ಪುತ್ತೂರು: ರಸ್ತೆ ಸರಿಪಡಿಸುವಂತೆ ಪುತ್ತಿಲ ಪರಿವಾರದಿಂದ ಮನವಿ
Puttur: ಇಲ್ಲಿನ ಪುರುಷರಕಟ್ಟೆ-ಶಾಂತಿಗೋಡು-ಆನಡ್ಕ ಸಂಪರ್ಕ ರಸ್ತೆಯು ಮಾಯಂಗಲದಿಂದ ಕೂಡುರಸ್ತೆವರೆಗೆ ಸಂಪೂರ್ಣವಾಗಿ ಹದಗೆಟ್ಟಿದೆ. ಈ ರಸ್ತೆಯನ್ನು ಅತಿ ಶೀಘ್ರದಲ್ಲಿ ಸರಿಪಡಿಸಬೇಕೆಂದು, ಗ್ರಾಮೀಣಾಭಿವೃದ್ಧಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ರನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಹಾಗೂ ಪದಾಧಿಕಾರಿಗಳು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಪುತ್ತೂರು: ಇಲ್ಲಿನ ಪುರುಷರಕಟ್ಟೆ-ಶಾಂತಿಗೋಡು-ಆನಡ್ಕ ಸಂಪರ್ಕ ರಸ್ತೆಯು ಮಾಯಂಗಲದಿಂದ ಕೂಡುರಸ್ತೆವರೆಗೆ ಸಂಪೂರ್ಣವಾಗಿ ಹದಗೆಟ್ಟಿದೆ. ವಾಹನ ಸಂಚಾರಕ್ಕೆ ಯೋಗ್ಯವಲ್ಲದ ರೀತಿಯಲ್ಲಿದೆ.
ಈ ರಸ್ತೆಯನ್ನು ಅತಿ ಶೀಘ್ರದಲ್ಲಿ ಸರಿಪಡಿಸಬೇಕೆಂದು, ಗುರುವಾರ (ಜು.23) ಗ್ರಾಮೀಣಾಭಿವೃದ್ಧಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ರನ್ನು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಹಾಗೂ ಪದಾಧಿಕಾರಿಗಳು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಈ ವೇಳೆ ಟ್ರಸ್ಟಿನ ಪದಾಧಿಕಾರಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ವಿಶ್ವನಾಥ ಬಲ್ಯಾಯ, ಜಯರಾಮ ಪೂಜಾರಿ, ಲಕ್ಷ್ಮೀಪ್ರಸಾದ್ ಆನಾಜೆ, ಅವಿನಾಶ್ ಪುರುಷರಕಟ್ಟೆ ಹಾಗೂ ರಾಕೇಶ್ ಓಜಾಲ ಇದ್ದರು.
ತಕ್ಷಣ ಮನವಿಗೆ ಸ್ಪಂದಿಸಿದ ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಗ್ರಾಮದ ಪಿಡಿಒಗೆ ಹದಗೆಟ್ಟ ರಸ್ತೆ ಸ್ಥಳಕ್ಕೆ ಕಳುಹಿಸಿದ್ದಾರೆ. ಪುತ್ತಿಲ ಪರಿವಾರ ನಿಯೋಗ ಮತ್ತು ಗ್ರಾಮಸ್ಥರು ರಸ್ತೆಯನ್ನು ಕೂಡಲೇ ಸಂಚಾರಕ್ಕೆ ಯೋಗ್ಯವಾಗಿಸಬೇಕೆಂದು ಒತ್ತಾಯಿಸಿದ್ದಾರೆ. ಅವರು, ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.