ಪುತ್ತೂರು: 14ನೇ ಬ್ಯಾಚ್ನ 'ಉಚಿತ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಕ್ರಮ' ಯಶಸ್ವಿ
Puttur: ಬೊಳುವಾರಿನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿಯರಿಗಾಗಿ, 'ಉನ್ನತಿ ಫೌಂಡೇಶನ್' ವತಿಯಿಂದ ನಡೆಸಲಾದ 14ನೇ ಬ್ಯಾಚ್ನ 'ಉಚಿತ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಕ್ರಮ' ಯಶಸ್ವಿಯಾಗಿ ಮುಕ್ತಾಯಗೊಂಡಿತು.
ಪುತ್ತೂರು: ಬೊಳುವಾರಿನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿನಿಯರಿಗಾಗಿ, 'ಉನ್ನತಿ ಫೌಂಡೇಶನ್' ವತಿಯಿಂದ ನಡೆಸಲಾದ 14ನೇ ಬ್ಯಾಚ್ನ 'ಉಚಿತ ಉದ್ಯೋಗ ಕೌಶಲ್ಯ ತರಬೇತಿ ಕಾರ್ಯಕ್ರಮ' ಯಶಸ್ವಿಯಾಗಿ ಮುಕ್ತಾಯಗೊಂಡಿತು.
30 ದಿನಗಳ ಈ ತರಬೇತಿಯೂ ಉದ್ಯಮಕ್ಕೆ ಸಂಬಂಧಿಸಿದ ಕೌಶಲ್ಯಗಳನ್ನು ಒದಗಿಸುವುದರ ಮೇಲೆ ಕೇಂದ್ರೀಕರಿಸಿತ್ತು. ಪಠ್ಯಕ್ರಮದಲ್ಲಿ ರೆಸ್ಯೂಮ್ ಬರವಣಿಗೆ, ಸಂದರ್ಶನ ತಂತ್ರಗಳು, ಗುಂಪು ಚರ್ಚೆ, ರೋಲ್ ಪ್ಲೇ ಮತ್ತು ಸಂವಹನ ಕೌಶಲ್ಯಗಳ ಕುರಿತು ಪ್ರಾಯೋಗಿಕವಾಗಿ ಹೇಳಿಕೊಡಲಾಯಿತು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ.ನಂದಕಿಶೋರ್ ಎಸ್ ಅವರು ವಹಿಸಿದ್ದರು. 'ಕಳೆದ 4 ವರ್ಷಗಳಲ್ಲಿ 500ಕ್ಕೂ ಹೆಚ್ಚು ಅಂತಿಮ ವರ್ಷದ ವಿದ್ಯಾರ್ಥಿನಿಯರು, ಈ ತರಬೇತಿಯಿಂದ ಪ್ರಯೋಜನ ಪಡೆದಿದ್ದಾರೆ. ಇದು ಅನೇಕರಿಗೆ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ ಪಡೆಯಲು ಸಹಾಯ ಮಾಡಿದೆ ಎಂದರು.
ವಿದ್ಯಾರ್ಥಿ ಕಲ್ಯಾಣಾಧಿಕಾರಿ ಪ್ರೊ.ಪದ್ಮನಾಭ ವಿದ್ಯಾರ್ಥಿನಿಯರನ್ನು ಸಬಲೀಕರಣಗೊಳಿಸುವುದು ಹಾಗೂ ವೃತ್ತಿಪರ ಸವಾಲುಗಳಿಗೆ ಸಿದ್ಧಪಡಿಸುವ ಈ ಉಪಕ್ರಮವನ್ನು ಶ್ಲಾಘಿಸಿದರು.
ಉನ್ನತಿ ಫೌಂಡೇಶನ್ನ ದಿವ್ಯ, ತರಬೇತಿ ಬ್ಯಾಚ್ಗಳನ್ನು ಯಶಸ್ವಿಯಾಗಿ ನಡೆಸಲು ಬೆಂಬಲ ಕೊಟ್ಟ ಕಾಲೇಜು ಆಡಳಿತ ಮಂಡಳಿಗೆ ಕೃತಜ್ಞತೆ ಸಲ್ಲಿಸಿದರು.
ಐಕ್ಯೂಎಸಿ ಸಂಯೋಜಕ ಡಾ.ಎವೆರೆಸ್ಟ್ ರೋಡ್ರಿಗಸ್, ತರಬೇತಿಯಲ್ಲಿ ಕಲಿತ ಕೌಶಲ್ಯಗಳನ್ನು ತಮ್ಮ ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಅನುಷ್ಠಾನಗೊಳಿಸುವಂತೆ ವಿದ್ಯಾರ್ಥಿನಿಯರಿಗೆ ಕರೆ ನೀಡಿದರು.
ಪ್ರಜ್ಞಾ ಸ್ವಾಗತ ಭಾಷಣ ಮಾಡಿದರು. ಆಯಿಶತ್ ಸನಾ ನಿರೂಪಿಸಿದರು. ದೀಪಿಕಾ ವಂದಿಸಿದರು.