ಬಿಜೆಪಿ ತಂಡದ ಮುಂದೆ ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ವಿಜಯಪುರ ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ವಕ್ಫ್ ಆಸ್ತಿ ನೋಂದಣಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ವಾದ ಪ್ರತಿವಾದಕ್ಕೂ ಕಾರಣವಾಗುತ್ತಿದೆ. ಇದರ ಬೆನ್ನಲ್ಲೇ ಇಂದು ನಗರಕ್ಕೆ ಬಿಜೆಪಿ ನಿಯೋಗ ಭೇಟಿ ನೀಡಿದೆ. ಸಿಂದಗಿ, ಪಡಗಾನೂರು, ಹಡಗಲಿ ಗ್ರಾಮಗಳಲ್ಲಿ ರೈತರ ಅಹವಾಲು ಆಲಿಸಿರುವ ಬಿಜೆಪಿ ತಂಡ ದಾಖಲೆ, ಮಾಹಿತಿಗಳನ್ನ ಸಂಗ್ರಹಿಸಿಕೊಂಡಿದೆ. ಸದ್ಯ ಎಲ್ಲ ಮಾಹಿತಿ ಸಂಗ್ರಹಿಸಿಕೊಂಡಿರುವ ಸಂಸದ ಗೋವಿಂದ ಕಾರಜೋಳ ನೇತೃತ್ವದ ತಂಡ ಡಿಸಿ ಟಿ ಭೂಬಾಲನ್ ಭೇಟಿ ಮಾಡಿದ್ದಾರೆ.

Oct 29, 2024 - 17:29
Feb 5, 2026 - 18:39
ಬಿಜೆಪಿ ತಂಡದ ಮುಂದೆ ಅಚ್ಚರಿಯ ಮಾಹಿತಿ ಬಿಚ್ಚಿಟ್ಟ ವಿಜಯಪುರ ಜಿಲ್ಲಾಧಿಕಾರಿ
Vijayapur District Collector disclosed surprising information in front of BJP team

ವಿಜಯಪುರ, ಅಕ್ಟೋಬರ್​ 29: ಜಿಲ್ಲೆಯಲ್ಲಿ ವಕ್ಫ್ ಆಸ್ತಿ ನೋಂದಣಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ವಾದ ಪ್ರತಿವಾದಕ್ಕೂ ಕಾರಣವಾಗುತ್ತಿದೆ. ಇದರ ಬೆನ್ನಲ್ಲೇ ಇಂದು ನಗರಕ್ಕೆ ಬಿಜೆಪಿ ನಿಯೋಗ ಭೇಟಿ ನೀಡಿದೆ. ಸಿಂದಗಿ, ಪಡಗಾನೂರು, ಹಡಗಲಿ ಗ್ರಾಮಗಳಲ್ಲಿ ರೈತರ ಅಹವಾಲು ಆಲಿಸಿರುವ ಬಿಜೆಪಿ ತಂಡ ದಾಖಲೆ, ಮಾಹಿತಿಗಳನ್ನ ಸಂಗ್ರಹಿಸಿಕೊಂಡಿದೆ. ಸದ್ಯ ಎಲ್ಲ ಮಾಹಿತಿ ಸಂಗ್ರಹಿಸಿಕೊಂಡಿರುವ ಸಂಸದ ಗೋವಿಂದ ಕಾರಜೋಳ ನೇತೃತ್ವದ ತಂಡ ಡಿಸಿ ಟಿ ಭೂಬಾಲನ್ ಭೇಟಿ ಮಾಡಿದ್ದಾರೆ.

ಡಿಸಿ ಟಿ ಭೂಬಾಲನ್ ಭೇಟಿ ಮಾಡಿದ ಸಂಸದ ಗೋವಿಂದ ಕಾರಜೋಳ ವಕ್ಫ ಸಚಿವ ಜಮೀರ್ ಅಹ್ಮದ್ ಖಾನ್​ ನಡೆಸಿದ ಸಭೆಯ ಪ್ರೊಸೀಡಿಂಗ್ಸ್ ಕಾಪಿ ಕೇಳಿದ್ದಾರೆ. ನೋಟಿಸ್ ಕೊಡದೆ ಪಹಣಿಯಲ್ಲಿ ವಕ್ಫ್ ಹೆಸರು ಎಂಟ್ರಿ ಮಾಡಿದು ಏಕೆ ಎಂದು ಪ್ರಶ್ನಿಸಿದ್ದಾರೆ.ನಾವು ಇಂಡಿ, ಚಡಚಣದಲ್ಲಿ ಮಾತ್ರ 44 ರೈತರ ಜಮೀನಿನಲ್ಲಿ ಇಂದೀಕರಣ ಮಾಡಿದ್ದೇವೆ. ಕೊಟ್ಟ ನೋಟಿಸ್ ಈಗಾಗಲೇ ರದ್ದುಗೊಳಿಸಿದ್ದೇವೆ ಎಂದು ಡಿಸಿ ಟಿ ಭೂಬಾಲನ್​ ಸ್ಪಷ್ಟನೆ ನೀಡಿದ್ದಾರೆ. ಈ ವೇಳೆ ಡಿಸಿ ಜತೆ ಬಿಜೆಪಿ ನಿಯೋಗದ ವಕೀಲ ಎಂ.ಬಿ.ಜಿರಲಿ ವಾಗ್ವಾದ ಉಂಟಾಗಿದೆ.

ವಕ್ಫ್​​ ಆಸ್ತಿಗಳ ಇಂದೀಕರಣ ಮೊದಲಿನಿಂದಲೂ ಮಾಡುತ್ತ ಬಂದಿದ್ದಾರೆ. ಹಿಂದಿನಂತೆಯೆ ಈಗ ನಾವು ಇಂದೀಕರಣ ಮಾಡಿದ್ದೇವೆ ಎಂದು ಬಿಜೆಪಿ ಟೀಂ ಎದುರು ಡಿಸಿ ಸ್ಪಷ್ಟನೆ ನೀಡಿದರು. 2018-19ರಲ್ಲೂ ವಕ್ಫ್ 123 ಆಸ್ತಿಗಳ ಇಂದೀಕರಣ ಆಗಿವೆ. 112 ರೈತರ ಜಮೀನುಗಳಿಗೆ ನೋಟಿಸ್ ನೀಡಲಾಗಿದೆ. ಪ್ರತಿವರ್ಷ ಇಂದೀಕರಣ, ನೋಟಿಸ್ ಪ್ರಕ್ರಿಯೆ ಆಗುತ್ತಿದೆ. 2020-21ರಲ್ಲಿ 138 ರೈತರಿಗೆ ನೋಟಿಸ್ ನೀಡದೇ ಇಂದೀಕರಣ ವಕ್ಫ್​​ ಹೆಸರು ಸೇರ್ಪಡೆಯಾಗಿದೆ ಎಂದು ಜಿಲ್ಲಾಧಿಕಾರಿ ಅಚ್ಚರಿಯ ಮಾಹಿತಿ ಬಿಚ್ಚಿಟ್ಟಿದ್ದಾರೆ.2020-21ರಲ್ಲೂ ನೋಟಿಸ್ ನೀಡದೆ ಸಾಕಷ್ಟು ರೈತರ ಜಮೀನು ಪಹಣಿಯಲ್ಲಿ ವಕ್ಫ್​ ಹೆಸರು ಉಲ್ಲೇಖಿಸಿದ್ದು, ಇದು ಕಾನೂನು ಪ್ರಕ್ರಿಯೆ. ಇನ್ಮುಂದೆ ನೋಟಿಸ್ ಇಲ್ಲ, ಕಾಲಂ 11 ಹೆಸರು ಸೇರ್ಪಡೆ ಮಾಡಲ್ಲ. ಈಗ ಮಾಡಿರೋದನ್ನ ವಾಪಸ್ ಪಡೆಯುತ್ತೇವೆ, ಆದರೆ ಈ ಹಿಂದೆ ಆಗಿರುವ ಮ್ಯೂಟೇಷನ್ ಕುರಿತು ಸರ್ಕಾರದಿಂದ ಸಲಹೆ ಪಡೆದು ಮುಂದಿನ ಕಾರ್ಯ ಕೈಗೊಳ್ಳುತ್ತೇವೆ ಎಂದಿದ್ದಾರೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.