ದೇಶದ ಆರ್ಥಿಕ ಬಿಕ್ಕಟ್ಟು ನಿವಾರಣೆ, ರಾಜ್ಯದಲ್ಲಿ ಉತ್ತಮ ಮಳೆಗಾಗಿ ತಿಮ್ಮಪ್ಪನ ಬಳಿ ಪ್ರಾರ್ಥನೆ: ಡಿ.ಕೆ. ಶಿವಕುಮಾರ್

ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ಬಹಳಷ್ಟು ಬದಲಾವಣೆಗಳನ್ನು, ಬಹಳಷ್ಟು ಅಭಿವೃದ್ಧಿಗಳನ್ನು ಮಾಡಿದೆ. ಶಿಸ್ತು, ಉತ್ತಮ ಶುಚಿತ್ವ ಕಾಪಾಡಿದೆ. ಉತ್ತಮ ಆಡಳಿತ ನಡೆಸುತ್ತಿದೆ. ಸರಕಾರ ಉತ್ತಮ ಕೆಲಸ ಮಾಡಿದೆ

May 19, 2026 - 13:53
ದೇಶದ ಆರ್ಥಿಕ ಬಿಕ್ಕಟ್ಟು ನಿವಾರಣೆ, ರಾಜ್ಯದಲ್ಲಿ ಉತ್ತಮ ಮಳೆಗಾಗಿ ತಿಮ್ಮಪ್ಪನ ಬಳಿ ಪ್ರಾರ್ಥನೆ: ಡಿ.ಕೆ. ಶಿವಕುಮಾರ್

ತಿರುಮಲ, ಮೇ 19: "ದೇಶವು ಆರ್ಥಿಕ ಬಿಕ್ಕಟ್ಟಿನಿಂದ ಬಳಲಬಾರದು. ಎಲ್ಲರಿಗೂ ಶಕ್ತಿ, ಉತ್ತಮ ಆರೋಗ್ಯ ಲಭಿಸಲಿ. ರಾಜ್ಯದಲ್ಲಿ ಉತ್ತಮ ಮಳೆ ಬರಲಿ ಎಂದು ಭಗವಂತ ವೆಂಕಟೇಶ್ವರನ ಬಳಿ ಪ್ರಾರ್ಥಿಸಿದ್ದೇನೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.

ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಮಲದಲ್ಲಿ ಮಂಗಳವಾರ ಶ್ರೀ ವೆಂಕಟೇಶ್ವರ ಸ್ವಾಮೀಯ ದರ್ಶನ ಪಡೆದು, ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

"ಇಡೀ ದೇಶ ಶಾಂತಿಯಿಂದ ಕೂಡಿರಲಿ. ಸವಾಲುಗಳನ್ನು ಸಮರ್ಥನೆವಾಗಿ ಎದುರಿಸಲಿ ಎಂದು ಕೋರಿಕೊಂಡಿದ್ದೇನೆ. ಈ ಮಹತ್ವದ ದಿನದಂದು ಇಲ್ಲಿಗೆ ಬಂದಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ಬಹಳ ಸಮಯದ ನಂತರ ಅಂದರೆ ಆರೇಳು ವರ್ಷಗಳ ನಂತರ ನಾನು ಇಲ್ಲಿಗೆ ಭೇಟಿ ನೀಡಿದ್ದೇನೆ. ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ಬಹಳಷ್ಟು ಬದಲಾವಣೆಗಳನ್ನು, ಬಹಳಷ್ಟು ಅಭಿವೃದ್ಧಿಗಳನ್ನು ಮಾಡಿದೆ. ಶಿಸ್ತು, ಉತ್ತಮ ಶುಚಿತ್ವ ಕಾಪಾಡಿದೆ. ಉತ್ತಮ ಆಡಳಿತ ನಡೆಸುತ್ತಿದೆ. ಸರಕಾರ ಉತ್ತಮ ಕೆಲಸ ಮಾಡಿದೆ. ನಾನು ಎಲ್ಲರಿಗೂ ಧನ್ಯವಾದ ಹೇಳುತ್ತೇನೆ" ಎಂದರು.

"ಶ್ರೀ ವೆಂಕಟೇಶ್ವರನ ದರ್ಶನದಿಂದ ಸಂತಸವಾಗಿದೆ. ಟಿಟಿಡಿಯ ಅಧ್ಯಕ್ಷರು ಕೂಡ ತಮ್ಮ ತಂಡದೊಂದಿಗೆ ಉತ್ತಮ ಕೆಲಸ ಮಾಡುತ್ತಿದ್ದಾರೆ. ಇಲ್ಲಿನ ಕಂದಾಯ ಸಚಿವರನ್ನು ಭೇಟಿ ಮಾಡಿದೆ. ಅವರೂ ಇಲ್ಲಿ ಅತ್ಯುತ್ತಮ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ನಾನು ಅವರೆಲ್ಲರಿಗೂ ಶುಭ ಹಾರೈಸುತ್ತೇನೆ" ಎಂದರು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.