ಮಂಗಳೂರು ಜೈಲು ಮೇಲೆ ದಾಳಿ: 10 ಮೊಬೈಲ್ ವಶಕ್ಕೆ
Mangaluru: ಇಲ್ಲಿನ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಖೈದಿಗಳಿಂದ 10 ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ಮಂಗಳೂರು: ಇಲ್ಲಿನ ಜಿಲ್ಲಾ ಕಾರಾಗೃಹದ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಖೈದಿಗಳಿಂದ 10 ಮೊಬೈಲ್ ವಶಪಡಿಸಿಕೊಂಡಿದ್ದಾರೆ.
ಖೈದಿಗಳಾದ ರಿಫತ್ ಅಲಿ, ಇಬ್ರಾಹಿಂ ಖಲೀಲ್, ಅಸ್ಫಕ್, ಅರ್ಷದ್, ದಾವುದ್ ಫರ್ವೇಜ್, ನಝರತ್ ಅಲಿ, ಶಿಫಾನ್, ಅಬ್ದುಲ್ ಸಾದೀಕ್ ಮತ್ತು ಅರ್ಫಜ್ ಬಳಿ ಈ ಮೊಬೈಲ್ ಫೋನ್ಗಳು ಪತ್ತೆಯಾಗಿವೆ.
ಇವರಲ್ಲಿ 1 ರಿಂದ 4ನೇ ಖೈದಿಗಳು, ಈಚೆಗೆ ತೊಕ್ಕೊಟ್ಟು ಬಳಿ ನಡೆದ ಅರೀಫ್ ಕೊಲೆ ಪ್ರಕರಣದ ಆರೋಪಿಗಳಾಗಿದ್ದಾರೆ. ಹಾಗೆಯೇ 5 ರಿಂದ 8 ರವರೆಗಿನ ಖೈದಿಗಳು ಡ್ರಗ್ಸ್ ಪೆಡ್ಲೇರ್ ಮತ್ತು 9ನೇ ಖೈದಿ ಕೋಕಾ ಪ್ರಕರಣದ ಆರೋಪಿಯಾಗಿದ್ದಾನೆ.
ಈ ಸಂಬಂಧ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ತಿಳಿಸಿದ್ದಾರೆ.