ಧರ್ಮಸ್ಥಳ ಅರಣ್ಯದಲ್ಲಿ ಶವ ಹೂತಿದ್ದರೆ ಕ್ರಮ: ಈಶ್ವರ ಖಂಡ್ರೆ
ಬೆಂಗಳೂರು, ಆ. 20: ಅರಣ್ಯದೊಳಗೆ ಅತಿಕ್ರಮ ಪ್ರವೇಶ ಮಾಡಿ, ಶವ ಹೂತಿರುವುದು ತನಿಖೆಯಿಂದ ಸಾಬೀತಾದರೆ, ಅರಣ್ಯ ಸಂರಕ್ಷಣಾ ಕಾಯಿದೆಯ ರೀತ್ಯ ಕ್ರಮ ಜರುಗಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲು ಅರಣ್ಯದಲ್ಲಿ ಯಾವುದೇ ಅರಣ್ಯೇತರ ಚಟುವಟಿಕೆ ನಡೆಸಲು ಅವಕಾಶ ಇಲ್ಲ. ಅಭಿವೃದ್ಧಿ ಕಾರ್ಯಗಳಿಗೆ ಅಥವಾ ಸಾರ್ವಜನಿಕ ಉದ್ದೇಶಕ್ಕೆ ಅರಣ್ಯ ಭೂಮಿ ಬಳಕೆ ಮಾಡಬೇಕಾದಲ್ಲಿ ನಿಯಮಾನುಸಾರ ತೀರುವಳಿ ಅನುಮತಿ (ಎಫ್.ಸಿ.) ಪಡೆಯಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಅರಣ್ಯದಲ್ಲಿ ಅಕ್ರಮವಾಗಿ ಶವ ಸಂಸ್ಕಾರ ಮಾಡಿರುವುದು ಈಗ ನಡೆಯುತ್ತಿರುವ ಎಸ್.ಐ.ಟಿ. ತನಿಖೆಯಿಂದ ಸಾಬೀತಾದರೆ ನಿಯಮಾನುಸಾರ ಕ್ರಮ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.
Tags:
Day2Day News Bureau
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್ನಿಂದ ಹಿಡಿದು ಇನ್ಸ್ಟಾ, ಎಕ್ಸ್, ಫೇಸ್ಬುಕ್, ಯೂಟ್ಯೂಬ್, ನ್ಯೂಸ್ ಆಪ್ವರೆಗೆ ಎಲ್ಲ ಡಿಜಿಟಲ್ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.