ದಿನ ಭವಿಷ್ಯ
04-07-2025

ಜ್ಯೋತಿರ್ಮಯ.
ಅದೃಷ್ಟ ಸಂಖ್ಯೆ 4
೧. ಮೇಷ:
ಉದ್ಯೋಗ ಸ್ಥಾನದಲ್ಲಿ ಸಮಾಧಾನದ ವಾತಾವರಣ. ವ್ಯವಹಾರ ಕೌಶಲದಿಂದ ಕಾರ್ಯಸಿದ್ಧಿ. ದವಸ ಧಾನ್ಯ ವ್ಯಾಪಾರಿಗಳಿಗೆ ಲಾಭ. ವಸ್ತ್ರ, ಆಭರಣ ಖರೀದಿಗೆ ಧನವ್ಯಯ. ಲೇವಾದೇವಿ ವ್ಯವಹಾರದಲ್ಲಿ ಲಾಭ ಇಲ್ಲ. ಗಣೇಶ ಅಷ್ಟಕ, ರಾಮರಕ್ಷಾ ಸ್ತೋತ್ರ, ಶನಿಮಹಾತ್ಮೆ ಓದಿ.
೨. ವೃಷಭ:
ಹೊಸ ಹಣಕಾಸು ಮೂಲಗಳಿಂದ ವ್ಯವಹಾರಕ್ಕೆ ಸಹಾಯ. ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾವರಣ.ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಂತೋಷದ ಅನುಭವ..ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.
೩.ಮಿಥುನ:
ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ. ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಶುಭದಿನ. ಗೃಹೋತ್ಪನ್ನ ತಿನಿಸುಗಳ ಜನಪ್ರಿಯತೆ ವೃದ್ಧಿ. ಗೃಹೋಪಯೋಗಿ ಸಾಮಗ್ರಿ ಖರೀದಿ.ಹಿರಿಯರಿಗೆ, ಗೃಹಿಣಿಯರಿಗೆ ನೆಮ್ಮದಿ. ಗಣೇಶ ಅಷ್ಟಕ, ವಿಷ್ಣು ಸಹಸ್ರನಾಮ, ಆದಿತ್ಯ ಹೃದಯ ಓದಿ.
೪.ಕರ್ಕಾಟಕ:
ಹಿರಿಯರ ಆರೋಗ್ಯ ಸುಧಾರಣೆ. ಆಪ್ತರಿಂದ ನಿರೀಕ್ಷಿತ ಸಹಾಯ ಲಭ್ಯ. ವ್ಯವಹಾರ ಸಂಬಂಧ ಪೂರ್ವ ದಿಕ್ಕಿಗೆ ಪ್ರಯಾಣ. ವಿದ್ಯಾರ್ಥಿಗಳ ಅಧ್ಯಯನದಲ್ಲಿ ಹೆಚ್ಚು ಪರಿಶ್ರಮಕ್ಕೆ ಒತ್ತು. ಒಟ್ಟಿನಲ್ಲಿ ದಿನವಿಡೀ ಮಿಶ್ರ ಫಲಗಳ ಅನುಭವ. ಗಣೇಶ ಪಂಚರತ್ನ, ಶಿವಪಂಚಾಕ್ಷರ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
೫.ಸಿಂಹ:
ಸಹನೆ, ವಿವೇಕಗಳೊಂದಿಗೆ ಕಾಲಕ್ಕೆ ಸರಿಯಾಗಿ ಸ್ಪಂದನೆ. ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ. ತೀವ್ರ ಪ್ರಾರ್ಥನೆಯಿಂದ ದೇವತಾನುಗ್ರಹ ಪ್ರಾಪ್ತಿ. ಕಟ್ಟಡ ನಿರ್ಮಾಪಕರಿಗೆ ಕೆಲಸ ಮುಗಿಸುವ ಒತ್ತಡ. ವಿದ್ಯಾರ್ಥಿಗಳ ಲೋಕಜ್ಞಾನ ವೃದ್ಧಿಗೆ ಅನುಕೂಲದ ವಾತಾವರಣ. ಗಣೇಶ ಕವಚ, ನರಸಿಂಹ ಸ್ತೋತ್ರ, ಲಕ್ಷ್ಮೀಸ್ತೋತ್ರ ಓದಿ.
೬. ಕನ್ಯಾ:
ಕೆಲವರಿಗೆ ಉದ್ಯೋಗದಲ್ಲಿ ಸುಯೋಗ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ.ವಿದ್ಯಾರ್ಥಿಗಳಿಗೆ ಏಕಾಗ್ರತೆ ವೃದ್ಧಿ. ಕುಶಲ ಕರ್ಮಿಗಳಿಗೆ ಶೀಘ್ರ ಉದ್ಯೋಗ ಪ್ರಾಪ್ತಿ. ಗೃಹಿಣಿಯರ ಸ್ವೋದ್ಯೋಗ ಯೋಜನೆ ಪ್ರಗತಿ. ಗಣೇಶ ದ್ವಾದಶನಾಮಸ್ತೋತ್ರ, ದತ್ತಾತ್ರೇಯ ಸ್ತೋತ್ರ, ಶನಿಸ್ತೋತ್ರ ಓದಿ.
೭. ತುಲಾ:
ಉದ್ಯೋಗ ಸ್ಥಾನದಲ್ಲಿ ಕಾರ್ಯ ನಿರ್ವಹಣೆಗೆ ಅಡ್ಡಿಯೊದಗದು. ಉದ್ಯಮದ ಉತ್ಪನ್ನಗಳ ಗುಣಮಟ್ಟ ಸುಧಾರಣೆಯತ್ತ ಗಮನ. ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳ ಆಸಕ್ತಿ ವೃದ್ಧಿ. ಕೃಷಿ , ಹೈನುಗಾರಿಕೆ, ಜೇನು ಸಾಕಣೆಯಲ್ಲಿ ಆಸಕ್ತಿ. ಮನೆಯಲ್ಲಿ ಎಲ್ಲರಿಗೂ ಆರೋಗ್ಯ ಭಾಗ್ಯ. ಗಣೇಶ ಕವಚ, ಕಾರ್ತಿಕೇಯ ಸ್ತೋತ್ರ, ನವಗ್ರಹ ಸ್ರೋತ್ರ ಓದಿ.
೮.ವೃಶ್ಚಿಕ:
ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರ. ತಾಳ್ಮೆಯ ವರ್ತನೆಯಿಂದ ಹಿರಿಯರ ಒಲವು ಲಭ್ಯ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಗಣನಾರ್ಹ ಸುಧಾರಣೆ.ವ್ಯವಹಾರದ ಸಂಬಂಧ ಸಣ್ಣ ಪ್ರಯಾಣ ಸಂಭವ. ಹವೆಯ ಏರುಪೇರಿನಿಂದ ವ್ಯತ್ಯಾಸಗೊಂಡಿದ್ದ ಹಿರಿಯರ ಆರೋಗ್ಯ ಸುಧಾರಣೆ. ಗಣೇಶ ಪಂಚರತ್ನ, ಸುಬ್ರಹ್ಮಣ್ಯ ಭುಜಂಗಸ್ತೋತ್ರ, ನವಗ್ರಹ ಸ್ತೋತ್ರ ಓದಿ.
೯.ಧನು:
ವ್ಯವಹಾರಕ್ಕೋಸ್ಕರ ಅನಿರೀಕ್ಷಿತ ಸಹಾಯ ಪ್ರಾಪ್ತಿ. ಕೆಲವು ದಿನಗಳಿಂದ ಕಾಡುತ್ತಿದ್ದ ಕೌಟುಂಬಿಕ ಸಮಸ್ಯೆ ಪರಿಹಾರ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಸಣ್ಣ ಗೃಹೋದ್ಯಮ ಅಥವಾ ಹೈನುಗಾರಿಕೆ ಆರಂಭಿಸಲು ಕೆಲವರಿಗೆ ಆಸಕ್ತಿ. ಗೃಹಿಣಿಯರು, ಮಕ್ಕಳಿಗೆ ಸಂತಸ. ಗಣಪತಿ ಅಥರ್ವಶೀರ್ಷ, ದತ್ತಪಂಜರ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
೧೦.ಮಕರ:
ಸಹೋದ್ಯೋಗಿಗಳಿಂದ ಸಹಕಾರ. ಕುಟುಂಬದ ಸದಸ್ಯರೊಂದಿಗೆ ಪ್ರೀತಿ, ವಾತ್ಸಲ್ಯದ ಸಂಬಂಧ ವೃದ್ಧಿ. ಸಣ್ಣ ಉದ್ಯಮಿಗಳ ಆದಾಯ ವೃದ್ಧಿ. ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಪ್ರಮಾಣದ ಲಾಭ. ಮಹಿಳೆಯರ ಗೃಹೋದ್ಯಮ ಯೋಜನೆಗೆ ಪ್ರಚಂಡ ಯಶಸ್ಸು. ಗಣೇಶ ಕವಚ, ವಿಷ್ಣು ಸಹಸ್ರನಾಮ, ಹನುಮಾನ್ ಚಾಲೀಸಾ ಓದಿ.
೧೧. ಕುಂಭ:
ಸಂಚಿತ ಧನ ಸದುದ್ದೇಶಕ್ಕೆ ವಿನಿಯೋಗ. ಕಿರಿಯ ಸಹೋದ್ಯೋಗಿಗಳಿಗೆ ಮಾರ್ಗದರ್ಶನ. ಸೇವೆ, ಪ್ರಾಮಾಣಿಕತೆಯಿಂದ ಸಮಾಜದಲ್ಲಿ ಗೌರವ ಮತ್ತು ಜನಪ್ರಿಯತೆ ವೃದ್ಧಿ. ವೃತ್ತಿಪರರಿಗೆ ಸರ್ವತ್ರ ಶ್ಲಾಘನೆ. ವೈದ್ಯರ ಭೇಟಿಯಿಂದ ಸಣ್ಣ ತೊಂದರೆ ಪರಿಹಾರ. ಗಣೇಶ ಪಂಚರತ್ನ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ಶನಿಮಹಾತ್ಮೆ ಓದಿ.
೧೨. ಮೀನ:
ಉದ್ಯೋಗದಲ್ಲಿ ವಿಶೇಷ ಸಾಧನೆ, ವ್ಯವಹಾರದಲ್ಲಿ ಅಪರಿಮಿತ ಮುನ್ನಡೆ. ಹಣಕಾಸು ವ್ಯವಹಾರ ಸುಧಾರಣೆ. ಸರಕಾರಿ ಇಲಾಖೆಗಳಿಂದ ಅನುಕೂಲದ ಸ್ಪಂದನ. ಹಳೆಯ ಸಹಚರರ ಭೇಟಿ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.