ದಿನ ಭವಿಷ್ಯ
07-11-2025
ಜ್ಯೋತಿರ್ಮಯ
ಅದೃಷ್ಟ ಸಂಖ್ಯೆ 7
೧.ಮೇಷ:
ದೈವಸಂಕಲ್ಪಕ್ಕೆ ಮಿಗಿಲಾದುದು ಯಾವುದೂ ಇಲ್ಲ. ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ. ಉದ್ಯಮ, ವ್ಯವಹಾರದಲ್ಲಿ ಉತ್ತಮ ಲಾಭ. ದೂರದಲ್ಲಿರುವ ನೆಂಟರ ಆಗಮನ. ಅಧ್ಯಾತ್ಮದ ಕಡೆಗೆ ಒಲವು,ಆರೋಗ್ಯ ಉತ್ತಮ. ಗಣೇಶ ದ್ವಾದಶನಾಮ ಸ್ತೋತ್ರ, ವಿಷ್ಣು ಸಹಸ್ರನಾಮ, ಶನಿಮಹಾತ್ಮೆ ಓದಿ.
೨.ವೃಷಭ:
ನಿಮ್ಮ ಪ್ರಾರ್ಥನೆ, ದೈವಸಂಕಲ್ಪ ಒಂದುಗೂಡಿದ ಕ್ಷಣ. ಅಧಿಕಾರಿಗಳಿಗೆ ಇಷ್ಟಪಟ್ಟಲ್ಲಿಗೆ ವರ್ಗಾವಣೆ. ಉದ್ಯಮದ ಉತ್ಪನ್ನಗಳ ಗುಣಮಟ್ಟ ಸುಧಾರಣೆ. ಉದ್ಯೋಗಾಸಕ್ತರಿಗೆ ಅವಕಾಶಗಳು ಗೋಚರ. ಅವಿವಾಹಿತ ಹುಡುಗರಿಗೆ ವಿವಾಹ ಯೋಗ. ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ.
೩. ಮಿಥುನ:
ಉದ್ಯೋಗ ಸ್ಥಾನದಲ್ಲಿ ವಿಭಾಗ ಬದಲಾವಣೆ. ಹೊಸ ಸಹೋದ್ಯೋಗಿಗಳಿಗೆ ಜವಾಬ್ದಾರಿ ಹಂಚಿಕೆ. ಪಿತ್ರಾರ್ಜಿತ ಆಸ್ತಿಯನ್ನು ಅನುಭವಿಸುವ ಯೋಗ. ದೇವತಾರ್ಚನೆ, ಧ್ಯಾನ, ಸತ್ಸಂಗದಲ್ಲಿ ಆಸಕ್ತಿ. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ. ಗಣೇಶ ಅಷ್ಟಕ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
೪.ಕರ್ಕಾಟಕ:
ಗಾಳಿಸುದ್ದಿಗಳಿಗೆ ಬೆಲೆ ಕೊಡುವುದು ಬೇಡ. ಉದ್ಯೋಗ ಸ್ಥಾನದಲ್ಲಿ ಸತತ ಪರಿಶ್ರಮಕ್ಕೆ ಗೌರವ. ಉದ್ಯಮದ ನೌಕರರ ಯೋಗಕ್ಷೇಮಕ್ಕೆ ಯೋಜನೆ. ಖಾದಿ, ಗ್ರಾಮೋದ್ಯೋಗ ಬೆಳೆಸಲು ಆಸಕ್ತಿ. ಧ್ಯಾನ, ಭಜನೆ, ಸತ್ಸಂಗಗಳ ಕಡೆಗೆ ಒಲವು. ಗಣೇಶ ಪಂಚರತ್ನ, ಶಿವಾಷ್ಟೋತ್ತರ ಶತನಾಮಾವಳಿ, ನವಗ್ರಹ ಸ್ತೋತ್ರ ಓದಿ.
೫ ಸಿಂಹ:
ಹೊಸ ವ್ಯವಸ್ಥೆಯಿಂದ ಕಾರ್ಯ ಸುಧಾರಣೆ. ಉದ್ಯಮದ ಉತ್ಪನ್ನಗಳಿಗೆ ಹೊರಗಿನಿಂದ ಬೇಡಿಕೆ ಹೆಚ್ಚಳ. ಉತ್ತರದ ಕಡೆಯಿಂದ ಪ್ರೋತ್ಸಾಹಕರ ವಾರ್ತೆ. ಮಹಿಳೆಯರ ಗೃಹೋದ್ಯಮ ಯಶಸ್ಸಿನತ್ತ ಮುನ್ನಡೆ. ಸಂಚಾರದಲ್ಲಿ ವೇಗಕ್ಕೆ ಕಡಿವಾಣ ಅಗತ್ಯ.
ಗಣಪತಿ ಅಥರ್ವಶೀರ್ಷ, ಸುಬ್ರಹ್ಮಣ್ಯ ಭುಜಂಗ ಸ್ತೋತ್ರ, ಮಹಾಲಕ್ಷ್ಮಿ ಅಷ್ಟಕ ಓದಿ.
೬.ಕನ್ಯಾ:
ವ್ಯವಹಾರದಲ್ಲಿ ಬೆಳೆಯುತ್ತಿರುವ ಅನುಭವ. ಸರಕಾರಿ ಉದ್ಯೋಗಿಗಳಿಗೆ ಕೊಂಚ ಆತಂಕ. ಇಲೆಕ್ಟ್ರಾನಿಕ್ಸ್ ಉದ್ಯಮಗಳಿಗೆ ಅಧಿಕ ಬೇಡಿಕೆ. ಸ್ವಂತ ಉದ್ಯಮಗಳನ್ನು ಬೆಳೆಸಲು ಸರಕಾರದ ಪ್ರೋತ್ಸಾಹ. ವೃತ್ತಿ ಪರಿಣತಿ ವೃದ್ಧಿಗೆ ಪ್ರಯತ್ನ ಆರಂಭ. ಗಣೇಶ ತ್ರಿಶತಿ ಸ್ತೋತ್ರ, ಕಾರ್ತಿಕೇಯ ಸ್ತೋತ್ರ, ಗುರುಸ್ತೋತ್ರ ಓದಿ.
೭ತುಲಾ:
ಇದುವರೆಗಿನ ಕಾಯುವಿಕೆ ಸಾರ್ಥಕವಾಗುವ ದಿನ. ಮನೋಬಲ ವೃದ್ಧಿಗೆ ಸಾಧನೆ ಮುಂದುವರಿಕೆ. ವೃತ್ತಿ ಪರಿಣತಿ ಹೊಂದಲು ಹಳಬರ ಮಾರ್ಗದರ್ಶನ. ಉದ್ಯೋಗ ಸ್ಥಾನಕ್ಕೆ ಗಣ್ಯ ವ್ಯಕ್ತಿಗಳ ಭೇಟಿ. ಮಕ್ಕಳ ಶೈಕ್ಷಣಿಕ ಸಾಧನೆಯಿಂದ ಆನಂದ. ಗಣೇಶ ಅಷ್ಟೋತ್ತರ ಶತನಾಮ ಸ್ತೋತ್ರ, ಸುಬ್ರಹ್ಮಣ್ಯ ಕವಚ, ದೇವೀಸ್ತೋತ್ರ ಓದಿ.
೮.ವೃಶ್ಚಿಕ:
ವಿಶ್ವಾಸಪಾತ್ರತೆಯನ್ನು ಉಳಿಕೊಳ್ಳುವ ಪ್ರಯತ್ನ. ಉದ್ಯೋಗ ಸ್ಥಾನದಲ್ಲಿ ತಾತ್ಕಾಲಿಕ ಹಿನ್ನಡೆ. ಉದ್ಯಮ ಸ್ಥಾನದಲ್ಲಿ ನಿಧಾನ ಪ್ರಗತಿ. ಪಾಲುದಾರಿಕೆ ವ್ಯವಹಾರದಲ್ಲಿ ಸಾಮಾನ್ಯಲಾಭ. ಉದ್ಯೋಗ ಅರಸುವ ಶಿಕ್ಷಿತರಿಗೆ ಶುಭ ಸಮಾಚಾರ. ಗಣಪತಿ ಅಥರ್ವಶೀರ್ಷ, ನರಸಿಂಹ ಸ್ತೋತ್ರ, ಅನ್ನಪೂರ್ಣಾ ಸ್ತೋತ್ರ ಓದಿ.
೯. ಧನು:
ಎಲ್ಲರನ್ನೂ ಸಂಶಯದೃಷ್ಟಿಯಿಂದ ನೋಡದಿರಿ. ಉದ್ಯೋಗದಲ್ಲಿ ಯೋಗ್ಯತೆಗೆ ಸರಿಯಾದ ಸ್ಥಾನ ಲಭ್ಯ. ಸಣ್ಣ ಪ್ರಮಾಣದ ಗೃಹೋದ್ಯಮ ಆರಂಭ. ಸ್ವಂತ ಮನೆ ಹೊಂದುವ ಕನಸು ನನಸಾಗುವ ಸೂಚನೆ. ಸಂಸಾರದಲ್ಲಿ ಪ್ರೇಮ, ವಿಶ್ವಾಸದ ವಾತಾವರಣ. ಗಣೇಶ ಕವಚ, ರಾಮರಕ್ಷಾ ಸ್ತೋತ್ರ, ವೆಂಕಟೇಶ್ವರ ಸ್ತೋತ್ರ ಓದಿ.
೧೦. ಮಕರ:
ಇಂದಿನದು ಶುಭ ಶುಕ್ರವಾರ. ಉದ್ಯೋಗ ಸ್ಥಾನದಲ್ಲಿ ಹೊಸ ಜವಾಬ್ದಾರಿ. ಸಹೋದ್ಯಮದ ಸಂಸ್ಥೆಯ ಉತ್ಪಾದನೆ ವೃದ್ಧಿ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ದೇವತಾರಾಧನೆಗೆ ಸಮಯ ಹೊಂದಿಸಿಕೊಳ್ಳುವ ಪ್ರಯತ್ನ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.
೧೧.ಕುಂಭ:
ಉದ್ಯಮದ ಉತ್ಪನ್ನಗಳ ವಿತರಣೆ ಜಾಲ ವೃದ್ಧಿ. ಮುದ್ರಣ ಸಾಮಗ್ರಿಗಳು, ಸ್ಟೇಶನರಿ ವಿತರಕರಿಗೆ ಬಿಡುವು ಇಲ್ಲದಷ್ಟು ಬೇಡಿಕೆ. ಬಂಧುಗಳ ಮನೆಯಲ್ಲಿ ಶುಭ ಸಮಾರಂಭ. ಉದ್ಯೋಗಾಸಕ್ತರಿಗೆ ಅವಕಾಶ ಹುಡುಕಲು ಸಹಾಯ. ಸ್ವಂತ ಆರೋಗ್ಯದ ಕಡೆಗೆ ಗಮನ ಇರಲಿ. ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ, ಶನಿಮಹಾತ್ಮೆ ಓದಿ.
೧೨.ಮೀನ:
ಸಾಮರ್ಥ್ಯಕ್ಕೆ ಸರಿಯಾದ ಕೆಲಸದಲ್ಲಿ ತೃಪ್ತಿ. ಸಹೋದ್ಯೋಗಿಗಳಿಂದ ಸರ್ವವಿಧ ಸಹಾಯ. ಸರಕಾರಿ ಇಲಾಖೆಗಳಲ್ಲಿ ಸಕಾರಾತ್ಮಕ ಸ್ಪಂದನ. ಕೃಷಿ ಕ್ಷೇತ್ರದ ಅಭಿವೃದ್ಧಿಗೆ ವಿನೂತನ ವ್ಯವಸ್ಥೆ. ಮನೆಮಂದಿಯೆಲ್ಲರ ಆರೋಗ್ಯ ಉತ್ತಮ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.


