ದಿನ ಭವಿಷ್ಯ: ಇಂದು ಯಾರಿಗೆ ಶುಭ?
Daily Horoscope: ಇಂದು (ಶನಿವಾರ) ನಿಮ್ಮ ದಿನ ಭವಿಷ್ಯ ಹೇಗಿದೆ ಎಂಬುದನ್ನು ತಿಳಿಯಿರಿ.
ಮೇಷ:
ದೇವರ ಅನುಗ್ರಹದಿಂದ ಎಲ್ಲವೂ ಶುಭ.. ಉದ್ಯೋಗದಲ್ಲಿ ಸ್ಥಿರವಾದ ಪ್ರಗತಿ ಸಹಚರರ ನಡುವೆ ಸೌಹಾರ್ದ ವೃದ್ಧಿ. ಉದ್ಯಮಗಳ ಆರ್ಥಿಕ ಸ್ಥಿತಿ ಸುಧಾರಣೆ. ಉತ್ಪನ್ನಗಳ ಜನಪ್ರಿಯತೆ ಹೆಚ್ಚಳ. ಸಂಸಾರದ ಸದಸ್ಯರಲ್ಲಿ ಸಾಮರಸ್ಯ. ಗಣೇಶ ಕವಚ, ವಿಷ್ಣು ಸಹಸ್ರನಾಮ, ಶನಿಮಹಾತ್ಮೆ ಓದಿ.
ವೃಷಭ:
ಉದ್ಯೋಗಸ್ಥರಿಗೆ ಸಂಪೂರ್ಣ ನಿಶ್ಚಿಂತೆ.. ಸ್ವಂತ ಉದ್ಯಮದಲ್ಲಿ ಲಾಭ ವೃದ್ಧಿ. ವ್ಯವಹಾರ ಕ್ಷೇತ್ರ ವಿಸ್ತರಣೆ ಶುಭಾರಂಭ. ಲೇವಾದೇವಿ ವ್ಯವಹಾರಸ್ಥರಿಗೆ ಅಲ್ಪ ಲಾಭ. ದಾಂಪತ್ಯ ಜೀವನದಲ್ಲಿ ಸೌಖ್ಯ. ಗಣಪತಿ ಅಥರ್ವಶೀರ್ಷ, ಆದಿತ್ಯ ಹೃದಯ, ಶನಿಸ್ತೋತ್ರ ಓದಿ.
ಮಿಥುನ:
ಸರ್ವತೋಮುಖ ಏಳಿಗೆಯ ಲಕ್ಷಣಗಳು.. ಉದ್ಯೋಗ, ವ್ಯವಹಾರಗಳಲ್ಲಿ ಉನ್ನತಿ. ಪಾಲುದಾರಿಕೆ ವ್ಯವಹಾರದಲ್ಲಿ ಪ್ರಗತಿ. ಧ್ಯಾನ, ಯೋಗ ಸಾಧನೆಯಲ್ಲಿ ಮುನ್ನಡೆ. ರಕ್ಷಣಾ ರಂಗದಲ್ಲಿ ಸೇವೆ ಸಲ್ಲಿಸುವವರಿಗೆ ವಿಶಿಷ್ಟ ಗೌರವ. ಗಣೇಶ ಅಷ್ಟೋತ್ತರ ಶತನಾಮ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.
ಕರ್ಕಾಟಕ:
ವಯಸ್ಸು, ವಿದ್ವತ್ತಿಗೆ ಗೌರವ ಪ್ರಾಪ್ತಿ.. ಉದ್ಯಮದಲ್ಲಿ ಸಾಧಾರಣ ತೃಪ್ತಿಕರ ಲಾಭ. ಹಣ್ಣು, ತರಕಾರಿ ವ್ಯಾಪಾರಿಗಳಿಗೆ ಉತ್ತಮ ಲಾಭ. ಪರಿಸರ ರಕ್ಷಣೆಯ ಚಟುವಟಿಕೆಗಳಲ್ಲಿ ಆಸಕ್ತಿ. ಸಾಮಾಜಿಕರಿಂದ ಗೌರವ. ಗಣೇಶ ದ್ವಾದಶನಾಮ ಸ್ತೋತ್ರ, ಶಿವನಾಮಾವಲ್ಯಷ್ಟಕ, ಗೌರೀಸ್ತೋತ್ರ ಓದಿ.
ಸಿಂಹ:
ವೇಗದ ಓಟಕ್ಕೆ ತಡೆಯಾದರೂ ಮುನ್ನಡೆ ನಿಲ್ಲದು.. ಉದ್ಯೋಗದಲ್ಲಿ ಉನ್ನತ ಸ್ಥಾನ ಹೊಂದುವ ಪ್ರಯತ್ನ. ಸ್ವಂತ ಉದ್ಯಮದ ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಹತ್ತಿರದ ದೇವಾಲಯಕ್ಕೆಭೇಟಿ. ಪೂರ್ವ ದಿಕ್ಕಿನಿಂದ ಶುಭ ಸಮಾಚಾರ. ಗಣೇಶ ಕವಚ, ಶಿವಸಹಸ್ರನಾಮ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
ಕನ್ಯಾ:
ಸ್ವಂತ ವ್ಯವಹಾರದಲ್ಲಿ ಯಶಸ್ಸು.. ಅಕಸ್ಮಾತ್ ಧನಪ್ರಾಪ್ತಿಯ ಸಾಧ್ಯತೆ. ಸರ್ಕಾರಿ ಉದ್ಯೋಗಿಗಳಿಗೆ ದಿಢೀರ್ ವರ್ಗಾವಣೆ. ಪಾಲುದಾರಿಕೆ ವ್ಯವಹಾರದಲ್ಲಿ ಪಾರದರ್ಶಕತೆಗೆ ಪ್ರಥಮ ಪ್ರಾಶಸ್ತ್ಯ. ದೂರದೃಷ್ಟಿಯ ಯೋಜನೆಯಲ್ಲಿ ಹೂಡಿಕೆಯಿಂದ ಲಾಭ. ಗಣೇಶ ತ್ರಿಶತಿ ಸ್ತೋತ್ರ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ಶಿವಾಷ್ಟಕ ಓದಿ.
ತುಲಾ:
ದೇವತಾನುಗ್ರಹ ಪ್ರಾಪ್ತಿಗೆ ತೀವ್ರ ಪ್ರಯತ್ನ.. ಉದ್ಯೋಗ ಸ್ಥಾನದಲ್ಲಿ ನಿಶ್ಚಿಂತೆಯಿಂದ ಕಾರ್ಯನಿರ್ವಹಣೆ. ಆಪ್ತರಿಂದ ಸಕಾಲಿಕ ಸಲಹೆ ಹಾಗೂ ಸಹಕಾರ. ವಿಸ್ತೃತ ವ್ಯವಹಾರ ಕ್ಷೇತ್ರದಲ್ಲಿ ಮುನ್ನಡೆ. ಶಕ್ತಿ ದೇವತೆಯ ಕ್ಷೇತ್ರದರ್ಶನದ ಯೋಗ. ಗಣಪತಿ ಅಥರ್ವಶೀರ್ಷ, ರಾಜರಾಜೇಶ್ವರಿ ಅಷ್ಟಕ, ಹನುಮಾನ್ ಚಾಲೀಸಾ ಓದಿ.
ವೃಶ್ಚಿಕ:
ಗುರು, ದೇವತಾನುಗ್ರಹದಿಂದ ಯಶಸ್ಸು.. ಉದ್ಯೋಗದಲ್ಲಿ ವೇತನ ಏರಿಕೆ ಸಂಭವ. ಸರ್ಕಾರಿ ನೌಕರರಿಗೆ ಶುಭ ಸಮಾಚಾರ. ಸ್ವಂತ ಉದ್ಯಮ ವಿಸ್ತರಣೆಗೆ ಕಾರ್ಯಯೋಜನೆ. ಉದ್ಯೋಗ ಅರಸುತ್ತಿರುವವರಿಗೆ ಅವಕಾಶಗಳು ಗೋಚರ. ಗಣೇಶ ಕವಚ, ರಾಮರಕ್ಷಾ ಸ್ತೋತ್ರ, ನವಗ್ರಹ ಮಂಗಲಾಷ್ಡಕ ಓದಿ.
ಧನು:
ಆರೋಗ್ಯ ಸುಧಾರಣೆಯಿಂದ ನೆಮ್ಮದಿ.. ಹಳೆಯ ಒಡನಾಡಿಗಳ ಭೇಟಿಯಿಂದ ನವೋತ್ಸಾಹ. ಉದ್ಯೋಗದಲ್ಲಿ ಗೌರವದ ಸ್ಥಾನ. ಆದಾಯ ಹೆಚ್ಚಳದ ಯೋಜನೆಗಳು ಮುನ್ನಡೆ. ಸಂಗಾತಿಯ ಆರೋಗ್ಯದಲ್ಲಿ ಸುಧಾರಣೆ. ಗಣೇಶ ದ್ವಾದಶನಾಮ ಸ್ತೋತ್ರ, ವಿಷ್ಣು ಸಹಸ್ರನಾಮ, ಲಕ್ಷ್ಮೀಸ್ತೋತ್ರ ಓದಿ.
ಮಕರ:
ಆತ್ಮಬಲ ವೃದ್ಧಿಗೆ ವಿಶೇಷ ಪ್ರಯತ್ನ.. ಕಿರಿಯ ಸಹೋದ್ಯೋಗಿಗಳಿಗೆ ಮಾರ್ಗದರ್ಶನ ಸ್ತ್ರೀಯರಿಗೆ ಪತಿಗೃಹದವರಿಂದ ಸಹಾಯ. ಉದ್ಯೋಗ ಪರಿವರ್ತನೆ ಪ್ರಯತ್ನಕ್ಕೆ ಹಂತಹಂತವಾಗಿ ಯಶಸ್ಸು. ಆಪ್ತರಿಂದ ಸಕಾಲಕ್ಕೆ ಸಹಾಯ. ಗಣೇಶ ಕವಚ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.
ಕುಂಭ:
ಉದ್ಯೋಗ ಕ್ಷೇತ್ರದಲ್ಲಿ ಗೌರವದ ಸ್ಥಾನ ಮುಂದುವರಿಕೆ.. ಸ್ವಂತ ಉದ್ಯಮದ ಹಿತ ಅಬಾಧಿತ. ಮುದ್ರಣ ಸಾಮಗ್ರಿ, ಸ್ಟೇಶನರಿ ವ್ಯಾಪಾರಿಗಳಿಗೆ ಉತ್ತಮ ಆದಾಯ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ. ಸೇವಾ ಚಟುವಟಿಕೆಗಳಿಗೆ ಮನೆ-ಮಂದಿಯ ಸಂಪೂರ್ಣ ಬೆಂಬಲ. ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ, ಮಹಾಲಕ್ಷ್ಮಿ ಅಷ್ಟಕ ಓದಿ.
ಮೀನ:
ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಸುಗಮ.. ಉದ್ಯೋಗ ಸ್ಥಾನದಲ್ಲಿ ಅನುಕೂಲದ ಸ್ಥಿತಿ. ಸೇವಾರೂಪದ ಕಾರ್ಯಗಳಿಗೆ ಅನುಕೂಲದ ವಾತಾವರಣ. ಸರ್ಕಾರಿ ಅಧಿಕಾರಿಗಳ ಹಾಗೂ ನೌಕರರ ಉತ್ತಮ ಸ್ಪಂದನ. ಸಂಸಾರದಲ್ಲಿ ಸಂಗಾತಿಯ ಪೂರ್ಣ ಸಹಕಾರ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.