Karnataka Cabinet Meeting: ತುಳುವನ್ನು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಘೋಷಣೆ ಮಾಡಿದ ಸರ್ಕಾರ
Karnataka Cabinet Meeting: ರಾಜ್ಯ ಸರ್ಕಾರವು 'ತುಳು ಭಾಷೆ'ಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಮಾಡುವುದಕ್ಕೆ ಇಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ.
ಮಂಗಳೂರು: ರಾಜ್ಯ ಸರ್ಕಾರವು 'ತುಳು ಭಾಷೆ'ಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯನ್ನಾಗಿ ಮಾಡುವುದಕ್ಕೆ ತೀರ್ಮಾನಿಸಿದೆ. ಇಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ಅವರ ನೇತೃತ್ವದಲ್ಲಿ, ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಐತಿಹಾಸಿಕ ತೀರ್ಮಾನವನ್ನು ಕೈಗೊಳ್ಳಲಾಗಿದೆ.
ಈ ಬಗ್ಗೆ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಸ್ವತಃ ಸಿಎಂ ಡಿಕೆಶಿ ಅವರೇ ಮಾಹಿತಿ ನೀಡಿದ್ದಾರೆ. ತುಳು ಭಾಷೆಯನ್ನು ಕರಾವಳಿ ಭಾಗದಲ್ಲಿ ಪ್ರಮುಖ ಭಾಷೆಯಾಗಿ ಜನರು ಮಾತನಾಡುತ್ತಿದ್ದು, ಈ ಭಾಷೆಯ ಪ್ರಾಮುಖ್ಯತೆಯನ್ನು ಪರಿಗಣಿಸಿ ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಮಾಡಲು ನಿರ್ಧರಿಸಿದೆ. ಈ ಬಗ್ಗೆ ಜನರ ಅಭಿಪ್ರಾಯವನ್ನು ಕೂಡ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳೂರು ಎಂದು ಹೆಸರಿಡುವ ಬಗ್ಗೆ ಚರ್ಚೆ ಮಾಡಿದ್ದೇವೆ. ಆದರೆ, ಜನಾಭಿಪ್ರಾಯ ಸಂಗ್ರಹಿಸಲು ಒಂದು ತಿಂಗಳ ಕಾಲಾವಕಾಶ ನೀಡಿದ್ದೇವೆ. ದಕ್ಷಿಣ ಕನ್ನಡ ಹೆಸರು ಈ ಹಿಂದೆ ಯಾವಾಗ ಹೇಗೆ ಬಂತು ಎಂಬುದರ ಬಗ್ಗೆ ಚರ್ಚೆ ಮಾಡಲ್ಲ ಎಂದರು.