ಈ ದಿನದ ರಾಶಿ ಭವಿಷ್ಯ

ರಾಶಿ ಭವಿಷ್ಯ

Jan 25, 2025 - 06:47
ಈ ದಿನದ ರಾಶಿ ಭವಿಷ್ಯ
ರಾಶಿ ಭವಿಷ್ಯ

ದಿನ ಭವಿಷ್ಯ

                 ಜ್ಯೋತಿರ್ಮಯ.

ಅದೃಷ್ಟ ಸಂಖ್ಯೆ  7.

1.ಮೇಷ:
ಸಾಲಾಗಿ ಬರುತ್ತಿರುವ ಕೆಲಸಗಳನ್ನು ಕಂಡು  ಧೃತಿಗೆಡದಿರಿ. ಹೆಚ್ಚುವರಿ ಆದಾಯದ ಮಾರ್ಗ ಗೋಚರ. ವಸ್ತ್ರೋದ್ಯಮ ಸಂಬಂಧಿ ವ್ಯವಹಾರದಲ್ಲಿ ಯಶಸ್ಸು. ಸಮಾಜಸೇವಾ ಕಾರ್ಯಗಳಲ್ಲಿ ಆಸಕ್ತಿ. ಪರೋಪಕಾರಕ್ಕಾಗಿ ಪ್ರಯಾಣ. ಗಣೇಶ ಸಹಸ್ರನಾಮ, ರಾಮರಕ್ಷಾ ಸ್ತೋತ್ರ, ನವಗ್ರಹ ಕವಚ ಓದಿ.

2.ವೃಷಭ:
ಹಿತಶತ್ರುಗಳ ಚಿತಾವಣೆಯಿಂದ ಸ್ವಲ್ಪ ಕಿರಿಕಿರಿ. ಸಾಮಾಜಿಕ ಕಾರ್ಯಗಳಿಗೆ  ಉದ್ಯಮಿಗಳ ಪ್ರೋತ್ಸಾಹ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಬಿಡುವಿಲ್ಲದ ವ್ಯಾಪಾರ. ವ್ಯವಹಾರ ಸಂಬಂಧ ಪ್ರಮುಖ ವ್ಯಕ್ತಿಯ ಭೇಟಿ. ಮೂಲಸೌಕರ್ಯ ಅಭಿವೃದ್ದಿ ಕಾರ್ಯಗಳಲ್ಲಿ ಭಾಗಿ. ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ, ನವಗ್ರಹ ಸ್ತೋತ್ರ ಓದಿ.

3.ಮಿಥುನ:
ಸೋಲು- ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ. ಉದ್ಯೋಗಸ್ಥರಿಗೆ  ಸಂತೃಪ್ತಿ, ಸಮಾಧಾನದ ಅನುಭವ. ಸ್ವಂತ ಉದ್ಯಮಕ್ಕೆ ಮೂಲ ಸೌಲಭ್ಯಗಳ ಸಮಸ್ಯೆ. ಹಿರಿಯರ ಮನೆಯಲ್ಲಿ ದೇವತಾ ಕಾರ್ಯ. ಪಿತ್ರಾರ್ಜಿತ ಕೃಷಿ ಭೂಮಿಯಲ್ಲಿ ಸಾಮಾನ್ಯ ಬೆಳೆ. ಗಣೇಶ ಅಷ್ಟಕ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ಅನ್ನಪೂರ್ಣಾ ಸ್ತೋತ್ರ ಓದಿ.

4.ಕರ್ಕಾಟಕ:
ನಿಂದೆ-  ಪ್ರಶಂಸೆ ಇವೆರಡನ್ನೂ  ತಲೆಗೆ ತೆಗೆದುಕೊಳ್ಳಬೇಡಿ. ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಹಿನ್ನಡೆ. ಉದ್ಯಮಗಳಿಗೆ ಕಾನೂನು ತೊಂದರೆ. ಪಾಲುದಾರಿಕೆ ವ್ಯವಹಾರ ವಿಸ್ತರಣೆ. ಸಣ್ಣ ಪ್ರಮಾಣದ ಕೃಷಿಕಾರ್ಯದಲ್ಲಿ ಸಂತೃಪ್ತಿ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ.

5.ಸಿಂಹ:
ಉದ್ಯಮದ ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಅರ್ಹರಿಗೆ ಸಹಾಯ ಮಾಡುವ ಅವಕಾಶ. ಸಾಮಾಜಿಕ ಪಿಡುಗುಗಳ ನಿವಾರಣೆಗೆ ಸಾಮೂಹಿಕ ಚಿಂತನೆ. ಶಿಕ್ಷಿತರಿಗೆ ಉದ್ಯೋಗ ಅರಸಲು ಸಹಾಯ. ಪಾಲುದಾರಿಕೆ ಪ್ರಸ್ತಾವ ಸ್ವೀಕಾರದಿಂದ ಹಿತ. ಗಣೇಶ ಸ್ತೋತ್ರ, ವಿಷ್ಣು ಸಹಸ್ರನಾಮ, ನವಗ್ರಹ ಸ್ತೋತ್ರ ಓದಿ.

6.ಕನ್ಯಾ:
ಅಪರಿಚಿತ ವ್ಯಕ್ತಿಗಳಿಂದ ಆಪತ್ತಿನಲ್ಲಿ ಸಹಾಯ. ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾವರಣ. ಸಟ್ಟಾ ವ್ಯವಹಾರದಿಂದ ದೂರವಿರಿ. ಸೋದರಿಯ ಮನೆಯಲ್ಲಿ ಧಾರ್ಮಿಕ ಸಮಾರಂಭ. ಪಾಲುದಾರಿಕೆ ವ್ಯವಹಾರ ಸಂಬಂಧ ಪ್ರಯಾಣ. ಗಣೇಶ ಕವಚ, ನರಸಿಂಹ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

7.ತುಲಾ:
ಉದ್ಯೋಗದಲ್ಲಿ ಅನುಭವಸ್ಥರಿಗೆ ಪುರಸ್ಕಾರ. ಹತ್ತಿರದ ತೀರ್ಥಕ್ಷೇತ್ರಕ್ಕೆ ಸಂದರ್ಶನ. ವಸ್ತ್ರ, ಆಭರಣ ಖರೀದಿ. ಮಹಿಳೆಯರ ನೇತೃತ್ವದ  ಉದ್ಯಮಗಳ  ಏಳಿಗೆ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯದ ವಾತಾವರಣ. ಗಣಪತಿ ಅಥರ್ವಶೀರ್ಷ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

8.ವೃಶ್ಚಿಕ:
ಉದ್ಯೋಗ  ಸ್ಥಾನದಲ್ಲಿ ಅನುಕೂಲದ ವಾತಾವರಣ. ಅಧಿಕಾರಿಗಳಿಗೆ ಅಪವಾದದ ಭೀತಿ. ಯಂತ್ರೋಪಕರಣ  ವ್ಯಾಪಾರಿಗಳಿಗೆ  ಅದೃಷ್ಟ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ. ಪ್ರಾಚೀನ ವಿದ್ಯೆಗಳನ್ನು ಕಲಿಯುವ ಆಸಕ್ತಿ. ಗಣೇಶ ಸ್ತೋತ್ರ, ರಾಮ ಭುಜಂಗಪ್ರಯಾತ ಸ್ತೋತ್ರ , ನವಗ್ರಹ ಸ್ತೋತ್ರ ಓದಿ.

9.ಧನು:
ಉದ್ಯೋಗಸ್ಥರಿಗೆ ನೆಮ್ಮದಿಯ ಅನುಭವ. ಶಿಕ್ಷಿತರಿಗೆ ಒಳ್ಳೆಯ ಅವಕಾಶಗಳು ಗೋಚರ. ಗೃಹಿಣಿಯರ ಸ್ವೋದ್ಯೋಗ ಯೋಜನೆಗಳಿಗೆ ಲಾಭ. ಅಸಹಾಯಕ ರೋಗಿಯ ಚಿಕಿತ್ಸೆಗೆ ನೆರವು. ಕುಟುಂಬ ಕಲಹ ಮಾತುಕತೆಯಿಂದ ಪರಿಹಾರ. ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ, ನವಗ್ರಹ ಮಂಗಲಾಷ್ಟಕ ಓದಿ.

10.ಮಕರ:
ಉದ್ಯೋಗ ಸ್ಥಾನದಲ್ಲಿ ಹೊಸ ವ್ಯವಸ್ಥೆ. ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ಲಾಭ. ಉದ್ಯೋಗ ಅರಸುತ್ತಿರುವವರಿಗೆ ಅವಕಾಶಗಳು ಲಭ್ಯ. ಹಿತಶತ್ರುಗಳ ಕುತಂತ್ರಕ್ಕೆ ಸೋಲು. ನ್ಯಾಯವಾದಿಗಳ ಕಾರ್ಯಸಾಮರ್ಥ್ಯಕ್ಕೆ ಸವಾಲು. ಗಣೇಶ ಕವಚ, ನರಸಿಂಹ ಕವಚ, ಶನಿಸ್ತೋತ್ರ ಓದಿ.

11.ಕುಂಭ:
ಉದ್ಯೋಗದಲ್ಲಿ ಹೆಚ್ಚುವರಿ ಹೊಣೆಗಾರಿಕೆಗಳು. ಗ್ರಾಹಕರ ಅಪೇಕ್ಷೆಗೆ ಸರಿಯಾಗಿ ಸ್ಪಂದನ‌. ಸಮಾಜ ಸೇವಾಕಾರ್ಯಗಳಿಗೆ ಮತ್ತಷ್ಟು ಅವಕಾಶಗಳು. ಕುಶಲ ಕರ್ಮಿಗಳಿಗೆ ಉದ್ಯೋಗಾವಕಾಶ. ಸಣ್ಣ ಉಳಿತಾಯ ಏಜೆಂಟರ ವ್ಯವಹಾರ ವೃದ್ಧಿ. ಗಣೇಶ ಕವಚ,ದಕ್ಷಿಣಾಮೂರ್ತಿ ಸ್ತೋತ್ರ, ಶನಿಸ್ತೋತ್ರ ಓದಿ.

12. ಮೀನ:
ಉದ್ಯೋಗ ಸ್ಥಾನದಲ್ಲಿ ಸಹಜ ವಾತಾವರಣ. ವ್ಯವಹಾರ ಕ್ಷೇತ್ರದಲ್ಲಿ ಸ್ವಾಭಾವಿಕ ಪೈಪೋಟಿ. ಸರಕಾರಿ ಕಾರ್ಯಾಲಯಗಳಲ್ಲಿ ವಿಳಂಬಿತ ಸ್ಪಂದನ. ಭವಿಷ್ಯದ ಯೋಜನೆಗಳ ಅನುಷ್ಠಾನಕ್ಕೆ ಪ್ರಯತ್ನ ಆರಂಭ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ದೇವೀಸ್ತೋತ್ರ ಓದಿ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.