ಈ ದಿನದ ರಾಶಿ ಭವಿಷ್ಯ

ರಾಶಿ ಭವಿಷ್ಯ

Nov 13, 2024 - 17:41
Feb 5, 2026 - 18:47
ಈ ದಿನದ ರಾಶಿ ಭವಿಷ್ಯ
ಭವಿಷ್ಯ

ದಿನ ಭವಿಷ್ಯ

                 ಜ್ಯೋತಿರ್ಮಯ
ಅದೃಷ್ಟ ಸಂಖ್ಯೆ  5

1. ಮೇಷ:

.ಕೆಲವು ಅನಿರೀಕ್ಷಿತ ಪ್ರಸಂಗಗಳಿಂದ ಮನಸ್ಸಿಗೆ ಆನಂದ. ಉದ್ಯೋಗಸ್ಥರಿಗೆ ಸಹವರ್ತಿಗಳಿಂದ ಸಕಾಲಿಕ ನೆರವು.   ವ್ಯವಹಾರಸ್ಥರಿಗೆ ದೇವತೋಪಾಸನೆಯಿಂದ ಕ್ಷಿಪ್ರಾನುಗ್ರಹ.ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಹರ್ಷದ ಸನ್ನಿವೇಶ.. ಹೊಸ ಪಾಲುದಾರಿಕೆ  ವ್ಯವಹಾರಕ್ಕೆ ನಿರ್ಧಾರ.ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

2. ವೃಷಭ:

ಕಾರ್ಯಕ್ಕೆ ಬೇಕಾದ ಅನುಕೂಲತೆಗಳ ವಿಸ್ತರಣೆ..  ಹೂಡಿಕೆಗಳಿಗೆ ಹೊಸ ಕ್ಷೇತ್ರಗಳ ಅರಸುವಿಕೆ.. ಹಿರಿಯರ, ಗೃಹಿಣಿಯರ ಆರೋಗ್ಯ ಉತ್ತಮ.ಉಳಿತಾಯ ಯೋಜನೆಗಳ  ಏಜೆಂಟರಿಗೆ ಒಳ್ಳೆಯ ದಿನ.ಕಲೋಪಾಸಕರಿಗೆ ಹೊಸ ಅವಕಾಶ.
ಗಣಪತಿ ಅಥರ್ವಶೀರ್ಷ, ರಾಮರಕ್ಷಾ ಸ್ತೋತ್ರ, ನವಗ್ರಹ ಕವಚ ಓದಿ.

3.ಮಿಥುನ:

 ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ...  ಉದ್ಯೋಗ ರಂಗದಲ್ಲಿ ಹೆಚ್ಚಿನ ಜವಾಬ್ದಾರಿ . ಕರಕುಶಲ ಸಾಮಗ್ರಿಗಳ ನಿರ್ಮಾಪಕರಿಗೆ ಏಳಿಗೆಯ ಕಾಲ..ಗೃಹಿಣಿಯರ ಸ್ವಂತ ಆದಾಯ ಗಳಿಕೆ ಯತ್ನ ಸಪಲ.. ವಿದ್ಯಾರ್ಥಿಗಳಿಗೆ ಪಾಠೇತರ ಚಟುವಟಿಕೆಗಳಲ್ಲಿ ಆಸಕ್ತಿ..ಗಣೇಶ ಅಷ್ಟಕ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.

4. ಕರ್ಕಾಟಕ:

ಉದ್ಯೋಗ ಸ್ಥಾನದಲ್ಲಿ  ಕಿರಿಕಿರಿ.  ಶಾಸ್ತ್ರಜ್ಞಾನ ವೃದ್ಧಿಗೆ ವಿಶೇಷ ಪ್ರಯತ್ನ..  ಕಟ್ಟಡ ನಿರ್ಮಾಣ, ಆಸ್ತಿ ಖರೀದಿ- ಮಾರಾಟ ವ್ಯವಹಾರ ನಿಧಾನ ಪ್ರಗತಿ..ಉದ್ಯೋಗ ಅರಸುತ್ತಿರುವವರಿಗೆ  ಸದವಕಾಶ.  ಆಪ್ತವರ್ಗದಿಂದ ಶುಭಸಮಾಚಾರ..ಗೃಹಿಣಿಯರಿಗೆ ಮನೋಲ್ಲಾಸ.
 ಗಣೇಶ ಪಂಚರತ್ನ, ವಿಷ್ಣು ಸಹಸ್ರನಾಮ, ಆದಿತ್ಯ ಹೃದಯ ಓದಿ.

5.ಸಿಂಹ:

ಉದ್ಯೋಗ, ವ್ಯವಹಾರಗಳಲ್ಲಿ ಮುನ್ನಡೆ.  ಪಾರದರ್ಶಕ ನಡೆಯಿಂದ ವಿಶ್ವಾಸ ವೃದ್ಧಿ. .ದೂರದ ಬಂಧುಗಳ ಆಗಮನದಿಂದ ಸಂತಸ.ವ್ಯವಹಾರ ಕ್ಷೇತ್ರ ವಿಸ್ತರಣೆಗೆ ಪ್ರಯತ್ನ. ಮಕ್ಕಳಿಗೆ ವ್ಯಾಸಂಗ, ಮನೋರಂಜನೆ ಎರಡರಲ್ಲೂ  ಆಸಕ್ತಿ. ಸಂಕಷ್ಟನಾಶನ ಗಣೇಶ ಸ್ತೋತ್ರ, ನರಸಿಂಹ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

6. ಕನ್ಯಾ:

ಕಲೆ,ಮನೋರಂಜನೆ ಕ್ಷೇತ್ರಗಳಲ್ಲಿ  ಪ್ರಗತಿ.ಕ್ರೀಡಾ ಸಾಮಗ್ರಿ ಉತ್ಪಾದಕರಿಗೆ  ಲಾಭ. ಪ್ರಾಪ್ತವಯಸ್ಕ ಪುತ್ರನ ವಿವಾಹ ಸಮಸ್ಯೆಗೆ ಪರಿಹಾರ.. ಗೃಹೋಪಕರಣಗಳ‌ ಖರೀದಿಗೆ ಧನವ್ಯಯ. ಕುಟುಂಬದಲ್ಲಿ ಸಾಮರಸ್ಯ ವೃದ್ಧಿ.ಗಣೇಶ ಕವಚ, ಸುಬ್ರಹ್ಮಣ್ಯ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

7. ತುಲಾ:


ಅಧ್ಯಾಪಕ ವರ್ಗದವರಿಗೆ ಬಹುವಿಧ ಹೊಣೆಗಾರಿಕೆಗಳು. . ಲೇವಾದೇವಿ ವ್ಯವಹಾರಸ್ಥರಿಗೆ ಹಿನ್ನಡೆ. ವೈದ್ಯರೊಂದಿಗೆ ಸಮಾಲೋಚನೆಯಿಂದ ಸಂಶಯ ನಿವಾರಣೆ. ಪುತ್ರಿಗೆ ನೆಂಟಸ್ತಿಕೆ ಕುದುರುವ ಸೂಚನೆ.ಗಣೇಶ ಅಷ್ಟಕ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

8.ವೃಶ್ಚಿಕ:

ಯುವಕರಿಗೆ ರಕ್ತದಾನ ಮಾಡುವ ಅವಕಾಶ.ಮಕ್ಕಳ ಹೊಸ ಉದ್ಯಮ ಪ್ರಗತಿಪಥದಲ್ಲಿ...ವಸ್ರ್ರ, ಆಭರಣ, ಶೋಕಿ ಸಾಮಗ್ರಿ ವ್ಯಾಪಾರಿಗಳ ಆದಾಯ ವೃದ್ಧಿ. ಕರಕುಶಲ ಸಾಮಗ್ರಿ ತಯಾರಕರಿಗೆ ಶುಭಕಾಲ.  ಬಂಧುಗಳ ಕಡೆಯಿಂದ ಶುಭ ಸಮಾಚಾರ.ಗಣೇಶ ಕವಚ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ನವಗ್ರಹ ಕವಚ ಓದಿ.

9.ಧನು :

ಇಂದು ನಿಮಗೆ ತಾಳ್ಮೆಯ ಕೊರತೆ ಇರುತ್ತದೆ, ಸ್ವಯಂ ನಿಯಂತ್ರಣದಿಂದಿರಿ, ಶೈಕ್ಷಣಿಕ ಕೆಲಸದಲ್ಲಿ ಅಡಚಣೆ ಉಂಟಾಗಬಹುದು. ಮಿತ್ರರ ಸಹಕಾರದಿಂದ ವ್ಯಾಪಾರ-ವ್ಯವಹಾರ ವಿಸ್ತರಣೆಯಾಗಲಿದ್ದು, ಲಾಭದ ಅವಕಾಶ ದೊರೆಯಲಿದೆ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ. 


10.ಮಕರ:


 ಅವಧಿಗೆ ಮೊದಲೇ ಕೆಲಸ ಮುಗಿಸಿದ ಸಮಾಧಾನ. ಮಕ್ಕಳ ಅಧ್ಯಯನಾಸಕ್ತಿ ಕುರಿತು‌ ಆತಂಕ.ಸಿವಿಲ್ ಎಂಜಿನಿಯರರು, ಕಂಟ್ರಾಕ್ಟರುಗಳಿಗೆ ಹೊಸ ಕೆಲಸಕ್ಕೆ ಆಹ್ವಾನ.ಲೇವಾದೇವಿ ವ್ಯವಹಾರದಲ್ಲಿ ಹಿನ್ನಡೆ. ಕೇಟರಿಂಗ್ ವ್ಯವಹಾರಸ್ಥರಿಗೆ ಆದಾಯ ವೃದ್ಧಿ . ಗಣೇಶ ಅಷ್ಟಕ, ಶಿವಕವಚ, ಶನಿಸ್ತೋತ್ರ ಓದಿ.


11. ಕುಂಭ:

ನಿತ್ಯದ ವ್ಯವಹಾರಗಳಲ್ಲಿ  ಸುಧಾರಣೆ. ಹಿತಶತ್ರುಗಳ ಬಾಧೆ  ನಿವಾರಣೆ..ಸಾಮಾಜಿಕ ಕ್ಷೇತ್ರದಲ್ಲಿ ಶುಭಸೂಚನೆಯ ವಿದ್ಯಮಾನಗಳು. ಮುದ್ರಣ ಸಾಮಗ್ರಿ, ಸ್ಟೇಶನರಿ ವ್ಯಾಪಾರಿಗಳಿಗೆ ಬೇಡಿಕೆ ಹೆಚ್ಚಳ.ಕುಟುಂಬದಲ್ಲಿ ಆನಂದದ ಘಟನೆ...ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ, ಮಹಾಲಕ್ಷ್ಮಿ ಅಷ್ಟಕ ಓದಿ.


12. ಮೀನ:

ದಿನನಿತ್ಯದ ವ್ಯವಹಾರಗಳಲ್ಲಿ ಯಶಸ್ಸು.ಸರಕಾರಿ ಕಾರ್ಯಾಲಯಗಳಲ್ಲಿ ಸಹಕಾರ.ಹಣಕಾಸು ವ್ಯವಹಾರ ನಡೆಸುವವರಿಗೆ ಕೊಂಚ ಹಿನ್ನಡೆ. ಕೃಷ್ಯುತ್ಪನ್ನ ಮಾರಾಟದಿಂದ ಮಧ್ಯಮ ಲಾಭ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿಯಿಂದ ನೆಮ್ಮದಿ. ಗಣೇಶ ಅಷ್ಟಕ, ದತ್ತಾತ್ರೇಯ ಸ್ತೋತ್ರ, ಶನಿಸ್ತೋತ್ರ ಓದಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.