ಬೆಂಗಳೂರು: ಸೆ.18 ಶುಕ್ರವಾರದಂದು ಮಂಗಳೂರು ನಗರದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ಜರುಗಲಿದೆ. ಈ ಬಗ್ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ಅವರು 'ಸಿಎಂ ಆಫ್ ಕರ್ನಾಟಕ' ಎಕ್ಸ್ ಖಾತೆಯಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.
'ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ, ಇದೇ ಸೆ.18 ರಂದು ಕಡಲನಗರಿ ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆಯಲಿದೆ'
'ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದಿಸುವುದು, ಮೀನುಗಾರಿಕೆ, ಪ್ರವಾಸೋದ್ಯಮ, ಮೂಲಸೌಕರ್ಯ ಹಾಗೂ ಕೈಗಾರಿಕಾ ರಂಗಗಳಿಗೆ ಹೊಸ ವೇಗ ನೀಡುವುದು ಸರ್ಕಾರದ ಧೈಯೋದ್ದೇಶವಾಗಿದೆ. ಆಡಳಿತವನ್ನು ಜನರ ಮನೆಬಾಗಿಲಿಗೆ ತಂದು, ಸ್ಥಳೀಯ ಅಗತ್ಯಗಳಿಗೆ ತಕ್ಕಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವುದರೊಂದಿಗೆ, ಈ ಸಭೆಯು ಕರಾವಳಿಯ ಸರ್ವಾಂಗೀಣ ವಿಕಾಸಕ್ಕೆ ಹೊಸ ಮುನ್ನುಡಿ ಬರೆಯಲಿದೆ' ಎಂದು ಆ ವಿಡಿಯೋಗೆ ಶೀರ್ಷಿಕೆಯನ್ನು ಬರೆಯಲಾಗಿದೆ.