ಗುಟ್ಕಾ & ಪಾನ್ ಮಸಾಲ ನಿಷೇಧ ವಾಪಸ್?

Karnataka: ರಾಜ್ಯದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ಮೇಲಿನ ನಿಷೇಧ ಆದೇಶವನ್ನು ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ, ಸಿಎಂ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ ಎಂದು ವರದಿಯಾಗಿದೆ.

Aug 14, 2026 - 15:42
Aug 14, 2026 - 15:45
ಗುಟ್ಕಾ & ಪಾನ್ ಮಸಾಲ ನಿಷೇಧ ವಾಪಸ್?

ಬೆಂಗಳೂರು: ರಾಜ್ಯದಲ್ಲಿ ಗುಟ್ಕಾ & ಪಾನ್ ಮಸಾಲ ಮೇಲಿನ ನಿಷೇಧ ಆದೇಶವನ್ನು ವಾಪಸ್ ಪಡೆಯುವಂತೆ ಅಧಿಕಾರಿಗಳಿಗೆ, ಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಸೂಚಿಸಿದ್ದಾರೆ ಎಂದು ವಿವಿಧ ಮಾಧ್ಯಮಗಳಲ್ಲಿ ವರದಿಯಾಗಿದೆ. 

ಈ ನಿಷೇಧದಿಂದಾಗಿ 'ಅಡಿಕೆ' ಬೆಳೆಗಾರರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಪಕ್ಷಾತೀತವಾಗಿ ಶಾಸಕರು ವಿರೋಧಿಸಿದ್ದರು. ಬಿಜೆಪಿ ಶಾಸಕ ಆರಗ ಜ್ಞಾನೇಂದ್ರ ಮತ್ತು ಕಾಂಗ್ರೆಸ್ ಶಾಸಕ ಡಿ.ಜಿ.ಶಾಂತನಗೌಡ ಅವರ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ನಿಷೇಧವನ್ನು ಹಿಂಪಡೆಯುವಂತೆ ಮನವಿ ಮಾಡಿತ್ತು.

ತಮ್ಮ ಗಮನಕ್ಕೆ ತರದೆ, ಅಧಿಕಾರಿಗಳು ಈ ನಿರ್ಧಾರ ಕೈಗೊಂಡಿರುವುದಕ್ಕೆ ಡಿ.ಕೆ.ಶಿವಕುಮಾರ್ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ. 

ಇದೇ ಆಗಸ್ಟ್ 12 ರಂದು ಕರ್ನಾಟಕದಾದ್ಯಂತ 1 ವರ್ಷದ ಕಾಲ, ತಂಬಾಕು ಹಾಗೂ ನಿಕೋಟಿನ್ ಹೊಂದಿರುವ ಗುಟ್ಕಾ, ಪಾನ್ ಮಸಾಲ ಸೇರಿದಂತೆ ನಿಷೇಧಿತ ಉತ್ಪನ್ನಗಳ ಮಾರಾಟ ಹಾಗೂ ವಿತರಣೆಯನ್ನು ನಿಷೇಧಿಸಲಾಗಿತ್ತು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.