ದಿನ ಭವಿಷ್ಯ: ಜುಲೈ 16, 2026
Daily Horoscope: ಇಂದು ನಿಮ್ಮ ದಿನ ಭವಿಷ್ಯ ಹೇಗಿದೆ ಎಂಬುದನ್ನು ತಿಳಿಯಿರಿ.
ಮೇಷ:
ತಪ್ಪಿಸಿಕೊಳ್ಳಲಾರದ ಕೆಲಸಗಳು.. ದೈಹಿಕ, ಬೌದ್ಧಿಕ ಚಟುವಟಿಕೆಗಳು... ಉದ್ಯೋಗ, ಉದ್ಯಮಗಳಲ್ಲಿ ಯಶಸ್ಸು..ಆವಶ್ಯಕತೆಗೆ ತಕ್ಕ ನೆರವು ಸಕಾಲದಲ್ಲಿ ಲಭ್ಯ.ಗೃಹಿಣಿಯರ ಆರೋಗ್ಯದ ಕಡೆಗೆ ಗಮನ ಇರಲಿ.ಗೆಳೆಯರ ಸೌಹಾರ್ದ ಕೂಟದಲ್ಲಿ ಭಾಗಿ.ಗಣೇಶ ಕವಚ, ಶಿವನಾಮಾವಲ್ಯಷ್ಟಕ, ಶನಿಮಹಾತ್ಮೆ ಓದಿ.
ವೃಷಭ:
ಸಣ್ಣದಾಗಿ ಕಾಣಿಸುವ ದೊಡ್ಡ ಜವಾಬ್ದಾರಿಗಳು. ಉದ್ಯೋಗದಲ್ಲಿ ಹೆಚ್ಚು ಸಂತೃಪ್ತಿ. ಸರಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಕೆಲಸದ ಒತ್ತಡ...ಉದ್ಯಮಗಳಲ್ಲಿ ಉತ್ಪಾದನೆ ಹೆಚ್ಚಳ .ದೇವಿಯ ಆಲಯಕ್ಕೆ ಭೇಟಿಯಿಂದ ಶುಭ.ಗಣಪತಿ ಅಥರ್ವಶೀರ್ಷ, ಸುಬ್ರಹ್ಮಣ್ಯ ಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ.
ಮಿಥುನ:
ಆರೋಗ್ಯಕ್ಕಾಗಿ ಆಹಾರ, ವಿಹಾರಗಳಲ್ಲಿ ಶಿಸ್ತು... ಪರಿಸರ ಸ್ವಚ್ಛತೆಯನ್ನು ಕಾಯ್ದುಕೊಳ್ಳಿ.. ಉದ್ಯಮದಲ್ಲಿ ಪ್ರಗತಿ ತೃಪ್ತಿಕರ. .. ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣದ ಸಾಧ್ಯತೆ. ಅಸ್ವಸ್ಥರಿಗೆ ಮನಸ್ಥೈರ್ಯ ತುಂಬಲು ಪ್ರಯತ್ನ.ಗಣೇಶ ಕವಚ,ವಿಷ್ಣು ಸಹಸ್ರನಾಮ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
ಕರ್ಕಾಟಕ:
ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಉತ್ಪಾದನೆಗಳಲ್ಲಿ ವೈವಿಧ್ಯ ಕಾಯ್ದುಕೊಳ್ಳುವ ಪ್ರಯತ್ನ. ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ವೃದ್ಧಿ. ದೀರ್ಘಾವಧಿ ಹೂಡಿಕೆಗಳಿಂದ ಲಾಭ. ಪ್ರೀತಿಯ ಮಾತುಗಳಿಂದ ಮನೆಯಲ್ಲಿ ಶಾಂತಿ.ಗಣೇಶ ಪಂಚರತ್ನ, ರಾಮರಕ್ಷಾ ಸ್ತೋತ್ರ, ಮಹಿಷಮರ್ದಿನಿ ಸ್ತೋತ್ರ ಓದಿ.
ಸಿಂಹ:
ಖಾಸಗಿ ಸಂಸ್ಥೆ ಉದ್ಯೋಗಸ್ಥರಿಗೆ ಸಮಾಧಾನ..... ಹೊಸ ಪರಿಚಯಸ್ಥರ ಸಹಾಯದಿಂದ ವ್ಯಾಪಾರ ವೃದ್ಧಿ.. ಕಟ್ಟಡ ನಿರ್ಮಾಣ ಕಾರ್ಯ ವೇಗವೃದ್ಧಿ .ಕೃಷ್ಯುತ್ಪನ್ನ ಮೂಲಕ ಆದಾಯ ವೃದ್ಧಿ. ಬಂಧುಗಳ ಮನೆಯ ಶುಭಕಾರ್ಯದಲ್ಲಿ ಭಾಗಿ. ಗಣೇಶ ಪಂಚರತ್ನ, ನರಸಿಂಹ ಸ್ತೋತ್ರ, ಲಕ್ಷ್ಮೀಸ್ತೋತ್ರ ಓದಿ.
ಕನ್ಯಾ:
ಮನೆಯಲ್ಲಿ ಶಾಂತಿ,ಸಮಾಧಾನದ ಕ್ಷಣಗಳು.. ಆತ್ಮೀಯರ ಭೇಟಿಯಿಂದ ಹರ್ಷ.. ಉದ್ಯೋಗ ಸ್ಥಾನದಲ್ಲಿ ಹೆಚ್ಚು ಸೌಲಭ್ಯ..ಉದ್ಯೋಗಾಸಕ್ತರಿಗೆ ಆಶಾದಾಯಕ ಅವಕಾಶಗಳು.ಹಣ್ಣು, ತರಕಾರಿ ವ್ಯಾಪಾರದಲ್ಲಿ ಲಾಭ.ಸಂಕಷ್ಟನಾಶನ ಗಣೇಶ ಸ್ತೋತ್ರ, ದತ್ತಾತ್ರೇಯ ಸ್ತೋತ್ರ, ದೇವೀಸ್ತೋತ್ರ ಓದಿ.
ತುಲಾ:
ಸಾಂಸಾರಿಕ ವಲಯದಲ್ಲಿ ನಿಶ್ಚಿಂತೆ..ಪ್ರತಿಭಾವಂತರಿಗೆ ಗೌರವ ಪ್ರಾಪ್ತಿ. .. ಅಕಸ್ಮಾತ್ ಧನಾಗಮ. .. ಗೃಹಾಲಂಕಾರಕ್ಕೆ ಧನವ್ಯಯ. ಕುಶಲಕರ್ಮಿಗಳ ಕೃತಿಗಳಿಗೆ ಉತ್ತಮ ಬೇಡಿಕೆ.ಸಂಗೀತ, ಕೀರ್ತನೆ, ಭಜನೆ ಶ್ರವಣದಿಂದ ಸಮಾಧಾನ.ಗಣೇಶ. ದ್ವಾದಶನಾಮ ಸ್ತೋತ್ರ , ಮಹಾಲಕ್ಷ್ಮಿ ಅಷ್ಟಕ ಓದಿ.
ವೃಶ್ಚಿಕ:
ಪ್ರತಿಭಾವಂತರಿಗೆ ಎಲ್ಲೆಡೆ ಗೌರವ.. ಉದ್ಯಮದ ವ್ಯಾಪ್ತಿ ಇನ್ನಷ್ಟು ವಿಸ್ತರಣೆ.ಸಂಸ್ಥೆಯ ಉತ್ತರಾಧಿಕಾರ ವಿವಾದ ಪರಿಹಾರ. ಉತ್ಪನ್ನಗಳ ಗುಣಮಟ್ಟಕ್ಕೆ ಜನರಿಂದ ಶ್ಲಾಘನೆ.. . ಗೃಹಿಣಿಯರ ಉದ್ಯಮ ಉನ್ನತ ಸ್ಥಿತಿಯಲ್ಲಿ.ಗಣೇಶ ಅಷ್ಡಕ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ.
ಧನು:
ಸಮಯಕ್ಕೆ ತಕ್ಕಂತೆ ಸ್ಪಂದಿಸುವುದರಿಂದ ಯಶಸ್ಸು.. ಉದ್ಯೋಗ ಸ್ಥಾನದಲ್ಲಿ ಸದಭಿಪ್ರಾಯಕ್ಕೆ ಪಾತ್ರರಾಗುವಿರಿ. ಸಣ್ಣ ಉದ್ಯಮಗಳ ಅಭಿವೃದ್ಧಿ.ಹೈನುಗಾರಿಕೆ, ಜೇನು ವ್ಯವಸಾಯದಲ್ಲಿ ಆಸಕ್ತಿ.ಕೃಷ್ಯುತ್ಪನ್ನಗಳಿಂದ ಸಾಮಾನ್ಯ ಲಾಭ. ಗಣಪತಿ ಅಥರ್ವಶೀರ್ಷ, ದಕ್ಷಿಣಾಮೂರ್ತಿ ಸ್ತೋತ್ರ, ಆದಿತ್ಯ ಹೃದಯ ಓದಿ.
ಮಕರ:
ಉದ್ಯೋಗ ಸ್ಥಾನದಲ್ಲಿ ಗೌರವ.. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ನಿವೇಶನ ಖರೀದಿ- ಮಾರಾಟ ವ್ಯವಹಾರಸ್ಥರಿಗೆ ಲಾಭ... ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ.ಬೌದ್ಧಿಕ ಕಾರ್ಯಗಳಿಂದ ನೆಮ್ಮದಿ.ಗಣೇಶ ಕವಚ, ದೇವೀಸ್ತೋತ್ರ, ಹನುಮಾನ್ ಚಾಲೀಸಾ ಓದಿ.
ಕುಂಭ:
ಲಾಭದಾಯಕ ಯೋಜನೆಗಳಲ್ಲಿ ಹೂಡಿಕೆ.. . ಉದ್ಯಮದಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ದೂರದಲ್ಲಿರುವ ಬಂಧುಗಳ ಭೇಟಿ. ಸೇವಾಕಾರ್ಯಗಳಲ್ಲಿ ಕೈಜೋಡಿಸಲು ಮನೆಮಂದಿಯ ಸಹಕಾರ. ಮುದ್ರಣ ಸಾಮಗ್ರಿ ವಿತರಕರ ವ್ಯಾಪಾರ ವೃದ್ಧಿ.ಗಣೇಶ ಪಂಚರತ್ನ, ಶಿವಪಂಚಾಕ್ಷರ ಸ್ತೋತ್ರ, ಶನಿಮಹಾತ್ಮೆ ಓದಿ.
ಮೀನ:
ಹಲವು ಶುಭಫಲಗಳ ದಿನ. ಉದ್ಯೋಗ ಸ್ಥಾನದಲ್ಲಿ ಕೀರ್ತಿ. ಸರಕಾರಿ ಕಚೇರಿಗಳಲ್ಲಿ ಅನುಕೂಲಕರ ಸ್ಪಂದನ. ಅಪರಿಚಿತ ವ್ಯಕ್ತಿಗಳಿಂದ ಅನಿರೀಕ್ಷಿತ ಸಹಾಯ. .ವ್ಯವಹಾರ ಸುಧಾರಣೆಗೆ ಪ್ರಭಾವಿಗಳ ಸಹಾಯ.ಗಣೇಶ ದ್ವಾದಶನಾಮ ಸ್ತೋರ್ರ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.


