ದೀಪಾವಳಿ ಹಬ್ಬಕ್ಕೆ ಹೋಗುವವರಿಗೆ ಖುಷಿ ಸುದ್ದಿ; ಬೆಂಗಳೂರಿನಿಂದ ಈ ಊರುಗಳಿಗೆ ವಿಶೇಷ ರೈಲು

ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನಿಂದ ಹಲವೆಡೆ ವಿಶೇಷ ರೈಲುಗಳನ್ನು ಬಿಡಲು ತೀರ್ಮಾನಿಸಲಾಗಿದೆ.

Oct 22, 2024 - 11:49
 4
ದೀಪಾವಳಿ ಹಬ್ಬಕ್ಕೆ ಹೋಗುವವರಿಗೆ ಖುಷಿ ಸುದ್ದಿ; ಬೆಂಗಳೂರಿನಿಂದ ಈ ಊರುಗಳಿಗೆ ವಿಶೇಷ ರೈಲು

ಹುಬ್ಬಳ್ಳಿ:  ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನಿಂದ ಹಲವೆಡೆ ವಿಶೇಷ ರೈಲುಗಳನ್ನು ಬಿಡಲು ತೀರ್ಮಾನಿಸಲಾಗಿದೆ. ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ - ಕಾರವಾರ ಮತ್ತು ಯಶವಂತಪುರ - ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ವಿಶೇಷ ರೈಲುಗಳ ವಿವರಗಳು ಈ ಕೆಳಗಿನಂತಿವೆ.ಸಮಯ- ರೈಲು ನಿಲ್ಲುವ ಸ್ಥಳ ಇಲ್ಲಿದೆ ರೈಲು ಸಂಖ್ಯೆ 06597 ಅಕ್ಟೋಬರ್ 30, 2024 ರಂದು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಂದ ಮಧ್ಯಾಹ್ನ 1 ಗಂಟೆಗೆ ಹೊರಡಲಿರುವ ಈ ರೈಲು ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲಾ ನಿಲ್ದಾಣಗಳ ಮೂಲಕ ಮರುದಿನ ಬೆಳಗಿನ ಜಾವ 4 ಗಂಟೆಗೆ ಕಾರವಾರ ನಿಲ್ದಾಣವನ್ನು ತಲುಪಲಿದೆ. ಹಿಂದಿರುಗುವ ದಿಕ್ಕಿನಲ್ಲಿ, ಪುನಃ ಇದೇ ರೈಲು (06598) ಅಕ್ಟೋಬರ್ 31, 2024 ರಂದು ಮಧ್ಯಾಹ್ನ 12 ಗಂಟೆಗೆ ಕಾರವಾರದಿಂದ ಹೊರಡಲಿರುವ ರೈಲು ಅದೇ ಮಾರ್ಗವಾಗಿ, ಮರುದಿನ ಬೆಳಗಿನ ಜಾವ್ 4 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.ಈ ರೈಲಿನಲ್ಲಿ 4 ಜನರಲ್ ಸೆಕೆಂಡ್ ಕ್ಲಾಸ್, 10 ಸ್ಲೀಪರ್ ಕ್ಲಾಸ್, 2 ಎಸಿ ತ್ರಿ ಟೈಯರ್ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್ / ಬ್ರೇಕ್ ವ್ಯಾನ್‌ಗಳು ಸೇರಿದಂತೆ 18 ಬೋಗಿಗಳು ಇರಲಿವೆ.ರೈಲು ಸಂಖ್ಯೆ 06565 ಅಕ್ಟೋಬರ್ 30, 2024 ರಂದು ಯಶವಂತಪುರದಿಂದ ರಾತ್ರಿ 11.50ಕ್ಕೆ ಹೊರಡಲಿರುವ ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ ನಿಲ್ದಾಣಗಳ ಮೂಲಕ ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.