ಕದ್ರಿಯ ಮಂಜುನಾಥ ದೇಗುಲಕ್ಕೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ
CM D.K.Shivakumar: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಇಂದು ಕದ್ರಿಯ ಪ್ರಸಿದ್ಧ ಪುಣ್ಯಕ್ಷೇತ್ರ ಮಂಜುನಾಥ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಮಂಗಳೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ಅವರು, ಇಂದು ಕದ್ರಿಯ ಪ್ರಸಿದ್ಧ ಪುಣ್ಯಕ್ಷೇತ್ರ ಮಂಜುನಾಥ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇಗುಲದ ಮುಂಭಾಗದಲ್ಲಿ ಗ್ಯಾರಂಟಿ ಯೋಜನೆಗಳ ಫ್ಲೆಕ್ಸ್ಗಳನ್ನು ಹಿಡಿದು, ಮಹಿಳಾ ತಂಡದಿಂದ ಸಿಎಂಗೆ ಶುಭ ಕೋರಲಾಯಿತು.
ದೇವಸ್ಥಾನದಿಂದ ಅವರು, ನೇರವಾಗಿ ಪಡೀಲ್ನಲ್ಲಿರುವ ಡಿಸಿ ಕಚೇರಿಯಲ್ಲಿ ಜರುಗುವ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಸಂಪುಟ ಸಭೆಯಲ್ಲಿ ತುಳು ಭಾಷೆಗೆ ರಾಜ್ಯ ಭಾಷೆ ಸ್ಥಾನ ನೀಡುವುದು ಸೇರಿದಂತೆ, ಕರಾವಳಿ ಪಾಲಿಗೆ ಬರಪೂರ ಕೊಡುಗೆ ಘೋಷಿಸುವ ಸಾಧ್ಯುತೆಯಿದೆ. ಸಂಪುಟ ತೀರ್ಮಾನಗಳ ಬಗ್ಗೆ ಮಾಹಿತಿ ನೀಡಲು ಮಧ್ಯಾಹ್ನ 2 ಗಂಟೆಗೆ ಸುದ್ದಿಗೋಷ್ಠಿಯನ್ನು ಕೂಡ ಕರೆಯಲಾಗಿದೆ.