ದಿನ ಭವಿಷ್ಯ
09-09-2025

ಜ್ಯೋತಿರ್ಮಯ
ಅದೃಷ್ಟ ಸಂಖ್ಯೆ 9
೧.ಮೇಷ:
ನಾವು ಎಣಿಸಿದಂತೆ ಯಾವುದೂ ಆಗುವುದಿಲ್ಲ ಎಂಬುದು ನೆನಪಿರಲಿ. ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ. ಉದ್ಯಮ, ವ್ಯವಹಾರದಲ್ಲಿ ಉತ್ತಮ ಲಾಭ. ದೂರದಲ್ಲಿರುವ ನೆಂಟರ ಆಗಮನ. ಅಧ್ಯಾತ್ಮದ ಕಡೆಗೆ ಒಲವು,ಆರೋಗ್ಯ ಉತ್ತಮ. ಗಣಪತಿ ಅಥರ್ವಶೀರ್ಷ, ಸುಬ್ರಹ್ಮಣ್ಯ ಸ್ತೋತ್ರ, ಶನಿ ಮಹಾತ್ಮೆ ಓದಿ.
೨.ವೃಷಭ:
ಕೆಲವೊಮ್ಮೆ ಬಯಸಿದ್ದೆಲ್ಲವೂ ಆಗುತ್ತದೆ. ಅಧಿಕಾರಿಗಳಿಗೆ ಇಷ್ಟಪಟ್ಟಲ್ಲಿಗೆ ವರ್ಗಾವಣೆ. ಉದ್ಯಮದ ಉತ್ಪನ್ನಗಳ ಗುಣಮಟ್ಟ ಸುಧಾರಣೆ. ಉದ್ಯೋಗಾಸಕ್ತರಿಗೆ ಅವಕಾಶಗಳು ಗೋಚರ. ಅವಿವಾಹಿತ ಹುಡುಗರಿಗೆ ಅನುರೂಪಿ ಕನ್ಯೆಯರೊಡನೆ ವಿವಾಹ ಯೋಗ. ಗಣೇಶ ಅಷ್ಟಕ, ದತ್ತಾತ್ರೇಯ ಸ್ತೋತ್ರ, ಋಣಮೋಚನ ಮಂಗಳ ಸ್ತೋತ್ರ ಓದಿ.
೩. ಮಿಥುನ:
ಬದಲಾದ ಸನ್ನಿವೇಶಕ್ಕೆ ಹೊಂದಿಕೊಂಡಿದ್ದೀರಿ. ಹೊಸ ಸಹೋದ್ಯೋಗಿಗಳಿಗೆ ಜವಾಬ್ದಾರಿ ಹಂಚಿಕೆ. ಸ್ವಂತ ಉದ್ಯಮಕ್ಕೆ ಎದುರಾಳಿಗಳಿಂದ ಸ್ಪರ್ಧೆ. ಪಿತ್ರಾರ್ಜಿತ ಆಸ್ತಿಯನ್ನು ಅನುಭವಿಸುವ ಯೋಗ. ದೇವತಾರ್ಚನೆ, ಧ್ಯಾನ, ಸತ್ಸಂಗದಲ್ಲಿ ಆಸಕ್ತಿ. ಗಣೇಶ ಪಂಚರತ್ನ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ರಾಹುಸ್ತೋತ್ರ ಓದಿ.
೪.ಕರ್ಕಾಟಕ:
ವದಂತಿಗಳಿಗೆ ತಲೆ ಕೆಡಿಸಿಕೊಳ್ಳಬೇಡಿ. ಯೋಗ್ಯರನ್ನು ಮೂಲೆಗೆ ತಳ್ಳುವ ಪ್ರಯತ್ನ ವಿಫಲ. ಉದ್ಯಮದ ನೌಕರರ ಯೋಗಕ್ಷೇಮಕ್ಕೆ ಯೋಜನೆ. ಖಾದಿ, ಗ್ರಾಮೋದ್ಯೋಗ ಬೆಳೆಸಲು ಆಸಕ್ತಿ. ಧ್ಯಾನ, ಭಜನೆ, ಸತ್ಸಂಗಗಳ ಕಡೆಗೆ ಒಲವು. ಗಣೇಶ ಕವಚ, ರಾಮರಕ್ಷಾ ಸ್ತೋತ್ರ, ಮಹಾಲಕ್ಷ್ಮಿ ಅಷ್ಟಕ ಓದಿ.
೫ ಸಿಂಹ:
ಉದ್ಯೋಗ ಸ್ಥಾನದ ಹೊಸ ವ್ಯವಸ್ಥೆಗೆ ಉತ್ತಮ ಸ್ಪಂದನ. ಉದ್ಯಮದ ಉತ್ಪನ್ನಗಳಿಗೆ ಹೊರಗಿನಿಂದ ಬೇಡಿಕೆ ಹೆಚ್ಚಳ. ಉತ್ತರದ ಕಡೆಯಿಂದ ಪ್ರೋತ್ಸಾಹಕರ ವಾರ್ತೆ. ಮಹಿಳೆಯರ ಗೃಹೋದ್ಯಮ ಯಶಸ್ಸಿನತ್ತ ಮುನ್ನಡೆ. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ. ಗಣೇಶ ಕವಚ, ನರಸಿಂಹ ಸ್ತೋತ್ರ, ಅನ್ನಪೂರ್ಣಾ ಸ್ತೋತ್ರ ಓದಿ.
೬.ಕನ್ಯಾ:
ವ್ಯವಹಾರದಲ್ಲಿ ದಿನಕ್ಕೊಂದು ಹೊಸ ಅನುಭವ. ಸರಕಾರಿ ಉದ್ಯೋಗಿಗಳಿಗೆ ಕೊಂಚ ಆತಂಕ. ಇಲೆಕ್ಟ್ರಾನಿಕ್ಸ್ ಉದ್ಯಮಗಳಿಗೆ ಅಧಿಕ ಬೇಡಿಕೆ. ಸ್ವಂತ ಉದ್ಯಮಗಳನ್ನು ಬೆಳೆಸಲು ಸರಕಾರದ ಪ್ರೋತ್ಸಾಹ. ವೃತ್ತಿ ಪರಿಣತಿ ವೃದ್ಧಿ ಪ್ರಯತ್ನ ಯಶಸ್ಸಿನತ್ತ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶಿವಪಂಚಾಕ್ಷರ ಸ್ತೋತ್ರ ಓದಿ.
೭ತುಲಾ:
ಭಾಗ್ಯದ ಬಾಗಿಲು ತೆರೆಯುವ ದಿನ. ಮನೋಬಲ ವೃದ್ಧಿಗೆ ಸಾಧನೆ ಮುಂದುವರಿಕೆ. ಉನ್ನತಿಗೇರಲು ಹಳಬರ ಮಾರ್ಗದರ್ಶನ. ಉದ್ಯೋಗ ಸ್ಥಾನಕ್ಕೆ ಗಣ್ಯ ವ್ಯಕ್ತಿಗಳ ಭೇಟಿ. ಮಕ್ಕಳ ಶೈಕ್ಷಣಿಕ ಸಾಧನೆಯಿಂದ ಆನಂದ. ಗಣೇಶ ಪಂಚರತ್ನ, ವೆಂಕಟೇಶ್ವರ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
೮.ವೃಶ್ಚಿಕ:
ಹೊಂದಾಣಿಕೆಯ ಮನೋಭಾವದಿಂದ ಯಶಸ್ಸು ಖಚಿತ. ಉದ್ಯೋಗ ಸ್ಥಾನದಲ್ಲಿ ತಾತ್ಕಾಲಿಕ ಹಿನ್ನಡೆ. ಉದ್ಯಮ ಸ್ಥಾನದಲ್ಲಿ ನಿಧಾನ ಪ್ರಗತಿ. ಪಾಲುದಾರಿಕೆ ವ್ಯವಹಾರದಲ್ಲಿ ಸಾಮಾನ್ಯಲಾಭ. ಉದ್ಯೋಗ ಅರಸುವ ಶಿಕ್ಷಿತರಿಗೆ ಶುಭ ಸಮಾಚಾರ. ಗಣೇಶ ದ್ವಾದಶನಾಮ ಸ್ತೋತ್ರ, ವಿಷ್ಣು ಸಹಸ್ರನಾಮ, ಆದಿತ್ಯ ಹೃದಯ ಓದಿ.
೯. ಧನು:
ಸುಖ- ಸಂತೋಷಗಳ ನಡುವಿನಲ್ಲಿ ನಿತ್ಯ ಹೋರಾಟ. ಉದ್ಯೋಗದಲ್ಲಿ ಯೋಗ್ಯತೆಗೆ ಸರಿಯಾದ ಸ್ಥಾನ ಲಭ್ಯ. ಗೃಹೋದ್ಯಮಕ್ಕೆ ಉತ್ತೇಜನದ ವಾತಾವರಣ. ಸ್ವಂತ ಮನೆ ಹೊಂದುವ ಕನಸು ನನಸಾಗುವ ಸೂಚನೆ. ಸಂಸಾರದಲ್ಲಿ ಪ್ರೇಮ, ವಿಶ್ವಾಸ ವೃದ್ಧಿ. ಗಣಪತಿ ಅಥರ್ವಶೀರ್ಷ, ದತ್ತಪಂಜರ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.
೧೦. ಮಕರ:
ಇಮ್ಮಡಿ ಉತ್ಸಾಹದೊಂದಿಗೆ ದಿನಾರಂಭ. ಉದ್ಯೋಗ ಸ್ಥಾನದಲ್ಲಿ ಹೊಸ ಜವಾಬ್ದಾರಿ. ಸಹೋದ್ಯಮದ ಸಂಸ್ಥೆಯ ಉತ್ಪಾದನೆ ವೃದ್ಧಿ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಜ್ಞಾನ ವೃದ್ಧಿಗೋಸ್ಕರ ಸ್ವಾಧ್ಯಾಯದತ್ತ ಗಮನ. ಗಣೇಶ ಕವಚ, ದೇವೀಸ್ತೋತ್ರ, ಹನುಮಾನ್ ಚಾಲೀಸಾ ಓದಿ.
೧೧.ಕುಂಭ:
ಮಾರ್ಗದರ್ಶನಕ್ಕಾಗಿ ಎಳೆಯರ ಕೋರಿಕೆ. ಉತ್ಪನ್ನಗಳ ವಿತರಣೆ ಜಾಲ ವಿಸ್ತರಣೆ. ಮುದ್ರಣ ಸಾಮಗ್ರಿಗಳು, ಸ್ಟೇಶನರಿ, ಶೋಕಿ ಸಾಮಗ್ರಿಗಳ ವಿತರಕರಿಗೆ ತರಾತುರಿ. ಬಂಧುಗಳ ಮನೆಯಲ್ಲಿ ಶುಭ ಸಮಾರಂಭ. ಶಿಕ್ಷಿತರಿಗೆ ಅವಕಾಶ ಅನ್ವೇಷಣೆಗೆ ಸಹಾಯ.ಗಣೇಶ ಕವಚ, ವಿಷ್ಣು ಸಹಸ್ರನಾಮ, ಶನಿಮಹಾತ್ಮೆ ಓದಿ.
೧೨.ಮೀನ:
ಕೆಲಸದ ಹೊರೆಯಿಂದ ದಿಗಿಲುಗೊಳ್ಳದಿರಿ. ಸಹೋದ್ಯೋಗಿಗಳಿಂದ ಸರ್ವವಿಧ ಸಹಾಯ. ಸರಕಾರಿ ಇಲಾಖೆಗಳಲ್ಲಿ ಸಕಾರಾತ್ಮಕ ಸ್ಪಂದನ. ಗೃಹೋದ್ಯಮಗಳ ಅಭಿವೃದ್ಧಿಗೆ ವಿನೂತನ ವ್ಯವಸ್ಥೆ. ಮನೆಮಂದಿಯೆಲ್ಲರ ಆರೋಗ್ಯ ಉತ್ತಮ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.