ದಿನ ಭವಿಷ್ಯ

12-07-2025

Jul 12, 2025 - 12:07
Jul 11, 2025 - 13:12
ದಿನ ಭವಿಷ್ಯ

                   ಜ್ಯೋತಿರ್ಮಯ.

ಅದೃಷ್ಟ ಸಂಖ್ಯೆ  3

೧. ಮೇಷ:
 
 ಆತುರ ಪಡದಿದ್ದರೆ  ಯಶಸ್ಸು ಖಚಿತ. ಉದ್ಯೋಗ, ವ್ಯವಹಾರಗಳಲ್ಲಿ ನಿರ್ಣಾಯಕ  ಹಂತ. ವಾಹನ ಚಾಲನೆಯಲ್ಲಿ ಎಚ್ಚರ. ಅಪರೂಪದ  ಬಂಧುಗಳ ಭೇಟಿ. ವ್ಯವಹಾರದ ಸಂಬಂಧ ಸಣ್ಣ ಪ್ರಯಾಣ‌. ಗಣೇಶ ದ್ವಾದಶನಾಮ ಸ್ತೋತ್ರ, ರಾಮರಕ್ಷಾ ಸ್ತೋತ್ರ, ಶನಿಮಹಾತ್ಮೆ ಓದಿ.


೨. ವೃಷಭ:
  ಸಲೀಸಾಗಿ ಸಾಗುವ ಜಾರ್ಯಗಳು. ಹಣಕಾಸು ವ್ಯವಹಾರ ಸುಗಮ. ಸರಕಾರಿ  ನೌಕರರಿಗೆ  ಕೊಂಚ ಆತಂಕ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ಗೃಹೋತ್ಪನ್ನ ಖಾದ್ಯ ಪದಾರ್ಥಗಳ ಮಾರಾಟ ಹೆಚ್ಚಳ. ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ, ನವಗ್ರಹ ಸ್ತೋತ್ರ ಓದಿ.


೩ಮಿಥುನ:
  ವ್ಯಾವಹಾರಿಕ ದೃಷ್ಟಿಯಿಂದ ಅನುಕೂಲದ ದಿನ ಶಾರೀರಿಕ ತೊಂದರೆಗಳಿಂದ ಮುಕ್ತಿ. ಉದ್ಯೋಗಸ್ಥರಿಗೆ  ಸರ್ವವಿಧದಲ್ಲೂ ಅನುಕೂಲ. ವ್ಯವಹಾರಸ್ಥರಿಗೆ ಲಾಭ ತರುವ  ದಿನ. ದೃಢವಾದ  ಆತ್ಮವಿಶ್ವಾಸದಿಂದ  ಕಾರ್ಯಜಯ. ಗಣೇಶ ಕವಚ, ಶಿವ ಸಹಸ್ರನಾಮ, ಅನ್ನಪೂರ್ಣಾ ಸ್ತೋತ್ರ ಓದಿ.


೪. ಕರ್ಕಾಟಕ:

  ಈ ದಿನ ಬಹುಪಾಲು ನೆಮ್ಮದಿಯ ಅನುಭವ. ಉದ್ಯೋಗಸ್ಥರಿಗೆ   ಅನುಕೂಲದ  ವಾತಾವರಣ. ಪಾಲುದಾರಿಕೆ ವ್ಯವಹಾರ ಮುನ್ನಡೆ. ಕಟ್ಟಡ ನಿರ್ಮಾಣ-ಮಾರಾಟ  ವ್ಯವಹಾರಸ್ಥರಿಗೆ  ಉತ್ತಮ ಲಾಭ. ರಾತ್ರಿ ಪ್ರಯಾಣ ಮಾಡದಿರಿ. ಗಣೇಶ ಪಂಚರತ್ನ, ಸುಬ್ರಹ್ಮಣ್ಯ ಕವಚ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.
 


೫.ಸಿಂಹ:
  ಆನಂದವನ್ನು ಹಂಚಿಕೊಳ್ಳುವಲ್ಲಿ ಜಿಪುಣತನ ಬೇಡ. ಸ್ವಯಂ ಉದ್ಯೋಗಸ್ಥರಿಗೆ ಲಕ್ಷ್ಮೀ ಕಟಾಕ್ಷ. ಉಡುಪು ತಯಾರಿ ಉದ್ದಿಮೆಯವರಿಗೆ ಅಪಾರ ಲಾಭ. ಗೃಹಿಣಿಯರ ಸ್ವಾವಲಂಬನೆ ಯತ್ನಕ್ಕೆ  ಯಶಸ್ಸು. ಹತ್ತಿರದ  ಶಿವ ಪಾರ್ವತಿ ಕ್ಷೇತ್ರಕ್ಕೆ ಭೇಟಿ. ಗಣೇಶ ಅಷ್ಟಕ, ದಕ್ಷಿಣಾಮೂರ್ತಿ ಸ್ತೋತ್ರ, ಗುರುಸ್ತೋತ್ರ ಓದಿ.

೬. ಕನ್ಯಾ:
  ದೈವಾನುಗ್ರಹದಿಂದ ಸರ್ವತ್ರ ಯಶಸ್ಸು. ಅನಿರೀಕ್ಷಿತ ಮೂಲದಿಂದ  ಧನಪ್ರಾಪ್ತಿ.   ಉದ್ಯೋಗಸ್ಥರಿಗೆ , ಸಹೋದ್ಯೋಗಿಗಳ ಸಹಾಯ. ಉದ್ಯೋಗಾಪೇಕ್ಷಿಗಳಿಗೆ ಯೋಗ್ಯ ಅವಕಾಶ ಗೋಚರ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ಗಣೇಶ ಕವಚ, ರಾಮ ಭುಜಂಗ ಪ್ರಯಾತ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

೭. ತುಲಾ:
  ದಿನವೂ ನೆನಪಿಸುವ ಗೆಳೆಯನ ಆಗಮನ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಬಗೆಯ ಕಾರ್ಯಗಳು. ನಿವೇಶನ, ಮನೆ ಖರೀದಿ- ಮಾರಾಟಗಾರರಿಗೆ ಅನುಕೂಲ. ಹಣ್ಣು, ತರಕಾರಿ ವ್ಯಾಪಾರ ತೃಪ್ತಿಕರ.  ಹಿರಿಯರಿಗೆ ಉಲ್ಲಾಸದ ವಾತಾವರಣ. ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ, ಶನಿಸ್ತೋತ್ರ ಓದಿ.


೮.ವೃಶ್ಚಿಕ:

ಮಾಲಿಕ - ನೌಕರರ ನಡುವೆ  ಬಾಂಧವ್ಯ ವೃದ್ಧಿ. ಆಸ್ತಿ, ಮನೆ ದಳ್ಳಾಳಿಗಳಿಗೆ ಅನುಕೂಲ. ಲೇವಾದೇವಿ ವ್ಯವಹಾರಸ್ಥರಿಗೆ  ಸಾಮಾನ್ಯ ಲಾಭ. ಚಿನ್ನ, ಬೆಳ್ಳಿ ವ್ಯಾಪಾರಿಗಳಿಗೆ  ಉತ್ತಮ ಲಾಭ. ಗಣೇಶ ಅಷ್ಟಕ, ಲಕ್ಷ್ಮೀನೃಸಿಂಹ ಕರಾವಲಂಬನ ಸ್ತೋತ್ರ, ಆದಿತ್ಯ ಹೃದಯ ಓದಿ.

೯.ಧನು:
  ಶ್ರದ್ಧೆಯ ದುಡಿಮೆಗೆ ಸರಿಯಾಗಿ ಪ್ರತಿಫಲ. ಹೊಂದಾಣಿಕೆ, ನಿಷ್ಠೆಗಳಿಂದ  ಕಾರ್ಯಸಾಧನೆ. ದಕ್ಷತೆ, ಪರಿಪೂರ್ಣತೆಗೆ ಮೇಲಧಿಕಾರಿಗಳಿಂದ ಪ್ರಶಂಸೆ. ದೇವತಾರ್ಚನೆಯಲ್ಲಿ ಆಸಕ್ತಿ. ವ್ಯವಹಾರ ಸಂಬಂಧ ಪ್ರಯಾಣ ಮುಂದೂಡಿಕೆ. ಗಣೇಶ ಪಂಚರತ್ನ, ಸುಬ್ರಹ್ಮಣ್ಯ ಕರಾವಲಂಬನ ಸ್ತೋತ್ರ, ಲಕ್ಷ್ಮೀಸ್ತೋತ್ರ ಓದಿ.


೧೦.ಮಕರ:
  ಶೀಘ್ರಕೋಪ, ಆತಂಕಗಳನ್ನು ಬಿಟ್ಟಷ್ಟೂ ಕ್ಷೇಮ. ಉದ್ಯೋಗ ಸ್ಥಾನದಲ್ಲಿ ನೆಮ್ಮದಿ. ಪಾಲುದಾರಿಕೆ ವ್ಯವಹಾರದಲ್ಲಿ ಮುನ್ನಡೆ. ಕೆಲವು ವರ್ಗಗಳ ವ್ಯಾಪಾರಿಗಳಿಗೆ ಅಧಿಕ ಲಾಭ. ಹೆಚ್ಚಿನವರಿಗೆ ಮಿಶ್ರಫಲ ಕೊಡುವ ದಿನ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.


೧೧. ಕುಂಭ:
  ಒಬ್ಬರ ಪಾಲಿಗೇ ಹೆಚ್ಚು ಜವಾಬ್ದಾರಿಗಳು ಬರುವ ಸಾಧ್ಯತೆ.ಸಾಮಾಜಿಕ ಚಟುವಟಿಕೆಗಳ ಒತ್ತಡ. ಉದ್ಯೋಗ ರಂಗದಲ್ಲಿ ಹೆಚ್ಚು ಯಶಸ್ಸು. ಅವಿಶ್ರಾಂತ  ಚಟುವಟಿಕೆಗಳಿಂದ ಆಯಾಸ. ಗೃಹಿಣಿಯರ ಉದ್ಯಮಗಳ ಜನಪ್ರಿಯತೆ ವೃದ್ಧಿ. ಗಣೇಶ ಕವಚ, ಶಿವಕವಚ, ಶನಿಮಹಾತ್ಮೆ ಓದಿ.

೧೨. ಮೀನ:
ಇನ್ನಷ್ಟು ಹೊಣೆಗಾರಿಕೆಗಳನ್ನು ನಿರೀಕ್ಷಿಸಿರಿ. .ಕಾರ್ಯಕ್ಷೇತ್ರದಲ್ಲಿ ಪ್ರಯತ್ನಕ್ಕೆ ತಕ್ಕ ಫಲ. ಹಿರಿಯರ ಆರೋಗ್ಯದ ಕಡೆ ಗಮನವಿರಲಿ. ವಸ್ತ್ರ, ಶೋಕಿಸಾಮಗ್ರಿ ವ್ಯಾಪಾರಿಗಳಿಗೆ ಅನುಕೂಲ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ಗಣಪತಿ ಅಥರ್ವಶೀರ್ಷ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.