ದಕ್ಷಿಣ ಕನ್ನಡ, ಉಡುಪಿ ಕಂಬಳ: ಅನುದಾನ  ಬಿಡುಗಡೆ.. ಶಾಸಕ ಅಶೋಕ್ ರೈ

Dakshina Kannada, Udupi Kambala: ದಕ್ಷಿಣ ಹಾಗೂ ಉಡುಪಿ ಜಿಲ್ಲೆಯ ಕಂಬಳ ಸಮಿತಿಗೆ ರಾಜ್ಯ ಸರ್ಕಾರದಿಂದ ತಲಾ ರೂ.5 ಲಕ್ಷ ಮಂಜೂರುಗೊಂಡಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

Jul 16, 2026 - 15:08
Jul 16, 2026 - 15:22
ದಕ್ಷಿಣ ಕನ್ನಡ, ಉಡುಪಿ  ಕಂಬಳ:  ಅನುದಾನ  ಬಿಡುಗಡೆ.. ಶಾಸಕ ಅಶೋಕ್ ರೈ

ಪುತ್ತೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕಂಬಳ ಸಮಿತಿಗೆ ರಾಜ್ಯ ಸರ್ಕಾರದಿಂದ ತಲಾ ರೂ.5 ಲಕ್ಷ ಅನುದಾನ  ಮಂಜೂರಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು.
 
ದಕ್ಷಿಣ ಕನ್ನಡ ಜಿಲ್ಲೆಯ 23 ಕಂಬಳಗಳಿಗೆ ಒಟ್ಟು ರೂ.1.15 ಕೋಟಿ ಬಿಡುಗಡೆಯಾಗಿದೆ ಎಂದು ತಿಳಿಸಿದರು.
 
'ಕಂಬಳಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಈ ಅನುದಾನ ಒದಗಿಸಲಾಗಿದೆ. ಮೈಸೂರು ದಸರಾದಲ್ಲಿ ಕಂಬಳ ಆಯೋಜನೆಗೆ ಸಿದ್ದತೆ ನಡೆಸುತ್ತಿರುವಾಗಲೇ, ಅನುದಾನ ಮಂಜೂರಾಗಿರುವುದು ಸಂತಸ ತಂದಿದೆ' ಎಂದು ಶಾಸಕರು ಹೇಳಿದರು.
 
ಕಂಬಳಕ್ಕೆ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು, ರಾಜ್ಯ ಸರ್ಕಾರವನ್ನು ಕೋರಿದ್ದರು. ಪ್ರವಾಸೋಧ್ಯಮ ಇಲಾಖೆಯ ಮೂಲಕ ಈ ಅನುದಾನವನ್ನು ಒದಗಿಸಲಾಗಿದೆ. ಶಾಸಕರ ನಿರಂತರ ಪ್ರಯತ್ನದಿಂದಾಗಿ ಇದು ಸಾಧ್ಯವಾಗಿದೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.