ಸರಗೂರು ಹುಲಿ ದಾಳಿ ವ್ಯಕ್ತಿ ಸಾವು: ನಿರ್ಲಕ್ಷ್ಯ ಇದ್ದರೆ ಕ್ರಮ- ಈಶ್ವರ ಖಂಡ್ರೆ

ಹುಲಿ ದೂರು ಬಂದಿದ್ದರೂ ಬೋನು ಇಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರೆ, ಎಚ್.ಡಿ. ಕೋಟೆ, ಸರಗೂರಿನಲ್ಲೇ ಮರಣೋತ್ತರ ಪರೀಕ್ಷೆ ನಡೆಸಲು ಅವಕಾಶ ಇದ್ದರೂ, ಮೈಸೂರಿಗೆ ಏಕೆ ತಂದರು ಎಂಬ ಬಗ್ಗೆ ತನಿಖೆ ಮಾಡಿಸಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

Oct 27, 2025 - 13:56
ಸರಗೂರು ಹುಲಿ ದಾಳಿ ವ್ಯಕ್ತಿ ಸಾವು: ನಿರ್ಲಕ್ಷ್ಯ ಇದ್ದರೆ ಕ್ರಮ- ಈಶ್ವರ ಖಂಡ್ರೆ


ಮೈಸೂರು, ಅ.27: ಸರಗೂರು ತಾಲೂಕು ಬೆಣ್ಣೆಗೆರೆ (ಮುಳ್ಳೂರು) ಬಳಿ ನಿನ್ನೆ ನಡೆದ ಹುಲಿ ದಾಳಿ ತೀವ್ರ ನೋವು ತಂದಿದೆ. ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ  ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಅವರು ಕೆ.ಆರ್. ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ, ನಿನ್ನೆ ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರ್ ಮೃತದೇಹಕ್ಕೆ ಅಂತಿಮ ನಮನ ಸಲ್ಲಿಸಿದರು.
ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹುಲಿ ದೂರು ಬಂದಿದ್ದರೂ ಬೋನು ಇಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರೆ, ಎಚ್.ಡಿ. ಕೋಟೆ, ಸರಗೂರಿನಲ್ಲೇ ಮರಣೋತ್ತರ ಪರೀಕ್ಷೆ ನಡೆಸಲು ಅವಕಾಶ ಇದ್ದರೂ, ಮೈಸೂರಿಗೆ ಏಕೆ ತಂದರು ಎಂಬ ಬಗ್ಗೆ ತನಿಖೆ ಮಾಡಿಸಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಮಾನವ ವನ್ಯಜೀವಿ ಸಂಘರ್ಷ ಇಂದು ನಿನ್ನೆಯದಲ್ಲ ಹಿಂದಿನಿಂದಲೂ ಇದೆ. ಅರಣ್ಯ ದಂಚಿನ ಗ್ರಾಮದ ಜನರು ವನ್ಯ ಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಇಂದಿನ ಅಗತ್ಯವಾಗಿದೆ ಎಂದು ತಿಳಿಸಿದರು.  
ಸ್ಪಷ್ಟನೆ:
ಸರಗೂರು ಬಳಿ ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರ್ ಮೃತದೇಹವನ್ನು ಮೈಸೂರಿಗೆ ತಂದಿರುವ ವಿಚಾರ ತಮಗೆ ಮೈಸೂರಿಗೆ ಬರುವ ಮಾರ್ಗದಲ್ಲಿ ತಿಳಿಯಿತು. ಅಂತಿಮ ನಮನ ಸಲ್ಲಿಸಲು ಬಂದಿದ್ದೇನೆ. ಮೈಸೂರಿಗೆ ಏಕೆ ಪಾರ್ಥವ ಶರೀರ ತಂದಿದ್ದಾರೆ ಎಂಬುದು ತಮಗೆ ತಿಳಿದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಸಚಿವರು ತಿಳಿಸಿದರು.

Day2Day News Bureau Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್‌ ಮಾಧ್ಯಮ ಸಂಸ್ಥೆ. ವೆಬ್‌ ನ್ಯೂಸ್‌ ಪೋರ್ಟಲ್‌ನಿಂದ ಹಿಡಿದು ಇನ್‌ಸ್ಟಾ, ಎಕ್ಸ್, ಫೇಸ್‌ಬುಕ್‌, ಯೂಟ್ಯೂಬ್‌, ನ್ಯೂಸ್‌ ಆಪ್‌ವರೆಗೆ ಎಲ್ಲ ಡಿಜಿಟಲ್‌ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್‌ ಆಪ್‌. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್‌ಫಾರ್ಮ್‌ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.