ಗುರುಪುರ ಅಡ್ಡೂರು ಸೇತುವೆಯಲ್ಲಿ ಘನ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

ಅಡ್ಡೂರು ಸೇತುವೆ ಅಪಾಯದಲ್ಲಿ

Aug 16, 2024 - 15:02
Aug 16, 2024 - 15:04
ಗುರುಪುರ ಅಡ್ಡೂರು ಸೇತುವೆಯಲ್ಲಿ ಘನ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
ಜಿಲ್ಲಾಧಿಕಾರಿ ಆದೇಶ
ಗುರುಪುರ ಅಡ್ಡೂರು ಸೇತುವೆಯಲ್ಲಿ ಘನ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ


ಮಂಗಳೂರು: ಮಂಗಳೂರು ತಾಲೂಕಿನ ಸುರತ್ಕಲ್- ಕಬಕ ರಾಜ್ಯ ಹೆದ್ದಾರಿ  101ರಲ್ಲಿ ಬರುವ ಅಡ್ಡೂರು ಸೇತುವೆ ದುಸ್ಥಿತಿಯಲ್ಲಿದ್ದು ವಾಹನ ಸಂಚಾರಕ್ಕೆ ಅಪಾಯಕಾರಿ ಯಾಗಿರುವುದರಿಂದ ಮುಂದಿನ ಆದೇಶದವರೆಗೆ ಈ ಸೇತುವೆಯಲ್ಲಿ ಘನ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ  ಹಾಗೂ ಸಂಚಾರ ಮಾರ್ಗ ಬದಲಾವಣೆ ಮಾಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ  ಆದೇಶಿಸಿದ್ದಾರೆ.

ಅಡ್ಡೂರು ಸೇತುವೆಯ ಮೂಲಕ ಸುರತ್ಕಲ್ - ಕಬಕ ರಾಜ್ಯ ಹೆದ್ದಾರಿ  101 ರ ರಸ್ತೆಯಲ್ಲಿ ಬಿಸಿ.ರೋಡ್-ಪೆÇಳಲಿ- ಬೆಂಗಳೂರಿಗೆ ಸಂಚರಿಸುವ ಘನ ವಾಹನಗಳು  ಬದಲಿ ರಸ್ತೆಯನ್ನು ಬಳಸಿಕೊಂಡು ಸಂಚರಿಸಬಹುದಾಗಿದೆ.

ಮಂಗಳೂರು- ಗುರುಪುರ ಕೈಕಂಬ ಕಡೆಯಿಂದ ಪೊಳಲಿ ಕಡೆಗೆ ಸಂಚರಿಸುವ ವಾಹನಗಳು :- ಮಂಗಳೂರು- ಸೋಲಾಪುರ್ ರಾಷ್ಟ್ರೀಯ ಹೆದ್ದಾರಿ  169ರಲ್ಲಿ  ಬೈತುರ್ಲಿ ಬಸ್ ಸ್ಟಾಪ್ ನಿಂದ ಬೈತುರ್ಲಿ - ನೀರು ಮಾರ್ಗ - ಕಲ್ಪನೆ - ಜಿಲ್ಲಾ ಮುಖ್ಯ ರಸ್ತೆಯ ಮೂಲಕ ಕಲ್ಪನೆ ಜಂಕ್ಷನ್‍ಗೆ ಬಂದು ಸುರತ್ಕಲ್ - ಕಬಕ ರಾಜ್ಯ ಹೆದ್ದಾರಿ 101 ನ್ನು ಸಂಪರ್ಕಿಸಿ,  ಪೆÇಳಲಿ ಹಾಗೂ ಬಿಸಿ.ರೋಡ್ ನ  ಎನ್‍ಎಚ್ ಗೆ ಸಂಚರಿಸಬೇಕು.

ಬಿಸಿ.ರೋಡ್-ಪೊಳಲಿ ಕಡೆಯಿಂದ ಮಂಗಳೂರು-ಗುರುಪುರ  ಕೈಕಂಬ ಕಡೆಗೆ ಸಂಚರಿಸುವ ವಾಹನಗಳು ಸುರತ್ಕಲ್ – ಕಬಕ ರಾಜ್ಯ ಹೆದ್ದಾರಿ  101 ರ ಕಲ್ಪನೆ-ನೀರುಮಾರ್ಗ- ಬೈತುರ್ಲಿ ಜಿಲ್ಲಾ ಮುಖ್ಯ ರಸ್ತೆಯ ಕಲ್ಪನೆ ರಸ್ತೆಯ ಮೂಲಕ  ಬೈತುರ್ಲಿ ಬಸ್‍ಸ್ಟಾಪ್ ಎಂಬಲ್ಲಿ ಮಂಗಳೂರು- ಸೋಲಾಪುರ್- ರಾಷ್ಟ್ರೀಯ ಹೆದ್ದಾರಿ  169 ನ್ನು ಸಂಪರ್ಕಿಸಿ ಮಂಗಳೂರು ಗುರುಪುರ ಕೈಕಂಬ ಕಡೆಗೆ ಸಂಚರಿಸುವಂತೆ  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡೇ2ಡೇ ನ್ಯೂಸ್ ಬ್ಯೂರೋ Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.