Dharmendra Pradhan: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ
Dharmendra Pradhan: ಕಾಕ್ರೋಚ್ ಜನತಾ ಪಾರ್ಟಿ ಒತ್ತಡಕ್ಕೆ ಮಣಿದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ ಒತ್ತಡಕ್ಕೆ ಮಣಿದು, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ರವಾನಿಸಿದ್ದಾರೆ.
2026ರ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ ಪ್ರತಿಭಟನೆಗಳು ನಡೆದವು. ಈ ಹಿನ್ನೆಲೆ, ಅವರ ತಲೆದಂಡವಾಗಿದೆ.
ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ 'ಜಂತರ್ ಮಂತರ್'ನಲ್ಲಿ ಹೋರಾಟಗಾರರು, ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಬಿಗಿಪಟ್ಟು ಹಿಡಿದು ಮುಷ್ಕರ ನಡೆಸುತ್ತಿದ್ದರು.
ಈ ಬಗ್ಗೆ 'ಎಕ್ಸ್'ನಲ್ಲಿ ಧರ್ಮೇಂದ್ರ ಪ್ರಧಾನ್ ಪೋಸ್ಟ್ ಮಾಡಿದ್ದಾರೆ. 'ಈ ವಿಚಾರದಲ್ಲಿ ರಾಷ್ಟ್ರ ವಿರೋಧಿ ಶಕ್ತಿಗಳು ಗೊಂದಲ ಸೃಷ್ಟಿಸುವುದನ್ನು ತಡೆಯಲು, ನಾನು ರಾಜೀನಾಮೆ ತೀರ್ಮಾನವನ್ನು ತೆಗೆದುಕೊಂಡಿದ್ದೇನೆ. ದೇಶದ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಸಚಿವ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ' ಎಂದು ಬರೆದುಕೊಂಡಿದ್ದಾರೆ.
ಮೇ 3 ರಂದು ನಡೆದ ನೀಟ್ ಪರೀಕ್ಷೆಯಲ್ಲಿ ಅಕ್ರಮಗಳು ಬೆಳಕಿಗೆ ಬಂದಿದ್ದವು. ಆ ಬಳಿಕ, ಕೇಂದ್ರ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು. ಪರೀಕ್ಷೆಯನ್ನು ರದ್ದುಗೊಳಿಸಿ, ಮರು ಪರೀಕ್ಷೆಯನ್ನು ನಡೆಸಿ ಜುಲೈ 16 ರಂದು ಫಲಿತಾಂಶವನ್ನು ಪ್ರಕಟಿಸಿತ್ತು. ಮುಂದಿನ ವರ್ಷದಿಂದ ಪರೀಕ್ಷೆಯನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸುವುದಾಗಿ ತಿಳಿಸಿತ್ತು.