ಬಂಟ್ವಾಳದ ಇರಾಕೋಡಿಯಲ್ಲಿ ದುಷ್ಕರ್ಮಿಗಳಿಂದ ತಳವಾರು ದಾಳಿ ಮಾಡಿ ಯುವಕನ ಬರ್ಬರ ಹತ್ಯೆ !

ಬಂಟ್ವಾಳದ ಇರಾಕೋಡಿಯಲ್ಲಿ ಮರಳು ಸಾಗಿಸಿ ವಾಪಾಸ್ಸಾಗುತ್ತಿದ್ದ ಇಬ್ಬರು ಯುವಕರ ಮೇಲೆ ತಳವಾರಿನಿಂದ ಭೀಕರ ದಾಳಿ ನಡೆದಿದ್ದು, ರಹೀಂ ಎಂಬವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಜತೆಗಿದ್ದ ಮತ್ತೊಬ್ಬರ ಮೇಲೂ ದಾಳಿಯಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

May 27, 2025 - 17:57
ಬಂಟ್ವಾಳದ ಇರಾಕೋಡಿಯಲ್ಲಿ ದುಷ್ಕರ್ಮಿಗಳಿಂದ ತಳವಾರು ದಾಳಿ ಮಾಡಿ ಯುವಕನ ಬರ್ಬರ ಹತ್ಯೆ !
youth attacked in bantawala and killed by miscreants

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಕುರಿಯಾಳ ಸಮೀಪದ ಇರಾಕೋಡಿಯಲ್ಲಿ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ತಳವಾರಿನಿಂದ ದಾಳಿ ಮಾಡಿ ಹತ್ಯೆಗೈದಿದ್ದಾರೆ.

 

ಮೃತ ವ್ಯಕ್ತಿಯನ್ನು ಕೊಳತ್ತಮಜಲು ನಿವಾಸಿ, ಪಿಕಪ್‌ ಚಾಲಕ ರಹೀಂ ಎಂದು ಗುರುತಿಸಲಾಗಿದೆ. ಇನ್ನು ರಹೀಂ ಜತೆಗಿದ್ದ ಯುವಕನ ಮೇಲೆಯೂ ದುಷ್ಕರ್ಮಿಗಳು ದಾಳಿ ಮಾಡಿದ್ದು, ಆತನ ಕೈಗೆ ಗಂಭೀರ ಗಾಯವಾಗಿದೆ. ಸದ್ಯ ಆತನನ್ನು ಬಂಟ್ವಾಳದ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಹೀಂ ಅವರು ಪಿಕಪ್‌ನಲ್ಲಿ ಮರಳು ಸಾಗಿಸುತ್ತಿದ್ದು, ಮನೆಯೊಂದರ ಮುಂದೆ ಅನ್‌ಲೋಡ್‌ ಮಾಡಿ ವಾಪಾಸ್‌ ಬರುವಷ್ಟರಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ದಾಳಿ ನಡೆಸಿ ಪರಾರಿಯಾಗಿದ್ದಾರೆ.

ಯಾವ ಕಾರಣಕ್ಕೆ ಈ ದಾಳಿ ನಡೆದಿದೆ ಎನ್ನುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬರಬೇಕಿದೆ. ಸ್ಥಳಕ್ಕೆ ಬಂಟ್ವಾಳ ಪೊಲೀಸರು ದೌಡಾಯಿಸಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

 

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.