ದಿನ ಭವಿಷ್ಯ
14-10-2025

ಜ್ಯೋತಿರ್ಮಯ
ಅದೃಷ್ಟ ಸಂಖ್ಯೆ5
೧. ಮೇಷ:
ಭಗವಂತನ ಕೃಪೆಯಿಂದ ಇಂದು ಲಾಭವೇ ಅಧಿಕ. ಉದ್ಯೋಗದಲ್ಲಿ ತಕ್ಕಮಟ್ಟಿಗೆ ಆನಂದಾನುಭವ. ಬಹುಪಾಲು ಉದ್ಯಮಿಗಳಿಗೆ ಅಧಿಕ ಲಾಭ. ಶೇರು ಮಾರುಕಟ್ಟೆಯಲ್ಲಿ ಉತ್ತಮ ಲಾಭ. ದೇವತ
ಮನೆಯಲ್ಲಿ ಎಲ್ಲರಿಗೂ ಆರೋಗ್ಯದ ಅನುಭವ. ಗಣೇಶ ಕವಚ, ವಿಷ್ಷು ಸಹಸ್ರನಾಮ, ಶನಿಮಹಾತ್ಮೆ ಓದಿ.
೨. ವೃಷಭ:
ಎಲ್ಲ ಆದಾಯ ಮೂಲಗಳಲ್ಲೂ ತಡೆಯಿಲ್ಲದ ಅಭಿವೃದ್ಧಿ. ಉದ್ಯೋಗಸ್ಥರಿಗೆ ಶೀಘ್ರವಾಗಿ ಕಾರ್ಯ ಮುಗಿಸಲು ಒತ್ತಡ. ವಸ್ತ್ರ, ಸಿದ್ಧ ಉಡುಪುಗಳು ಹಾಗೂ ಪಾದರಕ್ಷೆ ವ್ಯಾಪಾರಿಗಳಿಗೆ ಲಾಭ. ಮಕ್ಕಳ ಅಧ್ಯಯನಾಸಕ್ತಿ ವೃದ್ಧಿಗೆ ಪ್ರೋತ್ಸಾಹ. ಸಂಸಾರದಲ್ಲಿ, ಪ್ರೀತಿ, ವಿಶ್ವಾಸ , ಸಾಮರಸ್ಯವೃದ್ಧಿ. ಗಣಪತಿ ಅಥರ್ವಶೀರ್ಷ, ರಾಮರಕ್ಷಾ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.
೩. ಮಿಥುನ:
ಅಕಾರಣ ಆತಂಕದಿಂದ ಬಿಡುಗಡೆ. ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫಲ ಉದ್ಯಮಿಗಳಿಗೆ ಕಾನೂನು ಸಂಬಂಧಿ ಸಮಸ್ಯೆಗಳಿಂದ ವಿಮೋಚನೆ. ಧಾರ್ಮಿಕ ಸಾಹಿತ್ಯ ಅಧ್ಯಯನ. ಮನೆಯವರ ಆರೋಗ್ಯ ಸುಧಾರಣೆ. ಗಣೇಶ ಅಷ್ಟಕ, ದುರ್ಗಾ ಸ್ತೋತ್ರ, ಆದಿತ್ಯ ಹೃದಯ ಓದಿ.
೪. ಕರ್ಕಾಟಕ:
ವೃದ್ಧಿಯಾದ ಕಾರ್ಯಸಾಮರ್ಥ್ಯದ ಫಲವಾಗಿ ಇನ್ನಷ್ಟು ಜವಾಬ್ದಾರಿಗಳು. ಉದ್ಯಮಗಳಲ್ಲಿ ಮಾಲಿಕರು ಮತ್ತು ನೌಕರರ ನಡುವೆ ಸಾಮರಸ್ಯ ವೃದ್ಧಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ಲಾಭ. ಪ್ರಾಪ್ತ ವಯಸ್ಕರಿಗೆ ಶೀಘ್ರ ವಿವಾಹದ ಯೋಗ. ವ್ಯವಹಾರದ ಸಂಬಂಧ ಸಣ್ಣ ಪ್ರಯಾಣ ಸಂಭವ. ಗಣೇಶ ಪಂಚರತ್ನ, ದಾರಿದ್ರ್ಯದಹನ ಶಿವಸ್ತೋತ್ರ, ಋಣಮೋಚನ ಮಂಗಳ ಸ್ತೋತ್ರ ಓದಿ.
೫. ಸಿಂಹ:
ಎಲ್ಲ ವಿಭಾಗಗಳಲ್ಲೂ ಯಶಸ್ವಿಯಾಗಿ ಕಾರ್ಯ ನಿರ್ವಹಣೆ. ಸರಕಾರಿ ನೌಕರರಿಗೆ ಸಮಾಧಾನದ ಜೊತೆಯಲ್ಲೇ ಆತಂಕದ ಭಾವ. ಸ್ವೋದ್ಯೋಗಿ ಮಹಿಳೆಯರಿಗೆ ಸರ್ವವಿಧದಲ್ಲೂ ಯಶಸ್ಸು. ಕೃಷಿ ಅಭಿವೃದ್ಧಿ ಕಾರ್ಯಗಳ ವೀಕ್ಷಣೆ. ಕುಟುಂಬದಲ್ಲಿ ಸರ್ವರಿಗೂ ಆರೋಗ್ಯ ವೃದ್ಧಿ. ಗಣಪತಿ ಅಥರ್ವಶೀರ್ಷ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ಮಹಿಷಮರ್ದಿನಿ ಸ್ತೋತ್ರ ಓದಿ.
೬. ಕನ್ಯಾ:
ಎಲ್ಲ ನಿಯೋಜಿತ ಕಾರ್ಯಗಳನ್ನು ಸಕಾಲದಲ್ಲಿ ಮುಗಿಸಿದ ತೃಪ್ತಿ. ಉದ್ಯೋಗದಲ್ಲಿ ಶಿಸ್ತುಗಾರಿಕೆಗಾಗಿ ಗೌರವ. ಸರಕಾರಿ ಅಧಿಕಾರಿಗಳಿಗೆ ಅಧಿಕ ಕೆಲಸದ ಹೊರೆ. ಉದ್ಯೋಗ ಅರಸುವವರಿಗೆ ಅವಕಾಶಗಳು ಗೋಚರ. ಸಂಸಾರದಲ್ಲಿ ಎಲ್ಲರ ಆರೋಗ್ಯ ಉತ್ತಮ. ಗಣೇಶ ಕವಚ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ನವಗ್ರಹ ಕವಚ ಓದಿ.
೭. ತುಲಾ:
ಅನಾರೋಗ್ಯದಿಂದ ಬಿಡುಗಡೆ..ಅನಾಯಾಸವಾಗಿ ಉದ್ಯೋಗ ನಿರ್ವಹಣೆ. ಸಣ್ಣ ಉದ್ಯಮ ಘಟಕಗಳಿಗೆ ಏಳಿಗೆಯ ಕಾಲ. ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಸಾಧ್ಯತೆ. ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ. ಗಣಪತಿ ಅಥರ್ವಶೀರ್ಷ, ನರಸಿಂಹ ಕವಚ, ಹನುಮಾನ್ ಚಾಲೀಸಾ ಓದಿ
೮. ವೃಶ್ಚಿಕ:
ಉಳಿದವರಿಗಿಂತ ನೀವೇ ಹೆಚ್ಚು ಭಾಗ್ಯವಂತರು. ವೈಯಕ್ತಿಕ ಬದುಕಿನಲ್ಲಿ ಎಲ್ಲ ಬಗೆಯ ಸಂತೃಪ್ತಿಯ ಅನುಭವ. ಉದ್ಯೋಗ, ವ್ಯವಹಾರ, ಎರಡರಲ್ಲೂ ಯಶಸ್ಸು. ದೀರ್ಘಾವಧಿ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ಗಣೇಶ ದ್ವಾದಶನಾಮ ಸ್ತೋತ್ರ, ಕಾರ್ತಿಕೇಯ ಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ.
೯. ಧನು:
ಜೀವನಕ್ಕೆ ಭದ್ರವಾದ ಆದಾಯದ ಮೂಲ ಪ್ರಾಪ್ತಿ. ಉದ್ಯೋಗ ಸ್ಥಾನದಲ್ಲಿ ಕಾರ್ಯಗಳು ನಿರಾತಂಕ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಯಥೇಚ್ಛ ಆದಾಯ .ಉತ್ತರದ ಬಂಧುಗಳಿಂದ ಶುಭ ಸಮಾಚಾರ. ಗುರುಸಮಾನರ ಆಗಮನದಿಂದ ಹರ್ಷ. ಗಣೇಶ ಅಷ್ಟೋತ್ತರ ಶತನಾಮ ಸ್ತೋತ್ರ, ಶಿವಪಂಚಾಕ್ಷರ ಸ್ತೋತ್ರ, ಕನಕಧಾರಾ ಸ್ಕೋತ್ರ ಓದಿ.
೧೦. ಮಕರ:
ನಿಯೋಜಿತ ಕಾರ್ಯಗಳು ನಿರ್ವಿಘ್ನವಾಗಿ ನಡೆದ ಸಮಾಧಾನ. ಉದ್ಯೋಗ ಸ್ಥಾನದಲ್ಲಿ ನಿಶ್ಚಿಂತೆಯ ವಾತಾವರಣ. ಕಟ್ಟಡ ನಿರ್ಮಾಪಕರಿಗೆ ಕೊನೆಯ ಹಂತದ ಕಾರ್ಯ ಮುಗಿಸುವ ತರಾತುರಿ. ವಸ್ತ್ರ, ಸಿದ್ಧ ಉಡುಪು, ಪಾದರಕ್ಷೆ ವ್ಯಾಪಾರಿಗಳಿಗೆ ಅಧಿಕ ಲಾಭ. ಕೇಟರಿಂಗ್ ವೃತ್ತಿಯವರಿಗೆ ಉತ್ತಮ ಲಾಭ. ಗಣಪತಿ ಅಥರ್ವಶೀರ್ಷ, ದಾರಿದ್ರ್ಯದಹನ ಶಿವಸ್ತೋತ್ರ, ನವಗ್ರಹ ಸ್ತೋತ್ರ ಓದಿ.
೧೧. ಕುಂಭ:
ಶೀಘ್ರ ಕಾರ್ಯ ಮುಗಿಸಲು ಪೂರಕವಾದ ವಾತಾವರಣ. ಉದ್ಯಮದ ಉತ್ಪನ್ನಗಳಿಗೆ ಎಲ್ಲೆಡೆಗಳಿಂದ ಬೇಡಿಕೆ. ಯಂತ್ರೋಪಕರಣ ಮತ್ತು ವಾಹನ ಬಿಡಿಭಾಗಗಳ ವ್ಯಾಪಾರಿಗಳಿಗೆ ಲಾಭ. ಗೃಹೋತ್ಪನ್ನಗಳ ಹೆಚ್ಚಿದ ಜನಪ್ರಿಯತೆ. ಸಂಸಾರದಲ್ಲಿ ಎಲ್ಲರ ನಡುವೆ ಪ್ರೀತಿ, ವಾತ್ಸಲ್ಯ, ಸಾಮರಸ್ಯ ಬೆಳವಣಿಗೆ. ಗಣೇಶ ಕವಚ, ವಿಷ್ಣು ಸಹಸ್ರನಾಮ, ಶನಿಮಹಾತ್ಮೆ ಓದಿ.
೧೨. ಮೀನ:
ಎಲ್ಲ ಕಾರ್ಯಗಳು ತೀವ್ರಗತಿಯಲ್ಲಿ ಮುಂದುವರಿಕೆ. ಕಾರ್ಯಕ್ಷೇತ್ರ ಇನ್ನಷ್ಟು ವಿಸ್ತರಣೆ. ಸರಕಾರಿ ಕಾರ್ಯಾಲಯಗಳಲ್ಲಿ ಹಿತಾನುಭವ. ಸಮಯಕ್ಕೆ ಸರಿಯಾದ ಸೇವೆಯಿಂದ ಗ್ರಾಹಕರಿಗೆ ಹರ್ಷ. ಪೂರಕ ವೃತ್ತಿಯ ಆಯ್ಕೆಯಲ್ಲಿ ಗೊಂದಲ.
ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.