ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳಲ್ಲಿ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆ ತರಬೇತಿ ಉದ್ಘಾಟನೆ
Puttur: ಬಡಗನ್ನೂರು ಪಟ್ಟೆಯ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳಲ್ಲಿ 'ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆ'ಯ ಪೂರ್ವಭಾವಿ ತಯಾರಿ ತರಗತಿಗಳನ್ನು ಉದ್ಘಾಟಿಸಲಾಯಿತು.
ಪುತ್ತೂರು: 'ನಮ್ಮ ಸಾಧನೆಯ ಫಲ ದೀರ್ಘಕಾಲ ದೊರೆಯುವಂತಾಗಬೇಕು. ಇದನ್ನು ವಿದ್ಯಾರ್ಥಿಗಳು ಮನಗಂಡು ನಿರಂತರ ಅಧ್ಯಯನದಲ್ಲಿ ತೊಡಗಿಕೊಳ್ಳಬೇಕು' ಎಂದು ದ್ವಾರಕಾ ಪ್ರತಿಷ್ಠಾನದ ಕಾರ್ಯದರ್ಶಿ, ಶ್ರೀ ಕೃಷ್ಣ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿ ನಿರ್ದೇಶಕ ಗಣರಾಜ ಕುಂಬ್ಳೆ ಹೇಳಿದರು.
ಬಡಗನ್ನೂರು ಪಟ್ಟೆಯ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳಲ್ಲಿ 'ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆ'ಯ ಪೂರ್ವಭಾವಿ ತಯಾರಿ ತರಗತಿಗಳನ್ನು ಉದ್ಘಾಟಿಸಿ, ಮಾತನಾಡಿದರು.

ಸಂಸ್ಥೆಯ ಮುಖ್ಯ ಶಿಕ್ಷಕಿ ಸುಮನಾ ಮಾತಾಜಿ ಪ್ರಾಸ್ತಾವಿಕ ಮಾತುಗಳನ್ನಾಡಿ, ಸ್ವಾಗತಿಸಿದರು. ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪ್ರತಿಭಾನ್ವೇಷಣೆ ಪರೀಕ್ಷೆಗೆ ಹಾಜರಾಗುವ 8ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಹಾಜರಿದ್ದರು. ಭವಿತಾ ಮಾತಾಜಿ ನಿರೂಪಿಸಿ, ವಂದಿಸಿದರು.
Day2day News ನವ ಮಾಧ್ಯಮದ ವೃತ್ತಿಪರ ಡಿಜಿಟಲ್ ಮಾಧ್ಯಮ ಸಂಸ್ಥೆ. ವೆಬ್ ನ್ಯೂಸ್ ಪೋರ್ಟಲ್ನಿಂದ ಹಿಡಿದು ಇನ್ಸ್ಟಾ, ಎಕ್ಸ್, ಫೇಸ್ಬುಕ್, ಯೂಟ್ಯೂಬ್, ನ್ಯೂಸ್ ಆಪ್ವರೆಗೆ ಎಲ್ಲ ಡಿಜಿಟಲ್ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ - ಮಾಹಿತಿಯನ್ನು ಸರಳ, ಸಂಕ್ಷಿಪ್ತವಾಗಿ ನೀಡುತ್ತದೆ. ಜತೆಗೆ Day2day Short News ಕರ್ನಾಟಕದ ಮೊದಲ ಶಾರ್ಟ್ ಆಪ್. Swipe ಮಾಡಿ ಸುದ್ದಿ ಓದಿ. ನಮ್ಮ ಎಲ್ಲ ಪ್ಲಾಟ್ಫಾರ್ಮ್ಗಳಲ್ಲಿ ಸುದ್ದಿ & ಜಾಹೀರಾತು ನೀಡಲು 7070708646ಗೆ ಸಂಪರ್ಕಿಸಿ.