ಈ ದಿನದ ರಾಶಿ ಭವಿಷ್ಯ
ರಾಶಿ ಭವಿಷ್ಯ

ದಿನ ಭವಿಷ್ಯ
ಜ್ಯೋತಿರ್ಮಯ
ಅದೃಷ್ಟ ಸಂಖ್ಯೆ 4
1) ಮೇಷ: ಕಠಿನವಾಗಿ ತೋರುವ ಸುಲಭ ಸವಾಲುಗಳು. ಹೆಚ್ಚುವರಿ ಆದಾಯದ ಮಾರ್ಗ ಗೋಚರ. ವಸ್ತ್ರೋದ್ಯಮ ಸಂಬಂಧಿ ವ್ಯವಹಾರದಲ್ಲಿ ಯಶಸ್ಸು. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ. ಸೇವಾಕ್ಷೇತ್ರಗಳಿಗೆ ಪ್ರವೇಶದಿಂದ ಕೀರ್ತಿ.ಗಣೇಶ ದ್ವಾದಶನಾಮ ಸ್ತೋತ್ರ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ಆದಿತ್ಯ ಹೃದಯ ಓದಿ.
2)ವೃಷಭ:
ಸೂಕ್ಷ್ಮವಾದ ವಿಧಾನದಿಂದ ಕಾರ್ಯಸಾಧನೆ. ಸಾಮಾಜಿಕ ಕಾರ್ಯಗಳಿಗೆ ಉದ್ಯಮಿಗಳ ಪ್ರೋತ್ಸಾಹ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಬಿಡುವಿಲ್ಲದ ವ್ಯಾಪಾರ. ಕೇಟರಿಂಗ್ ವ್ಯವಹಾರಸ್ಥರಿಗೆ ಲಾಭ.ವ್ಯವಹಾರಾರ್ಥ ಊರೊಳಗೆ ತಿರುಗಾಟ. ಗಣೇಶ ಕವಚ, ವಿಷ್ಣು ಸಹಸ್ರನಾಮ, ನವಗ್ರಹ ಸ್ತೋತ್ರ ಓದಿ.
3)ಮಿಥುನ:
ಉದ್ಯೋಗಸ್ಥರಿಗೆ ಸದ್ವರ್ತನೆಯಿಂದ ಶ್ಲಾಘನೆ. ಉದ್ಯಮಗಳ ಪಾಲಿಗೆ ಶುಭದಿನ. ಪ್ರಾಚೀನ ವಿದ್ಯೆಗಳನ್ನು ಕಲಿಯುವ ಆಸಕ್ತಿ. ಹಿರಿಯರ ಮನೆಯಲ್ಲಿ ದೇವತಾ ಕಾರ್ಯ.ಸ್ವಾವಲಂಬಿ ಜೀವನಕ್ಕೆ ಅನುಕೂಲ ವಾತಾವರಣ. ಗಣಪತಿ ಅಥರ್ವಶೀರ್ಷ, ಸುಬ್ರಹ್ಮಣ್ಯ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
4)ಕರ್ಕಾಟಕ:
ಹಿಂದೆಮುಂದೆ ನೋಡದೆ ಮಾತು ಕೊಡದಿರಿ... ಉದ್ಯಮಗಳಿಗೆ ಕಾನೂನು ತೊಂದರೆ.. ವ್ಯಾಪಾರಿಗಳಿಗೆ ಹಿತಶತ್ರುಗಳ ಬಾಧೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ. ಸಣ್ಣ ಪ್ರಮಾಣದ ಕೃಷಿಕಾರ್ಯದಲ್ಲಿ ಸಂತೃಪ್ತಿ.ಗಣೇಶ ಅಷ್ಟಕ, ದತ್ತಾತ್ರೇಯ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.
5)ಸಿಂಹ:
ಉದ್ಯೋಗ ಸ್ಥಾನದಲ್ಲಿ ವಿಶೇಷ ಗೌರವದ ಯೋಗ. ಉದ್ಯಮದ ಉತ್ಪನ್ನಗಳ ಜನಪ್ರಿಯತೆ ವೃದ್ಧಿ.ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ. ಪಾಲುದಾರಿಕೆ ಪ್ರಸ್ತಾವ ಒಪ್ಪಲು ಹಿಂಜರಿಕೆ ಬೇಡ. ಉದ್ಯೋಗಸ್ಥ ಮಹಿಳೆಯರಿಗೆ ಶುಭದಿನ. ಗಣೇಶ ಪಂಚರತ್ನ, ನರಸಿಂಹ ಕವಚ, ಗುರುಸ್ತೋತ್ರ ಓದಿ.
6)ಕನ್ಯಾ:
ಊಟ ಬಲ್ಲವನಿಗೆ ರೋಗವಿಲ್ಲ ಎಂಬುದು ನೆನಪಿರಲಿ. ವಾಹನ ಚಾಲನೆಯಲ್ಲಿ ಎಚ್ಚರ ಇರಲಿ. ಸಟ್ಟಾ ವ್ಯವಹಾರದಿಂದ ದೂರವಿರಿ. ಪಾಲುದಾರಿಕೆ ಉದ್ಯಮದಲ್ಲಿ ನಿಧಾನ ಪ್ರಗತಿ. ಹಿರಿಯರ ಆರೋಗ್ಯ ಸುಧಾರಣೆ.ಗಣೇಶ ಕವಚ, ಶಿವಪಂಚಾಕ್ಷರ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.
7)ತುಲಾ:
ಉದ್ಯೋಗ ಕ್ಷೇತ್ರದಲ್ಲಿ ಸಂತೃಪ್ತಿಯ ದಿನ. ಗಣೇಶ, ಸುಬ್ರಹ್ಮಣ್ಯ ಕ್ಷೇತ್ರಗಳಿಗೆ ಭೇಟಿ. ಈಜುವ ಹವ್ಯಾಸ ಉಳ್ಳವರು ಎಚ್ಚರ. ಮಹಿಳೆಯರ ನೇತೃತ್ವದ ಉದ್ಯಮಗಳಿಗೆ ಪ್ರಚಾರ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯದ ವಾತಾವರಣ.ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ಶನಿಸ್ತೋತ್ರ ಓದಿ.
8)ವೃಶ್ಚಿಕ:
ಅಧಿಕ ಕೆಲಸ ಮಾಡಲು ಉತ್ತೇಜನ. ಸರಕಾರಿ ಉದ್ಯೋಗಿಗಳಿಗೆ ಕಿರಿಕಿರಿ ಯಂತ್ರೋಪಕರಣ ವ್ಯಾಪಾರಿಗಳಿಗೆ ಅದೃಷ್ಟ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ. ಮಕ್ಕಳ ಕಲಿಕೆ ಆಸಕ್ತಿ ಹೆಚ್ಚಿಸಲು ಪ್ರಯತ್ನ.ಗಣೇಶ ಅಷ್ಟಕ, ದಕ್ಷಿಣಾಮೂರ್ತಿ ಸ್ತೋತ್ರ, ಸೂರ್ಯಮಂಡಲ ಸ್ತೋತ್ರ ಓದಿ.
9)ಧನು:
ಸಹೋದ್ಯೋಗಿಗಳಿಂದ ಪ್ರೀತಿ,ಗೌರವದ ವರ್ತನೆ. ಕುಟುಂಬ ಕಲಹ ಪರಿಹಾರವಾಗಿ ನೆಮ್ಮದಿ. ಉದ್ಯೋಗಾಸಕ್ತ ಶಿಕ್ಷಿತರಿಗೆ ಸದವಕಾಶ. ಗೃಹಿಣಿಯರ ಸ್ವೋದ್ಯೋಗ ಯೋಜನೆಗಳಿಗೆ ಲಾಭ.. ವ್ಯವಹಾರದ ಸಂಬಂಧ ಪ್ರಮುಖ ವ್ಯಕ್ತಿಯ ಭೇಟಿ..ಗಣೇಶ ದ್ವಾದಶನಾಮ ಸ್ತೋತ್ರ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ಮಹಾಲಕ್ಷ್ಮಿ ಅಷ್ಟಕ ಓದಿ.
10)ಮಕರ:
ಯೋಜನಾಬದ್ಧ ನಡೆಯಿಂದ ಕಾರ್ಯಸಿದ್ಧಿ. ವಸ್ತ್ರ, ಆಭರಣ, ಪಾದರಕ್ಷೆ, ಶೋಕಿ ವಸ್ತು ವ್ಯಾಪಾರಿಗಳಿಗೆ ಹೇರಳ ಲಾಭ. ಉದ್ಯೋಗ ಅರಸುತ್ತಿರುವವರಿಗೆ ಅವಕಾಶಗಳು ಲಭ್ಯ. ಹಳೆಯ ಒಡನಾಡಿಗಳ ಸಂಪರ್ಕ.ಹಿರಿಯರ ಆರೋಗ್ಯದ ಕಾಳಜಿ.ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಸ್ತೋತ್ರ ಓದಿ.
11)ಕುಂಭ:
ಸ್ವಂತ ವ್ಯವಹಾರಸ್ಥರಿಗೆ ಸುದಿನ. ಗ್ರಾಹಕರ ಅಪೇಕ್ಷೆಗೆ ಸರಿಯಾಗಿ ಸ್ಪಂದನ. ಸಮಾಜ ಸೇವಾಕಾರ್ಯಗಳಿಗೆ ಮತ್ತಷ್ಟು ಅವಕಾಶಗಳು. ಟೈಲರಿಂಗ್, ಕರಕುಶಲ ಕೆಲಸ ಬಲ್ಲವರಿಗೆ ಉದ್ಯೋಗಾವಕಾಶ.ದೇವತಾ ಕಾರ್ಯದಲ್ಲಿ ಭಾಗಿ. ಗಣೇಶ ಸ್ತೋತ್ರ, ರಾಮರಕ್ಷಾ ಸ್ತೋತ್ರ, ಶನಿಸ್ತೋತ್ರ ಓದಿ.
12)ಮೀನ:
ಉದ್ಯೋಗ ಸ್ಥಾನದಲ್ಲಿ ವಿಶಿಷ್ಟ ವಾತಾವರಣ. ಸರಕಾರಿ ಕಾರ್ಯಾಲಯಗಳಲ್ಲಿ ಸಕಾರಾತ್ಮಕ ಸ್ಪಂದನ. ಭವಿಷ್ಯದ ಯೋಜನೆಗಳ ಅನುಷ್ಠಾನಕ್ಕೆ ರಂಗ ಸಜ್ಜಿಕೆ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆ. ವ್ಯವಹಾರ ಸಂಬಂಧ ದೂರ ಪ್ರಯಾಣ.ಗಣೇಶ ಸ್ತೋತ್ರ, ದತ್ತಾತ್ರೇಯ ಸ್ತೋತ್ರ, ಶನಿಸ್ತೋತ್ರ ಓದಿ.