ಈ ದಿನದ ರಾಶಿ ಭವಿಷ್ಯ
ರಾಶಿ ಭವಿಷ್ಯ

ದಿನ ಭವಿಷ್ಯ
ಜ್ಯೋತಿರ್ಮಯ.
ಅದೃಷ್ಟ ಸಂಖ್ಯೆ 3
1.ಮೇಷ:
ಉದ್ವೇಗ ಕಡಿಮೆಯಾದಷ್ಟು ಶೀಘ್ರ ಯಶಸ್ಸು. ಉದ್ಯೋಗ, ವ್ಯವಹಾರಗಳಲ್ಲಿ ನಿರ್ಣಾಯಕ ಹಂತ. ವಾಹನ ಚಾಲನೆಯಲ್ಲಿ ಎಚ್ಚರ. ಅಪರೂಪದ ಬಂಧುಗಳ ಭೇಟಿ. ವ್ಯವಹಾರದ ಸಂಬಂಧ ಸಣ್ಣ ಪ್ರಯಾಣ. ಗಣೇಶ ದ್ವಾದಶನಾಮ ಸ್ತೋತ್ರ, ರಾಮರಕ್ಷಾ ಸ್ತೋತ್ರ, ಗುರುಸ್ತೋತ್ರ ಓದಿ.
2.ವೃಷಭ:
ಕಾರ್ಯಗಳು ನಿರೀಕ್ಷೆಗಿಂತ ಹೆಚ್ಚು ಸುಲಭ. ಹಣಕಾಸು ವ್ಯವಹಾರ ಸುಗಮ. ಸರಕಾರಿ ನೌಕರರಿಗೆ ಕೊಂಚ ಆತಂಕ. ರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ಗೃಹೋತ್ಪನ್ನ ಖಾದ್ಯ ಪದಾರ್ಥಗಳ ಮಾರಾಟ ಹೆಚ್ಚಳ. ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ, ನವಗ್ರಹ ಸ್ತೋತ್ರ ಓದಿ.
3.ಮಿಥುನ:
ವ್ಯಾವಹಾರಿಕ ದೃಷ್ಟಿಯಿಂದ ಶುಭಕಾಲ. ಶಾರೀರಿಕ ತೊಂದರೆಗಳಿಂದ ಮುಕ್ತಿ. ಉದ್ಯೋಗಸ್ಥರಿಗೆ ಸರ್ವವಿಧದಲ್ಲೂ ಅನುಕೂಲ. ವ್ಯವಹಾರಸ್ಥರಿಗೆ ಲಾಭ ತರುವ ದಿನ. ದೃಢವಾದ ಆತ್ಮವಿಶ್ವಾಸದಿಂದ ಕಾರ್ಯಜಯ. ಗಣೇಶ ಕವಚ, ಶಿವ ಸಹಸ್ರನಾಮ, ಅನ್ನಪೂರ್ಣಾ ಸ್ತೋತ್ರ ಓದಿ.
4.ಕರ್ಕಾಟಕ:
ಒಟ್ಟಿನಲ್ಲಿ ಶುಭಫಲಗಳೇ ಅಧಿಕವಾಗಲಿವೆ. ಉದ್ಯೋಗಸ್ಥರಿಗೆ ನೆಮ್ಮದಿಯ ವಾತಾವರಣ. ಪಾಲುದಾರಿಕೆ ವ್ಯವಹಾರ ಮುನ್ನಡೆ. ಕಟ್ಟಡ ನಿರ್ಮಾಣ-ಮಾರಾಟ ವ್ಯವಹಾರಸ್ಥರಿಗೆ ಉತ್ತಮ ಲಾಭ. ರಾತ್ರಿ ಪ್ರಯಾಣ ಮಾಡದಿರಿ. ಗಣೇಶ ಪಂಚರತ್ನ, ಸುಬ್ರಹ್ಮಣ್ಯ ಕವಚ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
5.ಸಿಂಹ:
ಆನಂದವನ್ನು ಹಂಚಿಕೊಳ್ಳುವಲ್ಲಿ ಜಿಪುಣತನ ಬೇಡ. ಸ್ವಯಂ ಉದ್ಯೋಗಸ್ಥರಿಗೆ ಲಕ್ಷ್ಮೀ ಕಟಾಕ್ಷ. ಉಡುಪು ತಯಾರಿ ಉದ್ದಿಮೆಯವರಿಗೆ ಅಪಾರ ಲಾಭ. ಗೃಹಿಣಿಯರ ಸ್ವಾವಲಂಬನೆ ಯತ್ನಕ್ಕೆ ಯಶಸ್ಸು. ಹತ್ತಿರದ ಶಿವ ಪಾರ್ವತಿ ಕ್ಷೇತ್ರಕ್ಕೆ ಭೇಟಿ.ಗಣೇಶ ಅಷ್ಟಕ, ದಕ್ಷಿಣಾಮೂರ್ತಿ ಸ್ತೋತ್ರ, ಗುರುಸ್ತೋತ್ರ ಓದಿ.
6.ಕನ್ಯಾ:
ದೈವಾನುಗ್ರಹವಿದ್ದರೆ ಕ್ಷಣಮಾತ್ರದಲ್ಲಿ ಶ್ರೀಮಂತಿಕೆ ಸಾಧ್ಯ. ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ. ಉದ್ಯೋಗಸ್ಥರಿಗೆ , ಸಹೋದ್ಯೋಗಿಗಳ ಸಹಾಯ. ಉದ್ಯೋಗಾಪೇಕ್ಷಿಗಳಿಗೆ ಯೋಗ್ಯ ಅವಕಾಶ ಗೋಚರ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ಗಣೇಶ ಕವಚ, ರಾಮ ಭುಜಂಗ ಪ್ರಯಾತ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.
7.ತುಲಾ:
ದಿನವೂ ನೆನಪಿಸುವ ಗೆಳೆಯನ ಆಗಮನ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಬಗೆಯ ಕಾರ್ಯಗಳು. ನಿವೇಶನ, ಮನೆ ಖರೀದಿ- ಮಾರಾಟಗಾರರಿಗೆ ಅನುಕೂಲ. ಹಣ್ಣು, ತರಕಾರಿ ವ್ಯಾಪಾರ ತೃಪ್ತಿಕರ. ಹಿರಿಯರಿಗೆ ಉಲ್ಲಾಸದವಾತಾವರಣ. ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ, ಶನಿಸ್ತೋತ್ರ ಓದಿ.
8.ವೃಶ್ಚಿಕ:
ಮಾಲಿಕ - ನೌಕರರ ನಡುವೆ ಬಾಂಧವ್ಯ ವೃದ್ಧಿ. ಆಸ್ತಿ, ಮನೆ ದಳ್ಳಾಳಿಗಳಿಗೆ ಅನುಕೂಲ. ಲೇವಾದೇವಿ ವ್ಯವಹಾರಸ್ಥರಿಗೆ ಸಾಮಾನ್ಯ ಲಾಭ. ಚಿನ್ನ, ಬೆಳ್ಳಿ ವ್ಯಾಪಾರಿಗಳಿಗೆ ಉತ್ತಮ ಲಾಭ. ಗಣೇಶ ಅಷ್ಟಕ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ಆದಿತ್ಯ ಹೃದಯ ಓದಿ.
9.ಧನು:
ಶ್ರದ್ಧೆಯ ದುಡಿಮೆಗೆ ಸರಿಯಾಗಿ ಪ್ರತಿಫಲ. ಹೊಂದಾಣಿಕೆ, ನಿಷ್ಠೆಗಳಿಂದ ಕಾರ್ಯಸಾಧನೆ. ದಕ್ಷತೆ, ಪರಿಪೂರ್ಣತೆಗೆ ಮೇಲಧಿಕಾರಿಗಳಿಂದ ಪ್ರಶಂಸೆ. ದೇವತಾರ್ಚನೆಯಲ್ಲಿ ಆಸಕ್ತಿ. ವ್ಯವಹಾರ ಸಂಬಂಧ ಪ್ರಯಾಣ ಮುಂದೂಡಿಕೆ. ಗಣೇಶ ಪಂಚರತ್ನ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ಲಕ್ಷ್ಮೀಸ್ತೋತ್ರ ಓದಿ.
10.ಮಕರ:
ಶೀಘ್ರಕೋಪ, ಆತಂಕಗಳನ್ನು ಬಿಟ್ಟಷ್ಟೂ ಕ್ಷೇಮ. ಉದ್ಯೋಗ ಸ್ಥಾನದಲ್ಲಿ ನೆಮ್ಮದಿ. ಪಾಲುದಾರಿಕೆ ವ್ಯವಹಾರದಲ್ಲಿ ಮುನ್ನಡೆ. ಕೆಲವು ವರ್ಗಗಳ ವ್ಯಾಪಾರಿಗಳಿಗೆ ಅಧಿಕ ಲಾಭ. ಹೆಚ್ಚಿನವರಿಗೆ ಮಿಶ್ರಫಲ ಕೊಡುವ ದಿನ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಸ್ತೋತ್ರ ಓದಿ.
11.ಕುಂಭ:
ಒಬ್ಬರ ಪಾಲಿಗೇ ಹೆಚ್ಚು ಜವಾಬ್ದಾರಿಗಳು ಬರುವ ಸಾಧ್ಯತೆ. ಸಾಮಾಜಿಕ ಚಟುವಟಿಕೆಗಳ ಒತ್ತಡ. ಉದ್ಯೋಗ ರಂಗದಲ್ಲಿ ಹೆಚ್ಚು ಯಶಸ್ಸು. ಅವಿಶ್ರಾಂತ ಚಟುವಟಿಕೆಗಳಿಂದ ಆಯಾಸ. ಗೃಹಿಣಿಯರ ಉದ್ಯಮಗಳ ಜನಪ್ರಿಯತೆ ವೃದ್ಧಿ. ಗಣೇಶ ಕವಚ, ಶಿವಕವಚ, ಆಂಜನೇಯ ಸ್ತೋತ್ರ ಓದಿ.
12.ಮೀನ:
ಇನ್ನಷ್ಟು ಹೊಣೆಗಾರಿಕೆಗಳನ್ನು ನಿರೀಕ್ಷಿಸಿರಿ. ಕಾರ್ಯಕ್ಷೇತ್ರದಲ್ಲಿ ಪ್ರಯತ್ನಕ್ಕೆ ತಕ್ಕ ಫಲ. ಹಿರಿಯರ ಆರೋಗ್ಯದ ಕಡೆ ಗಮನವಿರಲಿ. ವಸ್ತ್ರ, ಶೋಕಿಸಾಮಗ್ರಿ ವ್ಯಾಪಾರಿಗಳಿಗೆ ಅನುಕೂಲ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ಶನಿಸ್ತೋತ್ರ ಓದಿ.