Karnataka Cabinet Meeting: ಮಂಗಳೂರು ಸಚಿವ ಸಂಪುಟ ಸಭೆ.. ಟಾಪ್ ಹೈಲೇಟ್ಸ್
Karnataka Cabinet Meeting: ಮಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ, ನಡೆದ ಸಚಿವ ಸಂಪುಟ ಸಭೆ ನಡಯಿತು. ಇಲ್ಲಿವೆ ಹೈಲೇಟ್ಸ್.
ದಕ್ಷಿಣ ಕನ್ನಡ: ಮಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ಅವರ ನೇತೃತ್ವದಲ್ಲಿ, ನಡೆದ ಸಚಿವ ಸಂಪುಟ ಸಭೆ ನಡಯಿತು. ಇಲ್ಲಿವೆ ಹೈಲೇಟ್ಸ್.
ಪುತ್ತೂರು ತಾಲ್ಲೂಕಿನಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ:
2025-26 ರ ಆಯವ್ಯಯ ಭಾಷಣದಲ್ಲಿ ಘೋಷಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ಬನ್ನೂರು ಗ್ರಾಮದ ಸೆಡಿಯಾಪು ಬಳಿ, ಗುರುತಿಸಿರುವ ಸ್ಥಳದಲ್ಲಿ ಜಿಲ್ಲಾ ಸರ್ಕಾರಿ ವೈದ್ಯಕೀಯ ಕಾಲೇಜು, ಬೋಧನಾ ಆಸ್ಪತ್ರೆ, ಹಾಸ್ಟೆಲ್ ಮತ್ತಿತರ ಮೂಲಸೌಲಭ್ಯಗಳನ್ನು ರೂ.549.79 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಒಪ್ಪಿಗೆ ಕೊಡಲಾಗಿದೆ.

ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ-2026:
ಈ ಭಾಗದ ಆರ್ಥಿಕ ಅಭಿವೃದ್ಧಿಗಾಗಿ, ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ-2026ನ್ನು ಅನುಮೋದಿಸಲಾಗಿದೆ.
ಪ್ರಸ್ತುತ ರಾಜ್ಯಕ್ಕೆ ಭೇಟಿ ನೀಡುವ ಪ್ರವಾಸಿಗರ ಪೈಕಿ ಶೇಕಡ 40- 45% ಮಂದಿ ಈ ಭಾಗಕ್ಕೆ ಭೇಟಿ ನೀಡುತ್ತಾರೆ. ಅಂದಾಜು 300 ಮಿಲಿಯನ್ ಯುಎಸ್ ಡಾಲರ್ (ರೂ.2876.44 ಕೋಟಿ) ವಿದೇಶಿ ವಿನಿಮಯ ಆದಾಯ ತರುತ್ತಿದೆ. ಈ ಹಿನ್ನೆಲೆ, ಅಗತ್ಯ ಮೂಲಸೌಕರ್ಯ ಕಲ್ಪಿಸಲು ಮತ್ತು ಸ್ಥಳೀಯರಿಗೆ ಉದ್ಯೋಗ ಒದಗಿಸುವ ದೃಷ್ಟಿಯಿಂದ, ಅತ್ಯಂತ ವ್ಯವಸ್ಥಿತವಾಗಿ ಪ್ರವಾಸೋದ್ಯಮ ಅಭಿವೃದ್ಧಿ ಮಾಡಲು ಈ ನೀತಿ ರೂಪಿಸಲಾಗಿದೆ.
ಕರಾವಳಿ ಜಿಲ್ಲೆಗಳ ದ್ವೀಪಗಳ ಅಭಿವೃದ್ಧಿ:
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಟ್ಟು 12 ದ್ವೀಪಗಳನ್ನು ಅಭಿವೃದ್ಧಿ ಪಡಿಸಲು ಅನುಮೋದನೆ ನೀಡಲಾಗಿದೆ. ಈ ಯೋಜನೆಗಳನ್ನು ಪಿಪಿಪಿ ಮಾದರಿಯಲ್ಲಿ ಡಿಸೈನ್-ಬಿಲ್ಡ್-ಫೈನಾನ್ಸ್-ಆಪರೇಟ್-ಟ್ರಾನ್ಸ್ಫರ್ (DBFOT) ಆಧಾರದ ಮೇಲೆ ಕೈಗೊಳ್ಳಲು ನಿರ್ಧರಿಸಲಾಗಿದೆ.
ಮಂಗಳೂರಿನ ಲೈಟ್ ಹೌಸ್ ಪ್ರವಾಸೋದ್ಯಮ & ಆತಿಥ್ಯ ಮೂಲಸೌಕರ್ಯ ಅಭಿವೃದ್ಧಿ:
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನಲ್ಲಿ ಲೈಟ್ ಹೌಸ್ (ದೀಪಸ್ತಂಭ) ಸುತ್ತಲಿನ 1.5 ಎಕರೆ ಪ್ರದೇಶದಲ್ಲಿ ಪಿಪಿಪಿ ಮಾದರಿಯಲ್ಲಿ ಡಿಸೈನ್-ಬಿಲ್ಡ್-ಫೈನಾನ್ಸ್-ಆಪರೇಟ್-ಟ್ರಾನ್ಸ್ಫರ್ (DBFOT) ಆಧಾರದ ಮೇಲೆ ಪ್ರವಾಸೋದ್ಯಮ ಹಾಗೂ ಆತಿಥ್ಯ ಮೂಲಸೌಕರ್ಯ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ.
ಪ್ರವಾಸೋದ್ಯಮ ಯೋಜನೆಗಳು:
ದಕ್ಷಿಣ ಕನ್ನಡ, ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ನಾಲ್ಕು ಸ್ಥಳಗಳಲ್ಲಿ ಒಟ್ಟು ರೂ.238 ಕೋಟಿ ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ಡಿಸೈನ್-ಬಿಲ್ಡ್-ಫೈನಾನ್ಸ್-ಆಪರೇಟ್-ಟ್ರಾನ್ಸ್ಫರ್ (DBFOT) ಆಧಾರದ ಮೇಲೆ ಪ್ರವಾಸೋದ್ಯಮ ಯೋಜನೆಗಳನ್ನು ಅಭಿವೃದ್ಧಿ ಪಡಿಸಲು ಸಚಿವ ಸಂಪುಟಯಲ್ಲಿ ಒಪ್ಪಿಗೆ ಕೊಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕೋಡಿಕಲ್ನಲ್ಲಿ ರೂ.73 ಕೋಟಿ ವೆಚ್ಚದಲ್ಲಿ 16.5 ಎಕರೆ ಪ್ರದೇಶದಲ್ಲಿ ರಿವರ್ಫ್ರಂಟ್ ವೆಲ್ನೆಸ್ ರೆಸಾರ್ಟ್ ಅಭಿವೃದ್ಧಿಪಡಿಸಲಾಗುವುದು.
ತಣ್ಣೀರುಭಾವಿಯಲ್ಲಿ ಲಭ್ಯವಿರುವ 4.97 ಎಕರೆ ಸ್ಥಳದಲ್ಲಿ ರೂ.53 ಕೋಟಿ ವೆಚ್ಚದಲ್ಲಿ ಪರಿಸರ ಸ್ನೇಹಿ ಬೀಚ್-ಫ್ರಂಟ್ ಗ್ಲಾಮಪಿಂಗ್, ಸಾಗರ ಅನುಭವ ಕೇಂದ್ರ, ಎಕ್ಸ್ಪೊ ವಲಯದೊಂದಿಗೆ ಪ್ರವಾಸೋದ್ಯಮ ಅಭಿವೃದ್ಧಿಪಡಿಸುವಿಕೆಗೆ ತೀರ್ಮಾನಿಸಲಾಗಿದೆ.
ಉಡುಪಿ ಜಿಲ್ಲೆಯ ತ್ರಾಸಿ-ಮರವಂತೆ ಬೀಚ್ನಲ್ಲಿ 7.07 ಎಕರೆ ಭೂಮಿಯಲ್ಲಿ ರೂ.48 ಕೋಟಿ ವೆಚ್ಚದಲ್ಲಿ ರೆಸಾರ್ಟ್, ಸಾಹಸ, ಮನರಂಜನಾ ವಲಯ ಹಾಗೂ ಮನರಂಜನಾ ಸೌಲಭ್ಯಗಳ ಅಭಿವೃದ್ಧಿಪಡಿಸಲಾಗುವುದು.
ಚಿಕ್ಕಮಗಳೂರು ಜಿಲ್ಲೆಯ ರಾವೂರಿನಲ್ಲಿ 3 ಎಕರೆ ಪ್ರದೇಶದಲ್ಲಿ ರೂ.64 ಕೋಟಿ ವೆಚ್ಚದಲ್ಲಿ ಪರಿಸರ-ವಿಹಾರಧಾಮದ ಅಭಿವೃದ್ಧಿಗೆ ನಿರ್ಧರಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕು ಸುರತ್ಕಲ್ ಹೋಬಳಿಯ ಬಡಗ ಎಕ್ಕಾರು ಗ್ರಾಮದಲ್ಲಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಹಾಗೂ ಕಲ್ಯಾಣ ಮಂಟಪ ನಿರ್ಮಾಣಕ್ಕಾಗಿ 10 ಎಕರೆ ಜಮೀನನ್ನು ತಿರುಪತಿ ತಿರುಮಲ ದೇವಸ್ಥಾನಂಗೆ (ಟಿಟಿಡಿ) ಹೆಸರಿಗೆ ಮಂಜೂರು ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ದಕ್ಷಿಣ ಕನ್ನಡದಲ್ಲಿ ಪ್ರಮುಖ ಸೇತುವೆ ನಿರ್ಮಾಣ:
ದಕ್ಷಿಣ ಕನ್ನಡ ಜಿಲ್ಲೆ, ಮುಲ್ಕಿ ತಾಲೂಕಿನ ಮುಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಾಮಸ್ಕಟ್ಟೆ-ಬಳ್ಕುಂಜೆ ಜಿಲ್ಲಾ ಮುಖ್ಯರಸ್ತೆಯ ಪಾಲಿಮಾರ್ ಸೇತುವೆಯನ್ನು ರೂ.25 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣ ಮಾಡಲು ಒಪ್ಪಿಗೆ ಕೊಡಲಾಗಿದೆ.
ಮಂಗಳೂರು-ಚೆರ್ವತ್ತೂರು-ಕರಾವಳಿ ಜಿಲ್ಲಾ ಮುಖ್ಯ ರಸ್ತೆಯಲ್ಲಿ ಕೋಟಿಪುರದಿಂದ ಬೋಳಾರದವರೆಗೆ ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿರುವ ಸೇತುವೆಗೆ ರೂ.50 ಕೋಟಿ ವೆಚ್ಚದಲ್ಲಿ ಸಂಪರ್ಕ ರಸ್ತೆ ಹಾಗೂ ಇತರೆ ಬಾಕಿ ಕಾಮಗಾರಿ ಪೂರ್ಣಗೊಳಿಸಲು ಅನುಮೋದನೆ ನೀಡಲಾಗಿದೆ.
ಕಾರವಾರ ವಿಮಾನ ನಿಲ್ದಾಣ ಅಭಿವೃದ್ಧಿ:
ಕಾರವಾರ ವಿಮಾನ ನಿಲ್ದಾಣ ಅಭಿವೃದ್ಧಿ ಯೋಜನೆಯ ವೆಚ್ಚವನ್ನು ರೂ.98.24 ಕೋಟಿಗಳಿಂದ ರೂ.250.05 ಕೋಟಿ ಗಳಿಗೆ ಹೆಚ್ಚಿಸಲು ಪರಿಷ್ಕೃತ ಆಡಳಿತಾತ್ಮಕ ಒಪ್ಪಿಗೆಯನ್ನು ಕೊಡಲಾಗಿದೆ.