ಮೋದಿಯವರ ನಾಯಕತ್ವದಲ್ಲಿ ಯುವಜನರಿಗೆ ಹೆಚ್ಚು ಅವಕಾಶ- ನಿತಿನ್ ನವೀನ್

ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಯುವಜನರ ಆಕಾಂಕ್ಷೆಗಳಿಗೆ ದ್ರೋಹ ಬಗೆದಿದೆ. ಕಾಂಗ್ರೆಸ್ ಆಡಳಿತದಲ್ಲಿ ಮಿತಿಮೀರಿದ ಭ್ರಷ್ಟಾಚಾರ ಮತ್ತು ದುರಾಡಳಿತವು ಜನರನ್ನು ಕಂಗೆಡುವಂತೆ ಮಾಡಿದೆ ಎಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ

May 25, 2026 - 21:38
ಮೋದಿಯವರ ನಾಯಕತ್ವದಲ್ಲಿ ಯುವಜನರಿಗೆ ಹೆಚ್ಚು ಅವಕಾಶ- ನಿತಿನ್ ನವೀನ್

ಬೆಂಗಳೂರು, ಮೇ 25: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ, ಭಾರತವು ಸೆಮಿಕಂಡಕ್ಟರ್ ಕ್ಷೇತ್ರ, ಸ್ಟಾರ್ಟ್‍ಅಪ್‍ಗಳು, ಡಿಜಿಟಲ್ ನಾವೀನ್ಯತೆ ಮತ್ತು ಕೌಶಲ್ಯಾಭಿವೃದ್ಧಿ ಕ್ಷೇತ್ರಗಳಲ್ಲಿ ಹೊಸ ಮೈಲುಗಲ್ಲುಗಳನ್ನು ತಲುಪುತ್ತಿದೆ. ಈ ಮೂಲಕ ನಮ್ಮ ಯುವಜನತೆಗೆ ಹಿಂದೆಂದೂ ಕಾಣದಂತಹ ಅವಕಾಶಗಳು ಸೃಷ್ಟಿಯಾಗಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಹೇಳಿದರು.

ಸೋಮವಾರ ಇಲ್ಲಿ ‘ಯೂತ್ ಫಾರ್ ನೇಷನ್' ಆಯೋಜಿಸಿದ್ದ "ಯುವ ಮನಸ್ಸುಗಳೊಂದಿಗೆ ಸಂವಾದ" ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಈ ವಿಷಯ ತಿಳಿಸಿದರು.

ವಿಕಸಿತ ಭಾರತದ ಸಂಕಲ್ಪವನ್ನು ಸಾಕಾರಗೊಳಿಸುವಲ್ಲಿ ಯುವಜನತೆಯ ಪಾತ್ರ ಮತ್ತು ಯುವ ನಾಯಕತ್ವದ ಪ್ರಾಮುಖ್ಯತೆಯ ಕುರಿತು ಅವರೊಂದಿಗೆ ಅರ್ಥಪೂರ್ಣ ಚರ್ಚೆಗಳನ್ನು ನಡೆಸಿದರು.

ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಯುವಜನರ ಆಕಾಂಕ್ಷೆಗಳಿಗೆ ದ್ರೋಹ ಬಗೆದಿದೆ. ಕಾಂಗ್ರೆಸ್ ಆಡಳಿತದಲ್ಲಿ ಮಿತಿಮೀರಿದ ಭ್ರಷ್ಟಾಚಾರ ಮತ್ತು ದುರಾಡಳಿತವು, ಭಾರತದ ಯುವಜನತೆಯ ಭವಿಷ್ಯ ಮತ್ತು ಸಾಮರ್ಥ್ಯದ ಬಗ್ಗೆ ಕಾಂಗ್ರೆಸ್ ಪಕ್ಷಕ್ಕಿರುವ ಸಂಪೂರ್ಣ ದೂರದೃಷ್ಟಿಯ ಕೊರತೆಯನ್ನು ಬಟಾಬಯಲು ಮಾಡಿದೆ ಎಂದು ಅವರು ನುಡಿದರು.

 ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ಪ್ರಮುಖರು ಭಾಗವಹಿಸಿದ್ದರು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.