ದಿನ ಭವಿಷ್ಯ:
01-07-2025

ಜ್ಯೋತಿರ್ಮಯ.
ಅದೃಷ್ಟ ಸಂಖ್ಯೆ 1
೧.ಮೇಷ:
ಹೊಸ ಮಾಸದ ಆರಂಭ ನಿಧಾನ ಗತಿಯಲ್ಲಿ. ಉದ್ಯೋಗ ಸ್ಥಾನದಲ್ಲಿ ಕೆಲಸಗಳ ಪುನರ್ವ್ಯವಸ್ಥೆ. ಸ್ಥಗಿತವಾಗಿದ್ದ ಉತ್ಪಾದನಾ ಚಟುವಟಿಕೆಗಳಿಗೆ ಚಾಲನೆ. ಬಂಧುವರ್ಗದಲ್ಲಿ ಮಂಗಲ ಕಾರ್ಯದ ಸಿದ್ಧತೆ. ಮಕ್ಕಳ ಅಧ್ಯಯನಾಸಕ್ತಿ ಪೋಷಣೆಗೆ ಯೋಜನೆ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.
೨.ವೃಷಭ:
ಸಂಪಾದನೆಯ ಅನ್ಯ ಮಾರ್ಗಗಳಿಗಾಗಿ ಹುಡುಕಾಟ. ಉದ್ಯೋಗ ಸ್ಥಾನದಲ್ಲಿ ಸಹಕಾರ ವೃದ್ಧಿ. ಗೃಹೋದ್ಯಮದ ಉತ್ಪನ್ನಗಳಿಗೆ ಅಧಿಕ ಬೇಡಿಕೆ. ಉದ್ಯೋಗಾಸಕ್ತರಿಗೆ ನೌಕರಿ ಸಿಗುವ ಸೂಚನೆ. ಗಣಪತಿ ಅಷ್ಟೋತ್ತರ ಶತನಾಮ ಸ್ತೋತ್ರ, ವಿಷ್ಣು ಸಹಸ್ರನಾಮ, ನವಗ್ರಹ ಸ್ತೋತ್ರ ಓದಿ.
೩. ಮಿಥುನ:
ಪ್ರತಿಭಾವಂತರಿಗೆ ಹೊಸ ಅವಕಾಶಗಳು ಮತ್ತು ಹೊಣೆಗಾರಿಕೆಗಳು. ಉದ್ಯಮಿಗಳ ಪಾಲಿಗೆ ಒಳ್ಳೆಯ ದಿನ ಪಿತ್ರಾರ್ಜಿತ ಆಸ್ತಿಯ ಅಭಿವೃದ್ಧಿ ಕಾರ್ಯಗಳ ವೀಕ್ಷಣೆ. ಓದು, ಬರವಣಿಗೆಯಲ್ಲಿ ಆಸಕ್ತಿ. ಮನೆಮಂದಿಯ ನಡುವೆ ಪ್ರೀತಿ, ಸಾಮರಸ್ಯ ವೃದ್ಧಿ. ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ, ಆದಿತ್ಯಹೃದಯ ಓದಿ.
೪.ಕರ್ಕಾಟಕ:
ಧ್ಯಾನ, ಜಪಗಳಿಂದ ಮಾನಸಿಕ ಸ್ಥೈರ್ಯ. ಉದ್ಯೋಗ ಸ್ಥಾನದಲ್ಲಿ ಆಮಿಷಗಳ ಬಗೆಗೆ ಎಚ್ಚರ. ಹಿರಿಯರನ್ನು ಕಾಡುತ್ತಿದ್ದ ಆರೋಗ್ಯ ಸಮಸ್ಯೆ ನಿವಾರಣೆ. ಖಾದಿ ಉದ್ಯಮಕ್ಕೆ ಶುಭಕಾಲ ಸನ್ನಿಹಿತ. ದೇವತಾರಾಧನೆ, ಸತ್ಸಂಗಗಳ ಕಡೆಗೆ ಸೆಳೆತ. ಗಣೇಶ ಅಷ್ಟಕ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ಗುರುಸ್ತೋತ್ರ ಓದಿ.
೫ ಸಿಂಹ:
ಸಪ್ತಾಹ ಮುಂದುವರಿಯುತ್ತಿದ್ದಂತೆ ಕೆಲಸದ ಕರೆ. ಉದ್ಯೋಗ ಸ್ಥಾನದಲ್ಲಿ ಹೊಸ ಪ್ರಯೋಗಗಳು ಆರಂಭ. ವಸ್ತ್ರ, ಆಭರಣಾದಿ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ವ್ಯಾಪಾರ. ಇಲೆಕ್ಟ್ರಿಕಲ್, ಇಲೆಕ್ಟ್ರಾನಿಕ್ಸ್ ಕೆಲಸಗಾರರಿಗೆ ಕೈತುಂಬಾ ಕೆಲಸ. ಮನೆಯವರೊಂದಿಗೆ ದೇವೀಕ್ಷೇತ್ರಕ್ಕೆ ಭೇಟಿ. ಗಣೇಶ ಪಂಚರತ್ನ, ಕಾರ್ತಿಕೇಯ ಸ್ತೋತ್ರ, ಮಹಿಷಮರ್ದಿನಿ ಸ್ತೋತ್ರ ಓದಿ.
೬. ಕನ್ಯಾ:
ಹೊಸ ಅನುಭವಗಳಿಂದ ಜೀವನಾಸಕ್ತಿ ವೃದ್ಧಿ. ಇಲೆಕ್ಟ್ರಾನಿಕ್ಸ್ , ಇಲೆಕ್ಟ್ರಿಕಲ್ಸ್ ವ್ಯಾಪಾರ ಬೆಳವಣಿಗೆ. ವೃತ್ತಿ ಪರಿಣತಿ ಹೆಚ್ಚಿಸಿಕೊಳ್ಳಲು ನುರಿತವರ ಮಾರ್ಗದರ್ಶನ. ಬಂಧುವರ್ಗದಲ್ಲಿ ವಿವಾಹ ಮಾತುಕತೆ. ಹಿರಿಯರು ಮಹಿಳೆಯರು, ಮಕ್ಕಳಿಗೆ ಸಂಭ್ರಮ. ಗಣೇಶ ದ್ವಾದಶನಾಮ ಸ್ತೋತ್ರ, ರಾಜರಾಜೇಶ್ವರೀ ಅಷ್ಟಕ, ಗುರುಸ್ತೋತ್ತ ಓದಿ.
೭ತುಲಾ:
ಎಡೆಬಿಡದ ಪ್ರಯತ್ನದಿಂದ. ಮನಸ್ಸಿನ ಮೇಲೆ ಹತೋಟಿ. ಉದ್ಯೋಗ ಸ್ಥಾನದಲ್ಲಿ ವಿಶ್ವಾಸ ಮೂಡಿಸುವ ವಾತಾವರಣ. ಕಸೂತಿ, ಕರಕೌಶಲದ ಕೆಲಸಗಾರರಿಗೆ ಬೇಡಿಕೆ. ಮಕ್ಕಳ ಬಹುಮುಖ ಪ್ರತಿಭೆ ಬೆಳವಣಿಗೆಗೆ ಪ್ರೋತ್ಸಾಹ. ಹಿರಿಯರೊಂದಿಗೆ ಹತ್ತಿರದ ದೇವಾಲಯಕ್ಕೆ ಸಂದರ್ಶನ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ವಿಷ್ಷು ಸಹಸ್ರನಾಮ, ಲಕ್ಷ್ಮೀಸ್ತೋತ್ರ ಓದಿ.
೮.ವೃಶ್ಚಿಕ:
ಹೊಸ ಮಾಸದ ಆರಂಭದಲ್ಲೇ ನಿಶ್ಚಿಂತೆಯ ಮನಃಸ್ಥಿತಿ. ಉದ್ಯೋಗಸ್ಥರಿಗೆ ಹರ್ಷದ ಸನ್ನಿವೇಶ. ಗೃಹೋದ್ಯಮ ಉತ್ಪನ್ನಗಳಿಗೆ ಹೊಸ ಗಿರಾಕಿಗಳು. ಉದ್ಯೋಗ ಅರಸುವ ಶಿಕ್ಷಿತರಿಗೆ ಮಾರ್ಗದರ್ಶನ. ಚಿತ್ರಕಲೋಪಾಸಕರ ಒಡನಾಟದಿಂದ ಆನಂದ. ಗಣೇಶ ಪಂಚರತ್ನ, ಶಿವ ಸಹಸ್ರನಾಮ, ಮಹಾಲಕ್ಷ್ಮಿ ಅಷ್ಟಕ ಓದಿ.
೯. ಧನು:
ಕ್ರಿಯಾಶೀಲತೆಗೆ ಸವಾಲಾಗುವಷ್ಟು ಅವಕಾಶಗಳು. ಉದ್ಯೋಗಸ್ಥರ ನಡುವೆ ಪರಸ್ಪರ ಸಹಕಾರ. ಸಣ್ಣ ಪ್ರಮಾಣದ ಗೃಹೋದ್ಯಮ ಪ್ರಗತಿಯಲ್ಲಿ. ಉದ್ಯೋಗಾಸತರಿಗೆ ಯಥೋಚಿತ ಮಾರ್ಗದರ್ಶನ. ಮನೆಯಲ್ಲಿ ಇಷ್ಟದೇವತಾರ್ಚನೆ. ಗಣಪತಿ ಅಥರ್ವಶೀರ್ಷ, ರಾಮರಕ್ಷಾ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
೧೦. ಮಕರ:
ಏಕಕಾಲದಲ್ಲಿ ಸಂಸಾರ, ಉದ್ಯೋಗ ಇವೆರಡರ ನಿರ್ವಹಣೆಯ ಸವಾಲು. ಅಧ್ಯಾಪಕ ವರ್ಗಕ್ಕೆ ಕೆಲಸದ ಒತ್ತಡ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಮಕ್ಕಳ ಜ್ಞಾನವೃದ್ಧಿಗೆ ವಿಶೇಷ ಪ್ರಯತ್ನ. ಆಪ್ತ ಬಂಧುಗಳ ಮನೆಗೆ ಭೇಟಿ. ಗಣೇಶ ದ್ವಾದಶನಾಮ ಸ್ತೋತ್ರ, ಶಿವಪಂಚಾಕ್ಷರ ಸ್ತೋತ್ರ, ಹನುಮಾನ್ ಚಾಲೂಸಾ ಓದಿ.
೧೧.ಕುಂಭ:
ಕಾರ್ಯರಂಗದ ಕರೆಗಳಿಗೆ ಸ್ಪಂದನ. ಉದ್ಯೋಗಸ್ಥರಿಗೆ ಹೊಸ ವಿಭಾಗಕ್ಕೆ ಪ್ರವೇಶ. ವೃತ್ತಿರಂಗದ ಮಿತ್ರರಿಂದ ಮಾರ್ಗದರ್ಶನಕ್ಕೆ ಕೋರಿಕೆ. ಗ್ರಾಹಕರ ಬೇಡಿಕೆಗಳಿಗೆ ಸ್ಪಂದಿಸುವ ಒತ್ತಡ. ಶಿವಾಲಯ ಸಂದರ್ಶನದ ವಿಶೇಷ ಅವಕಾಶ. ಗಣಪತಿ ಅಥರ್ವಶೀರ್ಷ, ದತ್ತಪಂಜರ ಸ್ತೋತ್ರ, ಶನಿಮಹಾತ್ಮೆ ಓದಿ.
೧೨.ಮೀನ:
ತಿಂಗಳ ಮೊದಲ ದಿನ ಹಲವು ಕೆಲಸಗಳಿಗೆ ಶ್ರೀಕಾರ. ಹೊಸ ಜನಸೇವಾ ಕಾರ್ಯಗಳಿಗೆ ಪೀಠಿಕೆ. ನಿರ್ಮಾಣ ವ್ಯವಹಾರ ಮತ್ತೆ ಆರಂಭ. ಗುರುಸಮಾನ ವ್ಯಕ್ತಿಯ ಆಗಮನ. ಸೋದರ ಸಂಬಂಧಿಯ ವ್ಯಾಪಾರ ವೃದ್ಧಿಗೆ ಮಾರ್ಗದರ್ಶನ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.