Karavali: ಇದೇ ಶುಕ್ರವಾರ 'ಕರಾವಳಿ' ಬಿಡುಗಡೆ
Kannada FIlm: ಕನ್ನಡದ ಬಹುನಿರೀಕ್ಷಿತ ಆಕ್ಷನ್ ಸಿನಿಮಾ ಕರಾವಳಿ ಜುಲೈ 24 ಶುಕ್ರವಾರದಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.
ಕನ್ನಡದ ಬಹುನಿರೀಕ್ಷಿತ ಆಕ್ಷನ್ ಸಿನಿಮಾ ಕರಾವಳಿ (Karavali) ಜುಲೈ 24 ಶುಕ್ರವಾರದಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಚಿತ್ರದ ಟ್ರೇಲರ್ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ.
ಸೆನ್ಸಾರ್ ಮಂಡಳಿ ಯು/ಎ ಪ್ರಮಾಣ ಪತ್ರ ನೀಡಿದೆ. ಕಂಬಳ & ಕರಾವಳಿ ಸಂಸ್ಕೃತಿಯ ಸುತ್ತ ಕಥೆಯನ್ನು ಹೆಣೆಯಲಾಗಿದೆ. ಪ್ರಜ್ವಲ್ ದೇವರಾಜ್ ಮತ್ತು ರಾಜ್ ಬಿ. ಶೆಟ್ಟಿ ಒಟ್ಟಿಗೆ ನಟಿಸಿದ್ದು, 'ಮಹಾವೀರ-ಮಹಾಬಲ' ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಜುಲೈ 19 ರಂದು (ಭಾನುವಾರ) ಮಂಗಳೂರಿನಲ್ಲಿ ಪ್ರೀಮಿಯರ್ ಶೋ ಹಾಕಲಾಗಿದ್ದು, ಕರಾವಳಿ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಿರ್ದೇಶಕ ಗುರುದತ್ ಗಾಣಿಗ ಆಕ್ಷನ್ ಕಟ್ ಹೇಳಿದ್ದು, ಸಚಿನ್ ಬಸ್ರೂರು ಸಂಗೀತ ನೀಡಿದ್ದಾರೆ. ಮಿತ್ರ, ರಮೇಶ್ ಇಂದಿರಾ, ಸುಸ್ಮಿತಾ ಭಟ್, ಶ್ರೀಧರ್ ಕೆಎಸ್ ಹಾಗೂ ಗೋವಿಂದೇ ಗೌಡ ಕೂಡ ಅಭಿನಯಿಸಿದ್ದಾರೆ.