ಈ ದಿನದ ರಾಶಿ ಭವಿಷ್ಯ

07-06-2025

Jun 7, 2025 - 03:30
ಈ ದಿನದ ರಾಶಿ ಭವಿಷ್ಯ

ಅದೃಷ್ಟ ಸಂಖ್ಯೆ  6

೧.ಮೇಷ:

ಇಷ್ಟವಿಲ್ಲದಿದ್ದರೂ ಮಾಡಲೇಬೇಕಾದ  ತಿರುಗಾಟ! ಉದ್ಯೋಗ, ಉದ್ಯಮ ಎರಡರಲ್ಲೂ ನೆಮ್ಮದಿಯ ದಿನ. ಆಪ್ತರಿಂದ ಅಯಾಚಿತ ನೆರವು ಲಭ್ಯ. ಗೃಹಿಣಿಯರ  ಆರೋಗ್ಯದ ಕಡೆಗೆ ಗಮನ ಇರಲಿ. ದಕ್ಷಿಣ ದಿಕ್ಕಿನಿಂದ ಶುಭವಾರ್ತೆ. ಗಣೇಶ ಸ್ತೋತ್ರ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.

೨.ವೃಷಭ:


ಮನಸ್ಸನ್ನು ಹಗುರಗೊಳಿಸಲು ಬರವಣಿಗೆ. ಉದ್ಯೋಗದಲ್ಲಿ ಪದೋನ್ನತಿ. ಸರಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಕೆಲಸದ ಒತ್ತಡ. ಉದ್ಯಮಗಳಲ್ಲಿ ಉತ್ಪಾದನೆ ಹೆಚ್ಚಳ. ಸಾರಿಗೆ ವ್ಯವಹಾರಸ್ಥರಿಗೆ ಶುಭದಿನ. ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ, ಗುರುಸ್ತೋತ್ರ ಓದಿ.
  
   

೩. ಮಿಥುನ:

 ಪಿತ್ತ ನೆತ್ತಿಗೇರಿದವರೊಡನೆ ವಾದ ಅಪಾಯಕರ! ಎಲ್ಲ ಕ್ಷೇತ್ರಗಳಲ್ಲಿ  ಹಿತಶತ್ರುಗಳಿಂದ ತೊಂದರೆ. ಉದ್ಯಮದಲ್ಲಿ  ಸಾಮಾನ್ಯ ಪ್ರಗತಿ.  ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣದ ಸಾಧ್ಯತೆ. ಸಂಗಾತಿಗೆ ಮನಸ್ಥೈರ್ಯ ತುಂಬಲು ಪ್ರಯತ್ನ. ಗಣೇಶ ದ್ವಾದಶನಾಮ ಸ್ತೋತ್ರ, ಶಿವಪಂಚಾಕ್ಷರ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.


೪.ಕರ್ಕಾಟಕ:

 ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ.  ಉದ್ಯಮದ ಉತ್ಪಾದನೆಗಳಲ್ಲಿ   ವೈವಿಧ್ಯ ಕಾಯ್ದುಕೊಳ್ಳುವ ಪ್ರಯತ್ನ. ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ವೃದ್ಧಿ. ಅಲ್ಪಾವಧಿ ಹೂಡಿಕೆ ಬೇಡ. ಎಲ್ಲ ಮನೆಮಂದಿಗೂ ಉಲ್ಲಾಸದ ವಾತಾವರಣ. ಸಂಕಷ್ಟನಾಶನ ಗಣೇಶ ಸ್ತೋತ್ರ, ರಾಮರಕ್ಷಾ ಸ್ತೋತ್ರ, ಗುರುಸ್ತೋತ್ರ ಓದಿ.


೫_ಸಿಂಹ:

 ಉದ್ಯೋಗದ ಬಂಧನದಿಂದ ಮುಕ್ತರಾಗುವ ಪ್ರಯತ್ನ.  ಹೊಸ ಪರಿಚಯಸ್ಥರ ಸಹಾಯದಿಂದ  ವ್ಯಾಪಾರ ವೃದ್ಧಿ. ಕಟ್ಟಡ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ. ಸ್ಥಿರಾಸ್ತಿ ವ್ಯವಹಾರ ನಡೆಸುವವರಿಗೆ  ಎದುರಾಳಿಗಳಿಂದ ತೊಂದರೆ. ಹಿರಿಯರ ಸಕಾಲಿಕ ಸಲಹೆಯಿಂದ ಉಪಕಾರ. ಗಣೇಶ ಅಷ್ಟಕ, ಶಿವಕವಚ, ದುರ್ಗಾ ಸ್ತೋತ್ರ ಓದಿ.


೬.ಕನ್ಯಾ:

ಶಾಂತಿ,ಸಮಾಧಾನದ ಕ್ಷಣಗಳು. ಆತ್ಮೀಯರ ಭೇಟಿಯಿಂದ ಹರ್ಷ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಉದ್ಯೋಗಾಸಕ್ತರಿಗೆ ಉತ್ತಮ ಅವಕಾಶಗಳು. ಹಣದ ಬೆಳೆಗಳಿಂದ ಸಾಮಾನ್ಯ ಲಾಭ. ಗಣೇಶ ಅಷ್ಟಕ, ವೇದಸಾರ ಶಿವಸ್ತೋತ್ರ, ಕನಕಧಾರಾ ಸ್ತೋತ್ರ ಓದಿ.


೭ತುಲಾ:

ಎಲ್ಲ ಸಮಸ್ಯೆಗಳಿಗೂ ಯೋಗ್ಯ ಪರಿಹಾರ.  ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ . ಅಕಸ್ಮಾತ್ ಧನಾಗಮ.  ಗೃಹಾಲಂಕಾರಕ್ಕೆ ಧನವ್ಯಯ. ಕುಶಲಕರ್ಮಿಗಳ ಕೃತಿಗಳಿಗೆ ಉತ್ತಮ ಬೇಡಿಕೆ. ಗಣೇಶ ಪಂಚರತ್ನ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ಮಹಾಲಕ್ಷ್ಮಿ ಅಷ್ಟಕ ಓದಿ.


೮.ವೃಶ್ಚಿಕ:

 ಪಿತ್ರಾರ್ಜಿತ ಕೃಷಿಭೂಮಿಗೆ ಸಂದರ್ಶನ. ಉದ್ಯೋಗ ಸ್ಥಾನದಲ್ಲಿ ಹಿರಿತನಕ್ಕೆ ಗೌರವ. ಪಾಲುದಾರರ ಸಹಕಾರದಿಂದ ಉದ್ಯಮ ವೃದ್ಧಿ.  ಗೃಹಿಣಿಯರ ಸ್ವಾವಲಂಬನೆ ಯೋಜನೆ  ಉನ್ನತ ಸ್ಥಿತಿಯಲ್ಲಿ.ತರಕಾರಿ, ಹಣ್ಣು, ತರಕಾರಿ ವ್ಯಾಪಾರಿಗಳಿಗೆ ಲಾಭ. ಗಣೇಶ ಕವಚ ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ಗುರುಸ್ತೋತ್ರ ಓದಿ.

೯. ಧನು:

 ಸುಲಭವಾಗಿ ಸಂಸಾರ ನಿರ್ವಹಣೆ. ಉದ್ಯೋಗ ಸ್ಥಾನದಲ್ಲಿ ಸಹಚರರಿಂದ ಗೌರವ.  ಸಣ್ಣ ಪ್ರಮಾಣದ  ಉದ್ಯಮಗಳ ಅಭಿವೃದ್ಧಿ. ಬಾಳ ಸಂಗಾತಿಯ ಆರೋಗ್ಯ ಸುಧಾರಣೆ‌. ಕುಟುಂಬದ ಮನೆಯಲ್ಲಿ ದೇವೀ ಆರಾಧನೆ. ಗಣೇಶ ಪಂಚರತ್ನ, ವಿಷ್ಣು ಸಹಸ್ರನಾಮ, ಮಹಾಲಕ್ಷ್ಮಿ ಅಷ್ಟಕ ಓದಿ.


೧೦. ಮಕರ:
 ಉದ್ಯೋಗ, ವ್ಯವಹಾರಗಳಲ್ಲಿ ನೆಮ್ಮದಿ.  ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ನಿವೇಶನ ಖರೀದಿ- ಮಾರಾಟಗಾರರಿಗೆ  ಅನುಕೂಲ. ಕೃಷ್ಯುತ್ಪನ್ನಗಳ ಮಾರಾಟದಿಂದ ಲಾಭ. ಪೂಜಾಸಾಮಗ್ರಿ ವ್ಯಾಪಾರಿಗಳ ಆದಾಯ ವೃದ್ಧಿ. ಗಣೇಶ ಕವಚ ದತ್ತಾತ್ರೇಯ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.

೧೧.ಕುಂಭ:

 ಹೂಡಿಕೆಗಳಿಂದ ಉತ್ತಮ ಲಾಭ. ಉದ್ಯಮದಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ದೂರದಲ್ಲಿರುವ ಬಂಧುಗಳ  ಭೇಟಿ. ಸೇವಾಕಾರ್ಯಗಳಲ್ಲಿ ಕೈಜೋಡಿಸಲು ಎಲ್ಲರ ಪೂರ್ಣ ಸಹಕಾರ. ಮುದ್ರಣ ಸಾಮಗ್ರಿ ವಿತರಕರ ವ್ಯಾಪಾರ ವೃದ್ಧಿ. ಗಣಪತಿ ಅಥರ್ವಶೀರ್ಷ, ರಾಮ ಭುಜಂಗಪ್ರಯಾತ ಸ್ತೋತ್ರ, ಶನಿಸ್ತೋತ್ರ ಓದಿ.

೧೨.ಮೀನ:

ಅಗಣಿತ  ಶುಭಫಲಗಳ ದಿನ. ಉದ್ಯೋಗ ಸ್ಥಾನದಲ್ಲಿ ಕೀರ್ತಿ. ಸರಕಾರಿ ಕಚೇರಿಗಳಲ್ಲಿ ಅನುಕೂಲಕರ ಸ್ಪಂದನ. ಅಪರಿಚಿತ  ವ್ಯಕ್ತಿಗಳಿಂದ  ಅನಿರೀಕ್ಷಿತ ಸಹಾಯ.  ರಾಜಕಾರಣಿಯ ಭೇಟಿಯಿಂದ ವ್ಯವಹಾರಕ್ಕೆ ಸಹಾಯ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.