ಕ್ರೀಡಾಪಟುಗಳಿಗೆ ಹೊಸ ಸೈಕಲ್ ವಿತರಣೆ
Karnataka Bicycles Distribution: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಅತ್ಯಾಧುನಿಕ ಸೈಕಲ್ಗಳನ್ನು ಇಂದು (ಬುಧವಾರ) ವಿತರಿಸಲಾಯಿತು.
ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ಅತ್ಯಾಧುನಿಕ ಸೈಕಲ್ಗಳನ್ನು ಇಂದು (ಬುಧವಾರ) ವಿತರಿಸಲಾಯಿತು.
ನೃಪತುಂಗ ರಸ್ತೆಯ ಯವನಿಕಾ ಸಭಾಂಗಣ ಮುಂಭಾಗ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರು ಹೊಸ ಸೈಕಲ್ಗಳನ್ನು ಹಸ್ತಾಂತರಿಸಿದರು.
2025–26ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯಡಿ (ಎಸ್ಸಿಎಸ್ಪಿ) ವಿಜಯಪುರ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳ ಕ್ರೀಡಾ ವಸತಿ ನಿಲಯಗಳಲ್ಲಿ ಸೈಕ್ಲಿಂಗ್ ತರಬೇತಿ ಪಡೆಯುತ್ತಿರುವ 35 ಪರಿಶಿಷ್ಟ ಜಾತಿಯ ಕ್ರೀಡಾಪಟುಗಳಿಗೆ ರೂ.2.52 ಕೋಟಿ ವೆಚ್ಚದಲ್ಲಿ ಈ ಸೈಕಲ್ಗಳನ್ನು ಖರೀದಿಸಲಾಗಿದೆ.
ಈ ವೇಳೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಕ್ರೀಡಾ ಇಲಾಖೆಯ ಆಯುಕ್ತ ಎಂ.ಎನ್. ಅನುಚೇತ್ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.


