ದಿನ ಭವಿಷ್ಯ

06-08-2025

Aug 6, 2025 - 10:45
ದಿನ ಭವಿಷ್ಯ


ಅದೃಷ್ಟ ಸಂಖ್ಯೆ  6

೧.ಮೇಷ:

ಹಿತಕರ ಅನುಭವಗಳನ್ನು ನೀಡುವ ಬುಧವಾರ. ಪರಿಶ್ರಮಕ್ಕೆ ತಕ್ಕ ಪ್ರತಿಫಲದ ಭರವಸೆ. ಉದ್ಯೋಗ, ಉದ್ಯಮಗಳಲ್ಲಿ ಯಶಸ್ಸು. ಆಪ್ತರಿಂದ ಅಯಾಚಿತ ನೆರವು ಲಭ್ಯ. ಸಾರ್ವಜನಿಕ ವ್ಯಕ್ತಿಗಳ ನಡೆನುಡಿಯಲ್ಲಿ ಸಂಯಮ ಇರಲಿ. ಗಣೇಶ ಕವಚ, ವೆಂಕಟೇಶ್ವರ ಸ್ತೋತ್ರ, ಶನಿಮಹಾತ್ಮೆ ಓದಿ.

೨.ವೃಷಭ:

ಸುಮಾರಾಗಿ ಲಾಭದಾಯಕ ದಿನ. ಉದ್ಯೋಗದಲ್ಲಿ ಹೆಚ್ಚು ಸಂತೃಪ್ತಿ. ಸರಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಕೆಲಸದ ಒತ್ತಡ. ಉದ್ಯಮಗಳಲ್ಲಿ ಉತ್ಪಾದನೆ ಹೆಚ್ಚಳ. ಮಕ್ಕಳು ಸಾಕುಪ್ರಾಣಿಗಳಿಂದ ದೂರವಿರಲಿ. ಗಣೇಶ ಅಷ್ಟಕ, ಸುಬ್ರಹ್ಮಣ್ಯ ಭುಜಂಗ ಸ್ತೋತ್ರ, ಆದಿತ್ಯ ಹೃದಯ ಓದಿ.


೩. ಮಿಥುನ:

 ಆಮಿಷಗಳಿಂದ ದೂರವಿರಲು ಯತ್ನಿಸಿ.  ಉದ್ಯೋಗ ಸ್ಥಾನದಲ್ಲಿ ಎಲ್ಲರ ಸಹಕಾರ. ಉದ್ಯಮದಲ್ಲಿ  ಪ್ರಗತಿ ತೃಪ್ತಿಕರ. ದೂರಪ್ರಯಾಣಕ್ಕೆ ಪ್ರತಿಕೂಲ ಪರಿಸ್ಥಿತಿ. ನಕಾರಾತ್ಮಕ ಚಿಂತನೆ, ಮಾತುಗಳಿಗೆ ಎಡೆಗೊಡಬೇಡಿ. ಗಣಪತಿ ಅಥರ್ವಶೀರ್ಷ, ರಾಮರಕ್ಷಾ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.


೪.ಕರ್ಕಾಟಕ:
 ಸಣ್ಣ ಪ್ರಮಾಣದ ಯೋಜನೆಗಳುಗೆ ಸುದಿನ. ಉತ್ಪಾದನೆಗಳ ಗುಣಮಟ್ಟದಿಂದ ಉದ್ಯಮಕ್ಕೆ ಕೀರ್ತಿ. ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ವೃದ್ಧಿ. ಅಲ್ಪಾವಧಿ ಹೂಡಿಕೆ ಬೇಡ. ಕುಟುಂಬದಲ್ಲಿ ಆರೋಗ್ಯ, ಸಾಮರಸ್ಯ ವೃದ್ಧಿ. ಗಣೇಶ ಕವಚ, ನರಸಿಂಹ ಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ.


೫_ಸಿಂಹ:

  ಕೆಲವು ದಿಟ್ಟ ಹೆಜ್ಜೆಗಳನ್ನಿಡುವ ದಿನ. ಸ್ಪಷ್ಟ ಮಾತಿನಿಂದ ಗೌರವ ಪ್ರಾಪ್ತಿ. ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ನಿರ್ಣಾಯಕ ದಿನ. ನೂತನ ನಿವೇಶನ  ಖರೀದಿಗೆ ಚಿಂತನೆ. ಪ್ರಮುಖ ವ್ಯಕ್ತಿಯೊಬ್ಬರಿಗೆ ಅಪವಾದದಿಂದ ಮುಕ್ತಿ. ಗಣೇಶ ಪಂಚರತ್ನ, ದಾರಿದ್ರ್ಯದಹನ ಶಿವಸ್ತೋತ್ರ, ಗುರುಸ್ತೋತ್ರ ಓದಿ.


೬.ಕನ್ಯಾ:

ಕೌಟುಂಬಿಕ ಕ್ಷೇತ್ರದಲ್ಲಿ ಶಾಂತಿ, ನೆಮ್ಮದಿ. ಆತ್ಮೀಯರ ಭೇಟಿಯಿಂದ ಹರ್ಷ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಉದ್ಯೋಗಾಸಕ್ತರಿಗೆ  ಆಶಾದಾಯಕ ಅವಕಾಶಗಳು. ಸಣ್ಣ ಹೂಡಿಕೆಗಳಿಂದ ಲಾಭ. ಸಂಕಷ್ಟನಾಶನ ಗಣೇಶ ಸ್ತೋತ್ರ, ವಿಷ್ಣು ಸಹಸ್ರನಾಮ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.


೭ತುಲಾ:

ಎಲ್ಲ ಸಮಸ್ಯೆಗಳಿಗೂ ಸೂಕ್ತ ಪರಿಹಾರ. ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಸ್ಥಾನಮಾನ.  ಅಕಸ್ಮಾತ್ ಧನಾಗಮ. ಗೃಹಾಲಂಕಾರಕ್ಕೆ ಧನವ್ಯಯ. ಕುಶಲಕರ್ಮಿಗಳ ಕೃತಿಗಳಿಗೆ ಉತ್ತಮ ಬೇಡಿಕೆ. ಸಂಗೀತ, ಕೀರ್ತನೆ, ಭಜನೆ ಶ್ರವಣದಿಂದ ಸಮಾಧಾನ‌. ಗಣೇಶ ಕವಚ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ಮಹಿಷಮರ್ದಿನಿ ಸ್ತೋತ್ರ ಓದಿ.


೮.ವೃಶ್ಚಿಕ:

 ನ್ಯಾಯಾಲಯದಲ್ಲಿ ಜಯ. ಉದ್ಯೋಗ ಸ್ಥಾನದಲ್ಲಿ ಹಿರಿತನಕ್ಕೆ ಗೌರವ. ಉದ್ಯಮದ ವ್ಯಾಪ್ತಿ ಇನ್ನಷ್ಟು ವಿಸ್ತರಣೆ. ಉತ್ಪನ್ನಗಳ ಗುಣಮಟ್ಟಕ್ಕೆ ಜನರಿಂದ ಶ್ಲಾಘನೆ. ಗೃಹಿಣಿಯರ ಸ್ವಾವಲಂಬನೆ ಯೋಜನೆ  ಉನ್ನತ ಸ್ಥಿತಿಯಲ್ಲಿ. ಗಣಪತಿ ಅಥರ್ವಶೀರ್ಷ, ದೇವೀಕವಚ, ಗುರುಸ್ತೋತ್ರ ಓದಿ.

೯. ಧನು:

  ಆವಶ್ಯಕತೆಗೆ ತಕ್ಕಂತೆ ಒದಗಿ ಬರುವ ಸಹಾಯ. ಉದ್ಯೋಗ ಸ್ಥಾನದಲ್ಲಿ ಸಣ್ಣ ಪದೋನ್ನತಿ.  ಸಣ್ಣ ಪ್ರಮಾಣದ  ಉದ್ಯಮಗಳ ಅಭಿವೃದ್ಧಿ. ಹೈನುಗಾರಿಕೆ, ಜೇನು ವ್ಯವಸಾಯದಲ್ಲಿ ಆಸಕ್ತಿ. ಬಾಳ ಸಂಗಾತಿಯ ಆರೋಗ್ಯ ಸುಧಾರಣೆ‌. ಗಣೇಶ ಕವಚ, ಶಿವಪಂಚಾಕ್ಷರ ಸ್ತೋತ್ರ, ಲಕ್ಷ್ಮೀಸ್ತೋತ್ರ ಓದಿ.


೧೦. ಮಕರ:
  ಉದ್ಯೋಗ ಸ್ಥಾನದಲ್ಲಿ ಗೌರವ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ನಿವೇಶನ ಖರೀದಿ- ಮಾರಾಟ ವ್ಯವಹಾರಸ್ಥರಿಗೆ ಲಾಭ. ಕೃಷ್ಯುತ್ಪನ್ನಗಳಿಗೆ ಒಳ್ಳೆಯ ಬೇಡಿಕೆ. ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ. ಗಣೇಶ ಪಂಚರತ್ನ, ರಾಮ ಭುಜಂಗಪ್ರಯಾತ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.

೧೧.ಕುಂಭ:

 ಲಾಭದಾಯಕ ಯೋಜನೆಗಳಲ್ಲಿ ಹೂಡಿಕೆ. ಉದ್ಯಮದಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ದೂರದಲ್ಲಿರುವ ಬಂಧುಗಳ  ಭೇಟಿ.  ಮುದ್ರಣ ಸಾಮಗ್ರಿ ವಿತರಕರ ವ್ಯಾಪಾರ ವೃದ್ಧಿ. ಸಜ್ಜನರಿಗೆ ಸಹಾಯ ಮಾಡುವ ಅವಕಾಶ. ಗಣೇಶ ಸ್ತೋತ್ರ, ಶಿವಾಪರಾಧ ಕ್ಷಮಾಪಣ ಸ್ತೋತ್ರ, ಶನಿಮಹಾತ್ಮೆ ಓದಿ.

೧೨.ಮೀನ:

ಹಲವು ಶುಭಫಲಗಳ ದಿನ. ಉದ್ಯೋಗ ಸ್ಥಾನದಲ್ಲಿ ಕೀರ್ತಿ. ಸರಕಾರಿ ಕಚೇರಿಗಳಲ್ಲಿ ಅನುಕೂಲಕರ ಸ್ಪಂದನ.   ಅಪರಿಚಿತ  ವ್ಯಕ್ತಿಗಳಿಂದ  ಅನಿರೀಕ್ಷಿತ ಸಹಾಯ. ವ್ಯವಹಾರ ಸಂಬಂಧ ಮಾತುಕತೆ ಯಶಸ್ವಿ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.