ದಿನ ಭವಿಷ್ಯ

ಅದೃಷ್ಟ ಸಂಖ್ಯೆ 6
೧.ಮೇಷ:
ಇಷ್ಟವಿಲ್ಲದಿದ್ದರೂ ಮಾಡಲೇಬೇಕಾದ ತಿರುಗಾಟ! ಉದ್ಯೋಗ, ಉದ್ಯಮ ಎರಡರಲ್ಲೂ ನೆಮ್ಮದಿಯ ದಿನ. ಆಪ್ತರಿಂದ ಅಯಾಚಿತ ನೆರವು ಲಭ್ಯ. ಗೃಹಿಣಿಯರ ಆರೋಗ್ಯದ ಕಡೆಗೆ ಗಮನ ಇರಲಿ. ದಕ್ಷಿಣ ದಿಕ್ಕಿನಿಂದ ಶುಭವಾರ್ತೆ. ಗಣೇಶ ಸ್ತೋತ್ರ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.
೨.ವೃಷಭ:
ಮನಸ್ಸನ್ನು ಹಗುರಗೊಳಿಸಲು ಬರವಣಿಗೆ. ಉದ್ಯೋಗದಲ್ಲಿ ಪದೋನ್ನತಿ. ಸರಕಾರಿ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಕೆಲಸದ ಒತ್ತಡ. ಉದ್ಯಮಗಳಲ್ಲಿ ಉತ್ಪಾದನೆ ಹೆಚ್ಚಳ. ಸಾರಿಗೆ ವ್ಯವಹಾರಸ್ಥರಿಗೆ ಶುಭದಿನ. ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ, ಗುರುಸ್ತೋತ್ರ ಓದಿ.
೩. ಮಿಥುನ:
ಪಿತ್ತ ನೆತ್ತಿಗೇರಿದವರೊಡನೆ ವಾದ ಅಪಾಯಕರ! ಎಲ್ಲ ಕ್ಷೇತ್ರಗಳಲ್ಲಿ ಹಿತಶತ್ರುಗಳಿಂದ ತೊಂದರೆ. ಉದ್ಯಮದಲ್ಲಿ ಸಾಮಾನ್ಯ ಪ್ರಗತಿ. ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣದ ಸಾಧ್ಯತೆ. ಸಂಗಾತಿಗೆ ಮನಸ್ಥೈರ್ಯ ತುಂಬಲು ಪ್ರಯತ್ನ. ಗಣೇಶ ದ್ವಾದಶನಾಮ ಸ್ತೋತ್ರ, ಶಿವಪಂಚಾಕ್ಷರ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
೪.ಕರ್ಕಾಟಕ:
ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಉದ್ಯಮದ ಉತ್ಪಾದನೆಗಳಲ್ಲಿ ವೈವಿಧ್ಯ ಕಾಯ್ದುಕೊಳ್ಳುವ ಪ್ರಯತ್ನ. ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ವೃದ್ಧಿ. ಅಲ್ಪಾವಧಿ ಹೂಡಿಕೆ ಬೇಡ. ಎಲ್ಲ ಮನೆಮಂದಿಗೂ ಉಲ್ಲಾಸದ ವಾತಾವರಣ.ಸಂಕಷ್ಟನಾಶನ ಗಣೇಶ ಸ್ತೋತ್ರ, ರಾಮರಕ್ಷಾ ಸ್ತೋತ್ರ, ಗುರುಸ್ತೋತ್ರ ಓದಿ.
೫_ಸಿಂಹ:
ಉದ್ಯೋಗದ ಬಂಧನದಿಂದ ಮುಕ್ತರಾಗುವ ಪ್ರಯತ್ನ. ಹೊಸ ಪರಿಚಯಸ್ಥರ ಸಹಾಯದಿಂದ ವ್ಯಾಪಾರ ವೃದ್ಧಿ. ಕಟ್ಟಡ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ. ಸ್ಥಿರಾಸ್ತಿ ವ್ಯವಹಾರ ನಡೆಸುವವರಿಗೆ ಎದುರಾಳಿಗಳಿಂದ ತೊಂದರೆ. ಹಿರಿಯರ ಸಕಾಲಿಕ ಸಲಹೆಯಿಂದ ಉಪಕಾರ. ಗಣೇಶ ಅಷ್ಟಕ, ಶಿವಕವಚ, ದುರ್ಗಾ ಸ್ತೋತ್ರ ಓದಿ.
೬.ಕನ್ಯಾ:
ಶಾಂತಿ,ಸಮಾಧಾನದ ಕ್ಷಣಗಳು. ಆತ್ಮೀಯರ ಭೇಟಿಯಿಂದ ಹರ್ಷ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಉದ್ಯೋಗಾಸಕ್ತರಿಗೆ ಉತ್ತಮ ಅವಕಾಶಗಳು. ಹಣದ ಬೆಳೆಗಳಿಂದ ಸಾಮಾನ್ಯ ಲಾಭ. ಗಣೇಶ ಅಷ್ಟಕ, ವೇದಸಾರ ಶಿವಸ್ತೋತ್ರ, ಕನಕಧಾರಾ ಸ್ತೋತ್ರ ಓದಿ.
೭ತುಲಾ:
ಎಲ್ಲ ಸಮಸ್ಯೆಗಳಿಗೂ ಯೋಗ್ಯ ಪರಿಹಾರ. ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್ ಧನಾಗಮ. ಗೃಹಾಲಂಕಾರಕ್ಕೆ ಧನವ್ಯಯ. ಕುಶಲಕರ್ಮಿಗಳ ಕೃತಿಗಳಿಗೆ ಉತ್ತಮ ಬೇಡಿಕೆ. ಗಣೇಶ ಪಂಚರತ್ನ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ಮಹಾಲಕ್ಷ್ಮಿ ಅಷ್ಟಕ ಓದಿ.
೮.ವೃಶ್ಚಿಕ:
ಪಿತ್ರಾರ್ಜಿತ ಕೃಷಿಭೂಮಿಗೆ ಸಂದರ್ಶನ. ಉದ್ಯೋಗ ಸ್ಥಾನದಲ್ಲಿ ಹಿರಿತನಕ್ಕೆ ಗೌರವ.ಪಾಲುದಾರರ ಸಹಕಾರದಿಂದ ಉದ್ಯಮ ವೃದ್ಧಿ. ಗೃಹಿಣಿಯರ ಸ್ವಾವಲಂಬನೆ ಯೋಜನೆ ಉನ್ನತ ಸ್ಥಿತಿಯಲ್ಲಿ. ತರಕಾರಿ, ಹಣ್ಣು, ತರಕಾರಿ ವ್ಯಾಪಾರಿಗಳಿಗೆ ಲಾಭ. ಗಣೇಶ ಕವಚ ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ಗುರುಸ್ತೋತ್ರ ಓದಿ.
೯. ಧನು:
ಸುಲಭವಾಗಿ ಸಂಸಾರ ನಿರ್ವಹಣೆ. ಉದ್ಯೋಗ ಸ್ಥಾನದಲ್ಲಿ ಸಹಚರರಿಂದ ಗೌರವ. ಸಣ್ಣ ಪ್ರಮಾಣದ ಉದ್ಯಮಗಳ ಅಭಿವೃದ್ಧಿ. ಬಾಳ ಸಂಗಾತಿಯ ಆರೋಗ್ಯ ಸುಧಾರಣೆ. ಕುಟುಂಬದ ಮನೆಯಲ್ಲಿ ದೇವೀ ಆರಾಧನೆ. ಗಣೇಶ ಪಂಚರತ್ನ, ವಿಷ್ಣು ಸಹಸ್ರನಾಮ, ಮಹಾಲಕ್ಷ್ಮಿ ಅಷ್ಟಕ ಓದಿ.
೧೦. ಮಕರ:
ಉದ್ಯೋಗ, ವ್ಯವಹಾರಗಳಲ್ಲಿ ನೆಮ್ಮದಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ನಿವೇಶನ ಖರೀದಿ- ಮಾರಾಟಗಾರರಿಗೆ ಅನುಕೂಲ. ಕೃಷ್ಯುತ್ಪನ್ನಗಳ ಮಾರಾಟದಿಂದ ಲಾಭ. ಪೂಜಾಸಾಮಗ್ರಿ ವ್ಯಾಪಾರಿಗಳ ಆದಾಯ ವೃದ್ಧಿ. ಗಣೇಶ ಕವಚ ದತ್ತಾತ್ರೇಯ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.
೧೧.ಕುಂಭ:
ಹೂಡಿಕೆಗಳಿಂದ ಉತ್ತಮ ಲಾಭ. ಉದ್ಯಮದಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ದೂರದಲ್ಲಿರುವ ಬಂಧುಗಳ ಭೇಟಿ. ಸೇವಾಕಾರ್ಯಗಳಲ್ಲಿ ಕೈಜೋಡಿಸಲು ಎಲ್ಲರ ಪೂರ್ಣ ಸಹಕಾರ. ಮುದ್ರಣ ಸಾಮಗ್ರಿ ವಿತರಕರ ವ್ಯಾಪಾರ ವೃದ್ಧಿ. ಗಣಪತಿ ಅಥರ್ವಶೀರ್ಷ, ರಾಮ ಭುಜಂಗಪ್ರಯಾತ ಸ್ತೋತ್ರ, ಶನಿಸ್ತೋತ್ರ ಓದಿ.
೧೨.ಮೀನ:
ಅಗಣಿತ ಶುಭಫಲಗಳ ದಿನ. ಉದ್ಯೋಗ ಸ್ಥಾನದಲ್ಲಿ ಕೀರ್ತಿ. ಸರಕಾರಿ ಕಚೇರಿಗಳಲ್ಲಿ ಅನುಕೂಲಕರ ಸ್ಪಂದನ. ಅಪರಿಚಿತ ವ್ಯಕ್ತಿಗಳಿಂದ ಅನಿರೀಕ್ಷಿತ ಸಹಾಯ. ರಾಜಕಾರಣಿಯ ಭೇಟಿಯಿಂದ ವ್ಯವಹಾರಕ್ಕೆ ಸಹಾಯ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.