಓದಿ.


೧೧. ಕುಂಭ:

  ದಿನವಿಡೀ ಬಿಡುವಿಲ್ಲದ  ಚಟುವಟಿಕೆಗಳು. ಉದ್ಯೋಗ ರಂಗದಲ್ಲಿ ಹೆಚ್ಚು ಯಶಸ್ಸು. ಮುದ್ರಣ ಸಾಮಗ್ರಿ, ಸ್ಟೇಶನರಿ ವ್ಯಾಪಾರಿಗಳಿಗೆ ಅನುಕೂಲ ಹೊಸ ವ್ಯವಹಾರ ಆರಂಭಕ್ಕೆ ಸಿದ್ಧತೆ. ಗೃಹಿಣಿಯರ ಉದ್ಯಮಗಳ ಜನಪ್ರಿಯತೆ ವೃದ್ಧಿ. ಗಣೇಶ ಕವಚ, ವಿಷ್ಣು ಸಹಸ್ರನಾಮ, ಶನಿಮಹಾತ್ಮೆ ಓದಿ.

೧೨. ಮೀನ:

 ವ್ಯವಹಾರದ ಓಟಕ್ಕೆ ಸಣ್ಣ ತಡೆ. ಇಲಾಖೆಗಳಿಂದ ಅನುಕೂಲಕರ ಸ್ಪಂದನ. ಹಿರಿಯರ ಆರೋಗ್ಯದ ಕಡೆ ಗಮನವಿರಲಿ. ಮನೆಮಂದಿಯಿಂದ ವ್ಯವಹಾರದಲ್ಲಿ ಉತ್ತಮ ಸಹಕಾರ. ಸಾಮಾಜಿಕ ಕಾರ್ಯದ ಒತ್ತಡ. ಗಣಪತಿ ಅಥರ್ಬಶೀರ್ಷ, ದತ್ತಾತ್ರೇಯ ಸ್ತೋತ್ರ,ಶನಿಮಹಾತ್ಮೆ ಓದಿ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.