ದಿನ ಭವಿಷ್ಯ
31-10-2025
ಜ್ಯೋತಿರ್ಮಯ.
ಅದೃಷ್ಟ ಸಂಖ್ಯೆ 4
ಮೇಷ:
ಪರಿಣಾಮವನ್ನು ಸರಿಯಾಗಿ ಊಹಿಸಿಕೊಂಡು ಕ್ರಿಯೆಗೆ ಇಳಿಯಿರಿ. ಹೆಚ್ಚುವರಿ ಆದಾಯದ ಮಾರ್ಗ ಗೋಚರ. ವಸ್ತ್ರೋದ್ಯಮ ಸಂಬಂಧಿ ವ್ಯವಹಾರದಲ್ಲಿ ಯಶಸ್ಸು. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ. ಸಾಂಸಾರಿಕವಾಗಿ ನೆಮ್ಮದಿಯ ಅನುಭವ. ಗಣೇಶ ಕವಚ, ವಿಷ್ಣು ಸಹಸ್ರನಾಮ, ಶನಿಮಹಾತ್ಮೆ ಓದಿ.
೨.ವೃಷಭ:
ನೀವಾಗಿ ಯಾವ ಜವಾಬ್ದಾರಿಯನ್ನೂ ಅಹ್ವಾನಿಸಬೇಡಿ. ಸಾಮಾಜಿಕ ಕಾರ್ಯಗಳಿಗೆ ಉದ್ಯಮಿಗಳ ಪ್ರೋತ್ಸಾಹ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಬಿಡುವಿಲ್ಲದ ವ್ಯಾಪಾರ.ಉಳಿತಾಯ ಏಜೆಂಟರಿಗೆ ಸಾಮಾನ್ಯ ಲಾಭ. ದೂರದ ಊರಿನಿಂದ ಬಂದ ವ್ಯವಹಾರ ಪ್ರಸ್ತಾವದಿಂದ ಅನುಕೂಲ. ಗಣಪತಿ ಅಥರ್ವಶೀರ್ಷ, ರಾಮರಕ್ಷಾ ಸ್ತೋತ್ರ, ದೇವೀಸ್ತೋತ್ರ ಓದಿ.
೩ಮಿಥುನ:
ಉದ್ಯೋಗ, ವ್ಯವಹಾರ ಎರಡರಲ್ಲೂ ಯಶಸ್ಸು. ಉದ್ಯಮಕ್ಕೆ ಎದುರಾದ ಸೌಲಭ್ಯಗಳ ಸಮಸ್ಯೆ ನಿವಾರಣೆ . ಹಿರಿಯರ ಮನೆಯಲ್ಲಿ ದೇವತಾ ಕಾರ್ಯ. ಸ್ವಾವಲಂಬಿ ಜೀವನದ ಕಡೆಗೆ ಒಲವು. ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ. ಗಣೇಶ ಅಷ್ಟಕ, ದತ್ತಾತ್ರೇಯ ಸ್ತೋತ್ರ, ಶನಿಸ್ತೋತ್ರ ಓದಿ.
೪. ಕರ್ಕಾಟಕ:
ಅಹಂಕಾರಿಗಳ ಚುಚ್ಚುಮಾತುಗಳಿಗೆ ಪ್ರತಿಕ್ರಿಯೆ ನೀಡದಿರಿ. ಸಣ್ಣ ಉದ್ಯಮಿಗಳಿಗೆ ತುಂಡು ಪುಢಾರಿಗಳ ಕಾಟ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಸೋದರಿಯ ವಿವಾಹ ನಿಶ್ಚಯ. ಪ್ರತಿಕೂಲ ಹವೆಯಿಂದ ಕೊಂಚ ತೊಂದರೆ. ಗಣೇಶ ಪಂಚರತ್ನ, ಸುಬ್ರಹ್ಮಣ್ಯ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
೫.ಸಿಂಹ:
ಉದ್ಯಮದ ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ. ಪಾಲುದಾರಿಕೆ ವ್ಯವಹಾರದಲ್ಲಿ ಅನುಕೂಲ. ಮೂಲಸೌಲಭ್ಯಗಳ ಸುಧಾರಣೆಗೆ ಪ್ರಯತ್ನ. ಸಂಸಾರದಲ್ಲಿ ಸಾಮರಸ್ಯ ವೃದ್ಧಿಯ ಲಕ್ಚಣ. ಗಣೇಶ ಕವಚ, ರಾಮ ಭುಜಂಗಪ್ರಯಾತ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.
೬.ಕನ್ಯಾ:
ಆಹಾರ- ವಿಹಾರಗಳಲ್ಲಿ ಸಂಯಮ ಪಾಲಿಸಿ. ವಾಹನ ಉದ್ಯಮಿಗಳಿಗೆ ಆದಾಯ ವೃದ್ಧಿ. ಸಟ್ಟಾ ವ್ಯವಹಾರದಲ್ಲಿ ನಷ್ಟ. ಪಾಲುದಾರಿಕೆ ಉದ್ಯಮದಲ್ಲಿ ನಿಧಾನ ಪ್ರಗತಿ. ಹಿರಿಯರ ಆರೋಗ್ಯ ಸ್ಥಿರವಾಗಿ ಸುಧಾರಣೆ. ಗಣೇಶ ದ್ವಾದಶನಾಮ ಸ್ತೋತ್ರ, ನರಸಿಂಹ ಸ್ತೋತ್ರ, ಲಕ್ಷ್ಮೀಸ್ತೋತ್ರ ಓದಿ.
೭. ತುಲಾ:
ದುಡಿಮೆಗೆ ತಕ್ಕ ಪ್ರತಿಫಲದ ಭರವಸೆ. ಹತ್ತಿರದ ತೀರ್ಥಕ್ಷೇತ್ರಕ್ಕೆ ಸಂದರ್ಶನ. ನೂತನ ನಿವೇಶನ ಖರೀದಿ ಮಾತುಕತೆ. ಮಹಿಳೆಯರ ನೇತೃತ್ವದ ಉದ್ಯಮಗಳಿಗೆ ಪ್ರಚಾರ. ಮಕ್ಕಳ ಶೈಕ್ಷಣಿಕ ಸಾಧನೆಯಿಂದ ಸಂತೃಪ್ತಿ. ಗಣೇಶ ಕವಚ, ಸುಬ್ರಹ್ಮಣ್ಯ ಭುಜಂಗ ಸ್ತೋತ್ರ, ಶನಿಸ್ತೋತ್ರ ಓದಿ.
೮.ವೃಶ್ಚಿಕ:
ಹೆಸರು ಕೆಡಿಸಲು ದುಷ್ಟರ ಪ್ರಯತ್ನ. ಖಾಸಗಿ ರಂಗದವರಿಗೆ ಸಾಮಾನ್ಯ ಪರಿಸ್ಥಿತಿ. ಯಂತ್ರೋಪಕರಣ ವ್ಯಾಪಾರಿಗಳಿಗೆ ಅದೃಷ್ಟ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ. ಮಕ್ಕಳ ಆರೋಗ್ಯದ ಕುರಿತು ಎಚ್ಚರ. ಗಣೇಶ ಕವಚ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ಅನ್ನಪೂರ್ಣಾ ಸ್ತೋತ್ರ ಓದಿ.
೯.ಧನು:
ಕಲ್ಪನೆಗಳನ್ನು ಸಾಕಾರಗೊಳಿಸುವ ಯತ್ನಕ್ಕೆ ವಿಘ್ನ. ರಿಯಲ್ ಎಸ್ಟೇಟ್ ವ್ಯವಹಾರಸ್ಥರಿಗೆ ಹಿನ್ನಡೆ. ಉದ್ಯೋಗಾಸಕ್ತ ಶಿಕ್ಷಿತರಿಗೆ ಸದವಕಾಶ. ಗೃಹಿಣಿಯರ ಸ್ವೋದ್ಯೋಗ ಯೋಜನೆಗಳಿಗೆ ಲಾಭ. ವ್ಯವಹಾರದ ಸಂಬಂಧ ಪ್ರಮುಖ ವ್ಯಕ್ತಿಯ ಭೇಟಿ. ಗಣೇಶ ಪಂಚರತ್ನ, ವಿಷ್ಣು ಸಹಸ್ರನಾಮ, ನವಗ್ರಹ ಮಂಗಲಾಷ್ಟಕ ಓದಿ.
೧೦.ಮಕರ:
ವಸ್ತ್ರ, ಸಿದ್ಧ ಉಡುಪು, ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ಹೇರಳ ಲಾಭ. ಕನ್ಯಾರ್ಥಿಗಳಿಗೆ ನಿರಾಶೆಯ ಸನ್ನಿವೇಶ. ಹಳೆಯ ಒಡನಾಡಿಗಳ ಸಂಪರ್ಕ. ಅನ್ಯಾಯ ಮಾಡಿದವರ ವಿರುದ್ಧ ಸೇಡಿನ ಭಾವನೆ ಬೇಡ. ಅವಕಾಶ ವಂಚಿತರಿಗೆ ಸಹಾಯ..
ಗಣೇಶ ಕವಚ, ದತ್ತಪಂಜರ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.
೧೧. ಕುಂಭ:
ನಷ್ಟದಲ್ಲಿರುವ ಘಟಕಕ್ಕೆ ಕಾಯಕಲ್ಪ. ಗ್ರಾಹಕರ ಅಪೇಕ್ಷೆಗೆ ಸರಿಯಾಗಿ ಸ್ಪಂದನ. ಸಮಾಜ ಸೇವಾಕಾರ್ಯಗಳಿಗೆ ಮತ್ತಷ್ಟು ಅವಕಾಶಗಳು. ಬಂಗಾರದ ಕೆಲಸ ಬಲ್ಲವರಿಗೆ ಸದವಕಾಶ. ದೇವತಾ ಕಾರ್ಯದಲ್ಲಿ ಭಾಗಿ. ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.
೧೨. ಮೀನ:
ಸರಕಾರಿ ಕಾರ್ಯಾಲಯಗಳಲ್ಲಿ ಸಾಮಾನ್ಯ ಅನುಭವ. ಭವಿಷ್ಯದ ಯೋಜನೆಗಳ ಅನುಷ್ಠಾನ ಆರಂಭ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆ. ಪೂರ್ವದಿಕ್ಕಿನಿಂದ ಹೊಸ ವ್ಯವಹಾರ ಪ್ರಸ್ತಾವ. ಗುರುಸಮಾನರ ಸಲಹೆ ಪಾಲನೆಯಿಂದ ಲಾಭ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.


