Karnataka Bank: ಕರ್ಣಾಟಕ ಬ್ಯಾಂಕ್ ನಿರ್ದೇಶಕರಾಗಿ ಡಾ.ಅರುಣ್ ಶ್ಯಾಮ್ ನೇಮಕ
Karnataka Bank: ಪ್ರತಿಷ್ಠಿತ ಕರ್ಣಾಟಕ ಬ್ಯಾಂಕ್ನ ನೂತನ ಸ್ವತಂತ್ರ ನಿರ್ದೇಶಕರಾಗಿ ಹಿರಿಯ ನ್ಯಾಯವಾದಿ ಡಾ.ಎಂ. ಅರುಣ್ ಶ್ಯಾಮ್ ನೇಮಕಗೊಂಡಿದ್ದಾರೆ.
ಮಂಗಳೂರು: ನೂರು ವರ್ಷ ಪೂರೈಸಿರುವ ಪ್ರತಿಷ್ಠಿತ ಕರ್ಣಾಟಕ ಬ್ಯಾಂಕ್ನ ನೂತನ ಸ್ವತಂತ್ರ ನಿರ್ದೇಶಕರಾಗಿ ಹಿರಿಯ ನ್ಯಾಯವಾದಿ ಡಾ.ಎಂ. ಅರುಣ್ ಶ್ಯಾಮ್ ನೇಮಕಗೊಂಡಿದ್ದಾರೆ.
ಬ್ಯಾಂಕಿನ ಆಡಳಿತ ಬಲಪಡಿಸುವ ಉದ್ದೇಶದಿಂದ ಅವರನ್ನು ಮಂಡಳಿಗೆ ಸೇರಿಸಲಾಗಿದೆ. ಪ್ರಸ್ತುತ ಮಂಡಳಿಯಲ್ಲಿ ಪಿ.ಪ್ರದೀಪ್ ಕುಮಾರ್ ಅರೆಕಾಲಿಕ ಅಧ್ಯಕ್ಷರಾಗಿದ್ದು, ಡಾ.ಅರುಣ್ ಶ್ಯಾಮ್ ಸೇರಿ 7 ಮಂದಿ ಸ್ವತಂತ್ರ ನಿರ್ದೇಶಕರಿದ್ದಾರೆ.
ಮೂಲತಃ ವಿಟ್ಲ ಸಮೀಪದ ಕೊಳ್ನಾಡು ಪಂಜಿಗದ್ದೆ ನಿವಾಸಿಯಾಗಿದ್ದು, ಪುತ್ತೂರು ವಿವೇಕಾನಂದ ಕಾಲೇಜು ಮತ್ತು ಕಾನೂನು ಕಾಲೇಜಿನಲ್ಲಿ ಶಿಕ್ಷಣ ಪಡೆದು, 2006 ರಿಂದ ಬೆಂಗಳೂರು ಹೈಕೋರ್ಟ್ನಲ್ಲಿ ವಕೀಲ ವೃತ್ತಿ ನಡೆಸುತ್ತಿದ್ದಾರೆ.