ಬಿಡದಿ ಟೌನ್‌ಶಿಪ್‌ ವಿರುದ್ಧ 2ನೇ ದಿನಕ್ಕೆ ಕಾಲಿಟ್ಟ JDS ಪಾದಯಾತ್ರೆ

JDS: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ, ಜೆಡಿಎಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಇಂದು 2ನೇ ದಿನಕ್ಕೆ ಕಾಲಿಟ್ಟಿದೆ.

Aug 10, 2026 - 17:00
ಬಿಡದಿ ಟೌನ್‌ಶಿಪ್‌ ವಿರುದ್ಧ 2ನೇ ದಿನಕ್ಕೆ ಕಾಲಿಟ್ಟ JDS ಪಾದಯಾತ್ರೆ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ, ಜೆಡಿಎಸ್ ಪಾದಯಾತ್ರೆ ಹಮ್ಮಿಕೊಂಡಿದೆ. ಇಂದು 2ನೇ ದಿನಕ್ಕೆ ಕಾಲಿಟ್ಟಿದೆ. ಮಾಜಿ ಪ್ರಧಾನಿ ಹಾಗೂ ಪಕ್ಷದ ವರಿಷ್ಠ ಹೆಚ್‌.ಡಿ.ದೇವೇಗೌಡ (H.D.Devegowda), ಈ ಹೋರಾಟದಲ್ಲಿ ಪಾಲ್ಗೊಂಡಿದ್ದರು. 

ಅವರಿಗೆ ಜೆಡಿಎಸ್​ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ ಬಾಬು, ವಿಧಾನ ಪರಿಷತ್‌ ಸದಸ್ಯ ಟಿ.ಎ.ಶರವಣ, ಶಾಸಕಾಂಗ ಪಕ್ಷದ ನಾಯಕ ಎಸ್‌.ಎಲ್‌.ಭೋಜೇಗೌಡ, ಶಾಸಕರಾದ ಹೆಚ್‌.ಟಿ.ಮಂಜು, ಶರಣಗೌಡ ಕಂದಕೂರ ಮತ್ತು  ಸದಸ್ಯ ಸೇರಿದಂತೆ ಅನೇಕ ನಾಯಕರು ಸಾಥ್ ನೀಡಿದ್ದಾರೆ. 

ಸದ್ಯ, ಅಲ್ಲಿ ಮಳೆಯಾಗುತ್ತಿದೆ. ಅದನ್ನು ಲೆಕ್ಕಿಸದೆ, ಹಸಿರು ಬಾವುಟ ಹಿಡಿದು ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ರೈತರು ಹೆಜ್ಜೆ ಹಾಕುತ್ತಿದ್ದಾರೆ. ಬೆಂಗಳೂರಿನ ಫ್ರೀಡಂಪಾರ್ಕ್​ವರೆಗೂ ಈ ಪಾದಯಾತ್ರೆ ನಡೆಯಲಿದ್ದು, ನಾಳೆ (ಮಂಗಳವಾರ) ಮುಕ್ತಾಯವಾಗಲಿದೆ.

Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.