ದಿನ ಭವಿಷ್ಯ: ಜುಲೈ 26, 2026.. ಯಾವ ರಾಶಿಗೆ ಶುಭ?
Daily Horoscope: ಇಂದು (ಭಾನುವಾರ) ನಿಮ್ಮ ದಿನ ಭವಿಷ್ಯ ಹೇಗಿದೆ ಎಂಬುದನ್ನು ತಿಳಿಯಿರಿ.
ಮೇಷ:
ಹೆಚ್ಚಿನವರಿಗೆ ಉದ್ಯೋಗಕ್ಕೆ ವಿರಾಮ.. ಸ್ಥಿರಾಸ್ತಿ ವಿಸ್ತರಣೆಗೆ ಕಾರ್ಯಯೋಜನೆ. ಅಭಿವೃದ್ಧಿ ಕಾರ್ಯಗಳ ಅವಲೋಕನ. ಕುಟುಂಬದಲ್ಲಿ ಹರ್ಷದ ಘಟನೆ.. ಸಂಸಾರದಲ್ಲಿ ಪ್ರೀತಿ, ವಿಶ್ವಾಸ,ಸಮಾಧಾನಗಳ ವಾತಾವರಣ. ಗಣೇಶ ಕವಚ, ರಾಮರಕ್ಷಾ ಸ್ತೋತ್ರ, ಶನಿಮಹಾತ್ಮೆ ಓದಿ.
ವೃಷಭ:
ವಾರವಿಡೀ ಶ್ರಮದ ಬಳಿಕ ವಿರಾಮದ ಆನಂದ.. ದೂರ ದೇಶದಲ್ಲಿರುವ ಮಕ್ಕಳೊಡನೆ ಸಂಭಾಷಣೆ.. ಬಂಧುಗಳ ಮನೆಯಲ್ಲಿ ದೇವತಾಕಾರ್ಯ. ಆಪ್ತಮಿತ್ರನ ಹಠಾತ್ ಭೇಟಿ. ಇಷ್ಟದೇವರ ಆಲಯ ಸಂದರ್ಶನ.ಮನೆಯಲ್ಲಿ ಪ್ರೀತಿ, ಸೌಹಾರ್ದದ ವಾತಾವರಣ...ಗಣಪತಿ ಅಥರ್ವಶೀರ್ಷ, ಹನುಮಾನ್ ಚಾಲೀಸಾ, ಆದಿತ್ಯ ಹೃದಯ ಓದಿ.
ಮಿಥುನ:
ಭಗವಂತನ ಅನುಗ್ರಹದಿಂದ ಕ್ಷೇಮದ ಅನುಭವ.. ಉದ್ಯೋಗ ಸ್ಥಾನದ ಮಿತ್ರರ ಆಗಮನ. .ಬಾಲ್ಯದ ಒಡನಾಡಿಯ ಅನಿರೀಕ್ಷಿತ ದರ್ಶನ.ಕೃಷಿ ಭೂಮಿಗೆ ಭೇಟಿ.. ಲೇವಾದೇವಿ ವ್ಯವಹಾರ ನಿಮಗೆ ಹಿಡಿಸದು.ಗಣೇಶ ಪಂಚರತ್ನ, ವಿಷ್ಣು ಸಹಸ್ರನಾಮ, ಶಿವಪಂಚಾಕ್ಷರ ಸ್ತೋತ್ರ ಓದಿ.
ಕರ್ಕಾಟಕ:
ಯಾವುದೇ ಚಿಂತೆಯಿಲ್ಲದೆ ವಿರಾಮವನ್ನು ಅನುಭವಿಸಿ. ವಸ್ತ್ರ, ಸಿದ್ಧ ಉಡುಪು,ಪಾದರಕ್ಷೆ, ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ಕೈತುಂಬಾ ಲಾಭ. ಕೃಷಿಯಲ್ಲಿ ಹೊಸ ಪ್ರಯೋಗ ಮುಂದುವರಿಕೆ..ಲೇವಾದೇವಿ ವ್ಯವಹಾರದಲ್ಲಿ ಹಿನ್ನಡೆ. ಹಿರಿಯರ ಮನೆಯಲ್ಲಿ ದೇವತಾ ಕಾರ್ಯ.ಗಣೇಶ ಅಷ್ಡಕ, ಸುಬ್ರಹ್ಮಣ್ಯ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
ಸಿಂಹ:
ಆರು ದಿನಗಳ ಸಾಧನೆಗಳ ಸಿಂಹಾವಲೋಕನ. ಕಿರಿಯ ಸಹೋದ್ಯೋಗಿಗಳಿಂದ ಗೌರವಾರ್ಪಣೆ. ಉದ್ಯೋಗಾಸಕ್ತ ಹುಡುಗರಿಗೆ ಮಾರ್ಗದರ್ಶನ. ಐಟಿ ಉದ್ಯೋಗಿಗಳಿಗೆ ಆಪ್ತಸಲಹಾ ಕಾರ್ಯಕ್ರಮ. ಹಿರಿಯರು, ಮಹಿಳೆಯರು, ಮಕ್ಕಳಿಗೆ ಆನಂದದ ದಿನ.ಗಣೇಶ ದ್ವಾದಶನಾಮ ಸ್ತೋತ್ರ, ದತ್ತಾತ್ರೇಯ ಸ್ತೋತ್ರ, ಆದಿತ್ಯ ಹೃದಯ ಓದಿ.
ಕನ್ಯಾ:
ಹಿತಶತ್ರುಗಳ ಪೀಡೆಯಿಂದ ಬಿಡುಗಡೆ. ಸರಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ನೆಮ್ಮದಿ.ಹಳೆಯ ಒಡನಾಡಿಯ ಪುನರ್ಮಿಲನ.. ಕುಟುಂಬದ ಹಿರಿಯರ ಭೇಟಿ. ದೂರದಲ್ಲಿರುವ ಕುಲದೇವರ ದೇವಾಲಯ , ನಾಗಸನ್ನಿಧಿ ಸಂದರ್ಶನ.ಗಣೇಶ ತ್ರಿಶತಿ ಸ್ತೋತ್ರ, ನರಸಿಂಹ ಕವಚ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
ತುಲಾ:
ನಿಯೋಜಿತ ಕಾರ್ಯಗಳು ಮುಗಿದ ತೃಪ್ತಿ. ಸಹೋದ್ಯೋಗಿಯ ಮನೆಯಲ್ಲಿ ಧಾರ್ಮಿಕ ಕಾರ್ಯಕ್ರಮ ಅವಿವಾಹಿತ ಹುಡುಗ- ಹುಡುಗಿಯರಿಗೆ ಶುಭಕಾಲ ಸನ್ನಿಹಿತ.ಮಕ್ಕಳ ಪ್ರತಿಭೆ ಅನಾವರಣದಿಂದ ಪೋಷಕರಿಗೆ ಹರ್ಷ.ಮಹಿಳೆಯರ ಸ್ವೋದ್ಯೋಗ ಯೋಜನೆಗೆ ನಿರೀಕ್ಷೆ ಮೀರಿದ ಯಶಸ್ಸು.ಸಂಕಷ್ಟನಾಶನ ಗಣೇಶ ಸ್ತೋತ್ರ, ದಾರಿದ್ರ್ಯದಹನ ಶಿವಸ್ತೋತ್ರ, ನವಗ್ರಹ ಮಂಗಲಾಷ್ಟಕ ಓದಿ.
ವೃಶ್ಚಿಕ:
ಭವಿಷ್ಯದ ಕಾರ್ಯಗಳ ಆಯೋಜನೆ..ಬಂಧುವರ್ಗದಿಂದ ಶುಭವಾರ್ತೆ. ಲೇವಾದೇವಿ ವ್ಯವಹಾರದಲ್ಲಿ ಮಧ್ಯಮ ಲಾಭ. ಯಂತ್ರೋಪಕರಣ ವ್ಯಾಪಾರಿಗಳಿಗೆ ಆದಾಯ ವೃದ್ಧಿ. ಮೆಕಾನಿಕ್ ವೃತ್ತಿಯವರಿಗೆ ಉದ್ಯೋಗಾವಕಾಶ. ಗಣಪತಿ ಅಥರ್ವಶೀರ್ಷ, ಸುಬ್ರಹ್ಮಣ್ಯ ಭುಜಂಗ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.
ಧನು:
ಆಂತರಿಕ ಸಾಧನೆಯಲ್ಲಿ ಪ್ರಗತಿ.. ಸಾಹಿತ್ಯ ಸಂಗೀತಾದಿ ಕಲಾಸಂಬಂಧಿ ಚಟುವಟಿಕೆಗಳಲ್ಲಿ ಆಸಕ್ತಿ.. ಹಳೆಯ ಗೆಳೆಯರ ಸಂಪರ್ಕದಿಂದ ಹರ್ಷ.ಕೃಷಿ ಚಟುವಟಿಕೆಗಳು ಪ್ರಗತಿಯಲ್ಲಿ. ಯಂತ್ರೋಪಕರಣ ಬಿಡಿಭಾಗಗಳಿಗೆ ಅಧಿಕ ಬೇಡಿಕೆ. ಗಣೇಶ ಕವಚ, ರಾಮರಕ್ಷಾ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.
ಮಕರ:
ಕಾರ್ಯರಂಗದ ಒತ್ತಡಗಳಿಗೆ ಒಂದು ದಿನದ ವಿರಾಮ. ಮನೆಮಂದಿಯೊಂದಿಗೆ ದೇವತಾರಾಧನೆ... ಬಂಧುಗಳ ಮನೆಯಲ್ಲಿ ದೇವತಾ ಕಾರ್ಯ. ಟೈಲರಿಂಗ್ ವೃತ್ತಿಯವರಿಗೆ ಅನುಕೂಲ. ಬಂಧುಗಳ ಜೊತೆಯಲ್ಲಿ ದೇವಾಲಯಕ್ಕೆ ಭೇಟಿ. ಗಣಪತಿ ಅಥರ್ವಶೀರ್ಷ, ಆದಿತ್ಯ ಹೃದಯ, ಹನುಮಾನ್ ಚಾಲೀಸಾ ಓದಿ.
ಕುಂಭ:
ವಾರವಿಡೀ ಅವಿಶ್ರಾಂತ ದುಡಿದರೂ ದೇಹಕ್ಕೆ ವಿಶ್ರಾಂತಿ ಇಲ್ಲ... ಉತ್ಪನ್ನಗಳಿಗಾಗಿ ಬಂದ ಬೇಡಿಕೆಗಳ ಕಡೆಗೆ ಗಮನ ಹರಿಸುವ ಅನಿವಾರ್ಯತೆ. ಸಮಾಜ ಸೇವಾ ಕಾರ್ಯಗಳತ್ತ ಗಮನ..ಕುಲದೇವರ ಆಲಯ ಸಂದರ್ಶನ. ಮನೆಯಲ್ಲಿ ಹಿರಿಯರು, ಸಂಗಾತಿ, ಮಕ್ಕಳಿಗೆ ಸಂಭ್ರಮ.ಗಣೇಶ ಪಂಚರತ್ನ, ದತ್ತಪಂಜರ ಸ್ತೋತ್ರ, ಶನಿಮಹಾತ್ಮೆ ಓದಿ.
ಮೀನ:
ಸಂಸಾರ, ಉದ್ಯೋಗ, ವ್ಯವಹಾರಗಳಲ್ಲಿ ಮುಳುಗಿದ ಬಳಿಕ ಒಂದು ದಿನದ ವಿರಾಮ. ವೃತ್ತಿಬಾಂಧವರಿಂದ ಕೃತಜ್ಞತೆ ಸಲ್ಲಿಕೆ. ತಾಯಿಯ ಯೋಗಕ್ಷೇಮ ವಿಚಾರಣೆ.. ಗುರುಸ್ಥಾನದಲ್ಲಿರುವ ವ್ಯಕ್ತಿಗೆ ಗೌರವ. ಮನೆಮಂದಿಯ ಆರೋಗ್ಯ ಉತ್ತಮ.ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.