ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಮೇಲೆ ಲೋಕಾಯುಕ್ತ ದಿಢೀರ್ ದಾಳಿ

Uppinangady: ಭ್ರಷ್ಟಾಚಾರದ ದೂರಿನ ಹಿನ್ನೆಲೆ, ಇಂದು ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ.

Sep 9, 2026 - 14:39
Sep 9, 2026 - 14:43
ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಮೇಲೆ ಲೋಕಾಯುಕ್ತ ದಿಢೀರ್ ದಾಳಿ

ಪುತ್ತೂರು: ಭ್ರಷ್ಟಾಚಾರದ ದೂರಿನ ಹಿನ್ನೆಲೆ, ಇಂದು ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್‌ಪಿ ಗಾನ ಕುಮಾರಿ ಅವರ ನೇತೃತ್ವದಲ್ಲಿ ಈ ದಾಳಿ ನಡೆಸಿದ್ದು, ಕಡತಗಳ ಪರಿಶೀಲನೆ ನಡೆಸಲಾಗುತ್ತಿದೆ. 

ಈ ಕುರಿತ ಸುದ್ದಿ ತಿಳಿದ ಕೂಡಲೇ ಪಂಚಾಯಿತಿ ಕಚೇರಿಗೆ ಆಗಮಿಸಿದ ಸ್ಥಳೀಯ ವರ್ತಕರು, ಉದ್ಯಮಿಗಳು ಮತ್ತು ಸಾರ್ವಜನಿಕರು, ಅವ್ಯವಹಾರಗಳನ್ನು ಬಿಚ್ಚಿಟ್ಟು , ದೂರು ಸಹ ನೀಡಿದ್ದಾರೆ.

ದೂರುಗಳನ್ನು ಆಲಿಸಿದ ಡಿವೈಎಸ್‌ಪಿ, ಗ್ರಾಮ ಪಂಚಾಯಿತಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪ್ರತಿಯೊಬ್ಬರ ಅಹವಾಲುಗಳನ್ನು ಸ್ವೀಕರಿಸಿದ್ದೇವೆ. ಈ ಬಗ್ಗೆ ತನಿಖೆಯನ್ನು ಮಾಡುತ್ತೇವೆ. ಮತ್ಯಾರಾದರೂ ದೂರು ನೀಡುವವರೂ ಇದ್ದರೆ, ಸಂಜೆ 4ಕ್ಕೆ ಗ್ರಾಮ ಪಂಚಾಯಿತಿಗೆ ಬರಬಹುದು ಎಂದು ಹೇಳಿದ್ದಾರೆ.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.