ಈ ದಿನದ ರಾಶಿ ಭವಿಷ್ಯ

ರಾಶಿ ಭವಿಷ್ಯ

Dec 14, 2024 - 04:47
ಈ ದಿನದ ರಾಶಿ ಭವಿಷ್ಯ
ರಾಶಿ ಭವಿಷ್ಯ

ದಿನ ಭವಿಷ್ಯ
                   ಜ್ಯೋತಿರ್ಮಯ.

ಅದೃಷ್ಟ ಸಂಖ್ಯೆ  5

1.ಮೇಷ:
ಯೋಚನೆಗಳು ಸ್ಪಷ್ಟವಾಗಿರಲು  ಮನೋನಿಯಂತ್ರಣ ಇರಲಿ.ಉದ್ಯೋಗ,ವ್ಯವಹಾರಗಳಲ್ಲಿ ಮಹತ್ವದ ದಿನ.ಆರ್ಥಿಕ ಸಂಸ್ಥೆ ನೌಕರರಿಗೆ ಅಧಿಕ ಹೊರೆ. ಅಪರೂಪದ ಬಂಧುಗಳ ಭೇಟಿ. ವ್ಯವಹಾರದ ಸಂಬಂಧ ಸಣ್ಣ ಪ್ರಯಾಣ‌.ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಮಹಾಲಕ್ಷ್ಮಿ ಅಷ್ಟಕ ಓದಿ.


2.ವೃಷಭ:
 ಮೊದಲಿಗಿಂತ ಹೆಚ್ಚು ಅನುಕೂಲದ ಪರಿಸ್ಥಿತಿ.ಹಣಕಾಸು ವ್ಯವಹಾರ ಸುಗಮ.ಸರಕಾರಿ  ನೌಕರರಿಗೆ  ಸಡಿಲಾದ  ಆತಂಕ.ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ.ಗೃಹೋತ್ಪನ್ನ ಖಾದ್ಯ ಪದಾರ್ಥಗಳ ಮಾರಾಟ ಹೆಚ್ಚಳ.ಗಣಪತಿ ಅಥರ್ವಶೀರ್ಷ, ರಾಮರಕ್ಷಾ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

3.ಮಿಥುನ:
ಪ್ರಾಪಂಚಿಕ  ದೃಷ್ಟಿಯಿಂದ ಶುಭಕಾಲ.ಶಾರೀರಿಕ ತೊಂದರೆಗಳಿಗೆ ವಿದಾಯ.ಕಾರ್ಯ ನಿರ್ವಹಣೆ ನಿರಾತಂಕವಾಗಿ ನೆಮ್ಮದಿ.ವ್ಯವಹಾರಸ್ಥರಿಗೆ ಅನುಕೂಲದ ದಿನ.ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ.ಗಣೇಶ ಅಷ್ಟಕ,ವಿಷ್ಣು ಸಹಸ್ರನಾಮ,ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.


4.ಕರ್ಕಾಟಕ:
ಕಡಿಮೆಯಾದ ಅಶುಭಫಲಗಳು.ಉದ್ಯೋಗಸ್ಥರಿಗೆ  ನೆಮ್ಮದಿಯ ವಾತಾವರಣ. ಪಾಲುದಾರಿಕೆ ವ್ಯವಹಾರ ಸುಧಾರಣೆ. ಕಟ್ಟಡ,ನಿವೇಶನ ಖರೀದಿ-ಮಾರಾಟ  ವ್ಯವಹಾರಸ್ಥರಿಗೆ ಲಾಭ.ವ್ಯವಹಾರ ಸಂಬಂಧ ಪೂರ್ವಕ್ಕೆ ಪ್ರಯಾಣ.ಗಣೇಶ ಪಂಚರತ್ನ, ಶಿವಪಂಚಾಕ್ಷರ ಸ್ತೋತ್ರ, ಗುರುಸ್ತೋತ್ರ ಓದಿ.

5.ಸಿಂಹ:
ಹಂಚಿಕೊಂಡಷ್ಟೂ ವೃದ್ಧಿಯಾಗುವ ಆನಂದ.ಸ್ವಯಂ ಉದ್ಯೋಗಸ್ಥರಿಗೆ ಲಕ್ಷ್ಮೀ ಕಟಾಕ್ಷ.ಉಡುಪು ತಯಾರಿ ಉದ್ದಿಮೆಯವರಿಗೆ ಅಪಾರ ಲಾಭ. ಗೃಹಿಣಿಯರ ಸ್ವಾವಲಂಬನೆ ಯತ್ನಕ್ಕೆ ಯಶಸ್ಸು. ಊರಿನ ಪ್ರಮುಖ ದೇವಿ ಆಲಯಕ್ಕೆ ಭೇಟಿ.ಗಣಪತಿ ಅಥರ್ವಶೀರ್ಷ, ದಕ್ಷಿಣಾಮೂರ್ತಿ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

6.ಕನ್ಯಾ:
ಅನಿರೀಕ್ಷಿತ ಮೂಲದಿಂದ  ಧನಪ್ರಾಪ್ತಿ. ಉದ್ಯೋಗಸ್ಥರಿಗೆ,ಸಹೋದ್ಯೋಗಿಗಳ ಸಹಾಯ.ಉದ್ಯೋಗಾಪೇಕ್ಷಿಗಳಿಗೆ ಯೋಗ್ಯ ಅವಕಾಶ ಗೋಚರ.ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ.ಕೊಟ್ಟು ಮರೆತಿದ್ದ ಸಾಲ ಮರಳಿ ಕೈಗೆ. ಸಂಕಷ್ಟನಾಶನ ಗಣೇಶ ಸ್ತೋತ್ರ, ಸುಬ್ರಹ್ಮಣ್ಯ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

7.ತುಲಾ:
ಕಾದು ಸುಸ್ರಾಗಿ ಆಶೆ ಬಿಟ್ಟಿದ್ದ ಸಹಾಯ ಲಭ್ಯ. ಉದ್ಯೋಗ ಕ್ಷೇತ್ರದಲ್ಲಿ ಬದಲಾದ ಕಾರ್ಯಗಳು.ನಿವೇಶನ, ಮನೆ ಖರೀದಿ- ಮಾರಾಟ ವ್ಯವಹಾರಸ್ಥರಿಗೆ ಅನುಕೂಲ.ಕೃಷಿ ಉತ್ಪನ್ನ ಮಾರಾಟಗಾರರಿಗೆ  ತೃಪ್ತಿಕರ ಲಾಭ. ಹಿರಿಯರಿಗೆ ಉಲ್ಲಾಸದ  ವಾತಾವರಣ.ಗಣೇಶ ಕವಚ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ಶನಿಸ್ತೋತ್ರ ಓದಿ.

8.ವೃಶ್ಚಿಕ:
ಕಾರ್ಯಗಳು ನಿರೀಕ್ಷೆಯಂತೆ ಕೈಗೂಡುವ ದಿನ. ಮಾಲಿಕ- ನೌಕರರ ಬಾಂಧವ್ಯ ವೃದ್ಧಿ.ಆಸ್ತಿ,ಮನೆ ದಳ್ಳಾಳಿಗಳಿಗೆ ಅನುಕೂಲ.ಲೇವಾದೇವಿ ವ್ಯವಹಾರಸ್ಥರಿಗೆ ಹೆಚ್ಚು ಲಾಭ ಇಲ್ಲ.ಗಿರವಿ ವ್ಯವಹಾರದ ವ್ಯಾಪಾರಿಗಳಿಗೆ, ಸಂಸ್ಥೆಗಳಿಗೆ ಉತ್ತಮ ಲಾಭ.ಗಣೇಶ ಪಂಚರತ್ನ, ಶಿವಕವಚ,  ನವಗ್ರಹ ಸ್ತೋತ್ರ ಓದಿ.

9.ಧನು:
ನಿಸ್ವಾರ್ಥ ಮನೋಭಾವದ  ದುಡಿಮೆಗೆ ಶುಭಫಲ.ಹೊಂದಾಣಿಕೆ,ಕಾರ್ಯನಿಷ್ಠೆಗಳಿಂದ ಯಶಸ್ಸು.ಕಾರ್ಯದಕ್ಷತೆಗೆ ಮೇಲಧಿಕಾರಿಗಳಿಂದ ಪ್ರಶಂಸೆ. ದೇವತಾರ್ಚನೆಯಲ್ಲಿ ಆಸಕ್ತಿ.ನಿವಾಸ ಬದಲಾವಣೆಗೆ ಪೂರ್ವಸಿದ್ಧತೆ.ಮಕ್ಕಳ ಪ್ರತಿಭೆ ವಿಕಾಸಕ್ಕೆ ವ್ಯವಸ್ಥೆ.ಗಣೇಶ ಅಷ್ಟಕ,  ವಿಷ್ಣುಸಹಸ್ರನಾಮ,  ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.


10.ಮಕರ:
ತಾಳ್ಮೆಯಿಂದ ಯೋಚಿಸಿ ಕೆಲಸ ಮಾಡಿ.ಉದ್ಯೋಗ ಸ್ಥಾನದಲ್ಲಿ ಅನುಕೂಲ ವೃದ್ಧಿ.ಪಾಲುದಾರಿಕೆ ವ್ಯವಹಾರದಲ್ಲಿ ಸಾಮಾನ್ಯ ಲಾಭ. ಕೆಲವು ವರ್ಗಗಳ ವ್ಯಾಪಾರಿಗಳಿಗೆ ಅಧಿಕ ಲಾಭ.ಹೆಚ್ಚಿನವರಿಗೆ ಮಿಶ್ರಫಲ ಕೊಡುವ ದಿನ.ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಸ್ತೋತ್ರ ಓದಿ.


11.ಕುಂಭ:
ಸವಾಲುಗಳು ಹೆಚ್ಚಾದಷ್ಟೂ ನಿಭಾಯಿಸುವ ಸಾಮರ್ಥ್ಯ.ಸಾಮಾಜಿಕ ಚಟುವಟಿಕೆಗಳ ಒತ್ತಡ.ಉದ್ಯೋಗ ರಂಗದಲ್ಲಿ ಹೆಚ್ಚು ಯಶಸ್ಸು.ಅವಿಶ್ರಾಂತ  ಚಟುವಟಿಕೆಗಳಿಂದ ಆಯಾಸ.ಗೃಹೋದ್ಯಮಗಳ ಆದಾಯ ವೃದ್ಧಿ.ಗಣಪತಿ ಅಥರ್ವಶೀರ್ಷ,ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ಶನಿಸ್ತೋತ್ರ ಓದಿ.

12.ಮೀನ:
ಇನ್ನಷ್ಟು ಹೊಣೆಗಾರಿಕೆಗಳನ್ನು ನಿರೀಕ್ಷಿಸಿರಿ.ಕಾರ್ಯಕ್ಷೇತ್ರದಲ್ಲಿ ಪ್ರಯತ್ನಕ್ಕೆ ತಕ್ಕ ಫಲ.ಸ್ವಂತದ ಆರೋಗ್ಯದ ಕಡೆ ಗಮನವಿರಲಿ.ಸಂಗಾತಿಯಿಂದ ವ್ಯವಹಾರದಲ್ಲಿ ಉತ್ತಮ ಸಹಕಾರ.ಹೊಸ ವ್ಯವಹಾರದಲ್ಲಿ ನಿಧಾನ, ಆದರೆ ಸ್ಥಿರವಾದ ಪ್ರಗತಿ.ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ,ಶನಿಸ್ತೋತ್ರ ಓದಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.