ಬಿಡದಿ ಟೌನ್‌ಶಿಪ್‌: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸುದ್ದಿಗೋಷ್ಠಿ

Bidadi Township: ಬಿಡದಿ ಟೌನ್‌ಶಿಪ್‌ ಸಂಬಂಧ ಯಾವುದೇ ರೈತರಿಂದಲೂ ಜಮೀನನ್ನು ಬಲವಂತದಿಂದ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

Jul 15, 2026 - 17:55
ಬಿಡದಿ ಟೌನ್‌ಶಿಪ್‌: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸುದ್ದಿಗೋಷ್ಠಿ

ಬೆಂಗಳೂರು: ಬಿಡದಿ ಟೌನ್‌ಶಿಪ್‌ ಸಂಬಂಧ ಯಾವುದೇ ರೈತರಿಂದಲೂ ಜಮೀನನ್ನು ಬಲವಂತದಿಂದ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ (D.K.Shivakumar) ಹೇಳಿದರು. 

ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ಇಂದು (ಬುಧವಾರ) ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಜಮೀನು ಕೊಡಲು ಇಷ್ಟವಿಲ್ಲದವರು ಕೃಷಿ ಮುಂದುವರೆಸಬಹುದು. ಇಷ್ಟವಿದ್ದವರು ಸರ್ಕಾರಕ್ಕೆ ಜಮೀನು ಕೊಡಬಹುದು. ಆದರೆ, ಬಲವಂತವಾಗಿ ಒಂದು ಗುಂಟೆ ಜಮೀನನ್ನು ಪಡೆದುಕೊಳ್ಳುವುದಿಲ್ಲ ಎಂದರು.

ಬಿಡದಿ ಟೌನ್‌ಶಿಪ್‌ ಅನುಷ್ಠಾನ ಸಂಬಂಧ ಪರಿಶೀಲಿಸಲು ಸಮಿತಿ ರಚಿಸುವ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಈ ಸಮಿತಿ ವರದಿ ಆಧರಿಸಿ ಯೋಜನೆ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.