ನರಿಮೊಗರು ಮರಾಠಿ ಸಮಾಜ ಸೇವಾ ಸಂಘ: ಜು.26ರಂದು ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ, ವಾರ್ಷಿಕ ಸಭೆ
Puttur: ನರಿಮೊಗರು ಮರಾಠಿ ಸಮಾಜ ಸೇವಾ ಸಂಘದಿಂದ ಜು.26ರಂದು ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಾರ್ಷಿಕ ಸಭೆ ನಡೆಯಲಿದೆ.
ಪುತ್ತೂರು: ನರಿಮೊಗರು, ಮುಂಡೂರು, ಶಾಂತಿಗೋಡು ಗ್ರಾಮೀಣ ಪ್ರದೇಶದ ವ್ಯಾಪ್ತಿಯನ್ನು ಒಳಗೊಂಡಿರುವ ನರಿಮೊಗರು ಮರಾಠಿ ಸಮಾಜ (Narimogaru marati Samaja) ಸೇವಾ ಸಂಘದಿಂದ ಜು.26 ರಂದು ಗಣಹೋಮ, ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಾರ್ಷಿಕ ಮಹಾಸಭೆ ನಡೆಯಲಿದೆ.
ಸಂಘದ ಸಮಾಜ ಮಂದಿರದಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ನರಿಮೊಗರು ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ಮಹಾಲಿಂಗ ನಾಯ್ಕ ನರಿಮೊಗರು ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಕೊಂಬೆಟ್ಟು ಮರಾಠಿ ಸಮಾಜ ಸೇವಾ ಸಂಘದ ಅಧ್ಯಕ್ಷ ಕರುಣಾಕರ ಟಿ. ಪಾಂಗ್ಲಾಯಿ, ನಿವೃತ್ತ ಉಪ ನೋಂದಾಣಾಧಿಕಾರಿ ಹರಿಯಪ್ಪ ನಾಯ್ಕ ನೈತಾಡಿ, ಅಮ್ಮುಂಜ ಪಾಲಿಂಜೆ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ರಾಮಣ್ಣ ನಾಯ್ಕ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಮುದಾಯದ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಕೃಷ್ಣ ನಾಯ್ಕ ಎನ್. ಸಂಪ್ಯ, ಕೋಶಾಧಿಕಾರಿ ಈಶ್ವರ ನಾಯ್ಕ ಅಜಲಾಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.