ದಿನ ಭವಿಷ್ಯ

17-07-2025

Jul 17, 2025 - 03:00
Jul 16, 2025 - 11:54
ದಿನ ಭವಿಷ್ಯ


               ಜ್ಯೋತಿರ್ಮಯ

ಅದೃಷ್ಟ ಸಂಖ್ಯೆ 8

೧.ಮೇಷ:
  ದುಡಿಮೆಯಲ್ಲಿ ಮಹತ್ಸಾಧನೆಯ ಸಂಕಲ್ಪ. ಯೋಗ್ಯರಿಗೆ ಸಹಾಯ ಮಾಡಿಕೊಟ್ಟ ತೃಪ್ತಿ. ಸೋದರ ಸಂಬಂಧಿಗೆ ವಿವಾಹ ಯೋಗ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಹುರುಪು. ಹೊಸ ಬದುಕು ಕಟ್ಟಿಕೊಳ್ಳುವ ಪ್ರಯತ್ನದಲ್ಲಿ‌ ಜಯ. ಗಣೇಶಕವಚ, ರಾಮರಕ್ಷಾ ಸ್ತೋತ್ರ, ಶನಿಮಹಾತ್ಮೆ ಓದಿ.

೨. ವೃಷಭ:

 ಸಾತ್ವಿಕ ಜನರ ಸಂಘಟನೆಗೆ ಪ್ರಯತ್ನ. ಬೌದ್ಧಿಕ ಕೆಲಸಕ್ಕೆ ಯೋಗ್ಯ ಗೌರವ. ಹಿರಿಯರ ಆರೋಗ್ಯದತ್ತ ಗಮನವಿರಲಿ. ಸಂಪಾದನೆಯ ಹೊಸ ಮಾರ್ಗ ಅನ್ವೇಷಣೆ. ಮಕ್ಕಳಿಗೆ ಯೋಗ್ಯ ಮಾರ್ಗದರ್ಶನದ ವ್ಯವಸ್ಥೆ. ಗಣಪತಿ ಅಥರ್ವಶೀರ್ಷ, ಸುಬ್ರಹ್ಮಣ್ಯ ಭುಜಂಗ ಸ್ತೋತ್ರ, ನವಗ್ರಹ ಸ್ತೋತ್ರ ಓದಿ.

೩.ಮಿಥುನ:
 
 ಜೀವನಸ್ನೇಹಿ ಪರಿಸರದಲ್ಲಿ ಬದುಕು. ತಾವಾಗಿ ಒಲಿದು ಬಂದ ಅವಕಾಶಗಳ ಸದುಪಯೋಗ. ಉದ್ಯೋಗಾನ್ವೇಷಿಗಳಿಗೆ ಉನ್ನತರ ಸಹಾಯ. ಗೃಹಾಲಂಕಾರ ವಸ್ತುಗಳ ಖರೀದಿಗೆ ಧನವ್ಯಯ. ಸತ್ಕಾರ್ಯಕ್ಕೆ ಕೈಜೋಡಿಸಿ  ಧನ್ಯತಾ ಭಾವ ಹೊಂದುವಿರಿ. ಗಣೇಶ ಪಂಚರತ್ನ, ಸುಬ್ರಹ್ಮಣ್ಯ ಕವಚ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.


೪.ಕರ್ಕಾಟಕ:

 ಹೊಣೆಗಾರಿಕೆಯ ಸಮರ್ಪಕ ನಿರ್ವಹಣೆಯಿಂದ ಕೀರ್ತಿ. ಕಠಿನ ಪರಿಶ್ರಮಕ್ಕೆ ಯೋಗ್ಯ ಪ್ರತಿಫಲ. ನೊಂದವರಲ್ಲಿ ಹೊಸ ಭರವಸೆ ತುಂಬುವ ಕ್ರಮಗಳು. ಕೃಷಿಕರಿಗೆ ನೆಮ್ಮದಿ, ಸಮಾಧಾನದ ಸನ್ನಿವೇಶ. ಸಂಸಾರದಲ್ಲಿ  ಸಾಮರಸ್ಯ, ಪ್ರೀತಿ ವೃದ್ಧಿ. ಗಣಪತಿ ಅಥರ್ವಶೀರ್ಷ, ವಿಷ್ಣು ಸಹಸ್ರನಾಮ, ಮಹಾಲಕ್ಷ್ಮಿ ಅಷ್ಟಕ ಓದಿ.


೫.ಸಿಂಹ:
 ಎಲ್ಲ ಬಗೆಯ ಅಡಚಣೆಗಳಿಂದ ಬಿಡುಗಡೆ. ಉದ್ಯೋಗಸ್ಥರಿಗೆ, ಉದ್ಯಮಿಗಳಿಗೆ ಕಾರ್ಯದ ಒತ್ತಡ. ಹಿರಿಯರ, ಗೃಹಿಣಿಯರ ಆರೋಗ್ಯ ತೃಪ್ತಿಕರ. ಮನೆಯಲ್ಲಿ ನೆಮ್ಮದಿಯ ವಾತಾವರಣ. ವ್ಯವಹಾರ ಸಂಬಂಧ ಪತ್ರ ವ್ಯವಹಾರದಲ್ಲಿ ಮಗ್ನತೆ. ಗಣೇಶ ದ್ವಾದಶನಾಮ ಸ್ತೋತ್ರ, ದತ್ತಾತ್ರೇಯ ಸ್ತೋತ್ರ, ಮಹಿಷಮರ್ದಿನಿ ಸ್ತೋತ್ರ ಓದಿ.

೬. ಕನ್ಯಾ:

 ದೈಹಿಕ ಆಪತ್ತು ನಿವಾರಣೆಯಾಗಿ ನೆಮ್ಮದಿ. ವೃತ್ತಿಪರ ಉದ್ಯೋಗಸ್ಥರಿಗೆ ಸಮಯದೊಂದಿಗೆ ಸೆಣಸಾಟ. ಬಂಧುವರ್ಗದವರಿಗೆ ಸಹಾಯ ಮಾಡುವ ಸಂದರ್ಭ. ದಂಪತಿಗಳ ನಡುವೆ  ಅನುರಾಗ ವೃದ್ಧಿ. ತೀರ್ಥಯಾತ್ರೆ ಮುಗಿಸಿದ ಬಂಧುಗಳ ಆಗಮನ. ಗಣೇಶ ಅಷ್ಟಕ, ಶಿವಾಷ್ಟೋತ್ತರ ಶತನಾಮ ಸ್ತೋತ್ರ, ಗುರುಸ್ತೋತ್ರ ಓದಿ.

೭.ತುಲಾ

  ದೈಹಿಕ‌, ಮಾನಸಿಕ ಆರೋಗ್ಯ ಸುಧಾರಣೆ. ವೃತ್ತಿರಂಗದಲ್ಲಿ ಸಮಯಸಾಧಕರ ಮೇಲುಗೈ ವಸ್ತ್ರ, ಆಭರಣ  ಖರೀದಿ  ಸಾಧ್ಯತೆ. ಗೃಹೋದ್ಯಮಗಳಿಗೆ  ಅನುಕೂಲದ ವಾತಾವರಣ.‌ ಆತ್ಮಬಲ ವೃದ್ಧಿಗಾಗಿ ಯೋಗ, ಧ್ಯಾನ, ಜಪಾದಿಗಳಿಗೆ ಸಮಯ ನೀಡಿಕೆ.
ಗಣಪತಿ ಅಥರ್ವ ಶೀರ್ಷ, ದತ್ತಪಂಜರ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.


೮.ವೃಶ್ಚಿಕ:
 ಉದ್ಯೋಗಸ್ಥಾನದ ಹಿತಶತ್ರುಗಳಿಂದ ದೂರವಿರಿ. ವ್ಯಾಪಾರಿಗಳಿಗೆ  ನಿರೀಕ್ಷೆಯ ಲಾಭ. ಹಿರಿಯರ ಆರೋಗ್ಯ ಸ್ಥಿರ. ಗೃಹಿಣಿಯರಿಗೆ ಸಣ್ಣ ಉದ್ಯಮ ಬೆಳೆಸಲು  ಆಸಕ್ತಿ. ಮಕ್ಕಳ ಸಾಧನೆಯಿಂದ ಹರ್ಷ. ಗಣೇಶ ತ್ರಿಶತಿ ಸ್ತೋತ್ರ, ಸುಬ್ರಹ್ಮಣ್ಯ ಭುಜಂಗ ಸ್ತೋತ್ರ, ಲಕ್ಷ್ಮೀಸ್ತೋತ್ರ ಓದಿ.

೯. ಧನು:

 ಅನುಭವಿಗಳ ಮಾರ್ಗದರ್ಶನದಲ್ಲಿ ಮುನ್ನಡೆ. ದೇವತಾರಾಧನೆಯತ್ತ ವಿಶೇಷ ಒಲವು. ವ್ಯವಹಾರಸ್ಥರಿಂದ ಹೊಸ ಸಾಧ್ಯತೆಗಳ ಹುಡುಕಾಟ. ಕಾರ್ಯ ಸಾಧನೆಗೆ ಹರ್ಷಾಚರಣೆ. ಕೇಟರಿಂಗ್ ವ್ಯವಹಾರಸ್ಥರಿಗೆ ವಿಶೇಷ ಲಾಭ. ಗಣೇಶ ಪಂಚರತ್ನ, ದಕ್ಷಿಣಾಮೂರ್ತಿ ಸ್ತೋತ್ರ, ನವಗ್ರಹ ಪೀಡಾಪರಿಹಾರ ಸ್ತೋತ್ರ ಓದಿ.


೧೦.ಮಕರ: 
 ನಿರೀಕ್ಷೆಗಿಂತ ಸುಲಭವಾಗಿ ಕಾರ್ಯಸಾಧನೆ. ದಿನಾರಂಭದಲ್ಲಿ ಇನ್ನಷ್ಟು ಕೆಲಸಗಳು.  ಹೊಸ ಜವಾಬ್ದಾರಿಗಳು ಬರುವ ಸಂಭವ. ಮನೆಯ ಎಲ್ಲ ಸದಸ್ಯರ ನಡುವೆ ಸೌಹಾರ್ದದ ಸಂಬಂಧ‌. ಹತ್ತಿರದ  ವಿಷ್ಣು ಕ್ಷೇತ್ರಕ್ಕೆ ಸಂದರ್ಶನ. ಗಣಪತಿ ಅಥರ್ವಶೀರ್ಷ, ಬಾಲಮುಕುಂದ ಸ್ತೋತ್ರ, ಹನುಮಾನ್ ಚಾಲೀಸಾ ಓದಿ.

೧೧. ಕುಂಭ:
ಇನ್ನಷ್ಟು ಹೊಸ ಸಾಧನೆ ಮಾಡುವ ಹುರುಪು. ಸಹೋದ್ಯೋಗಿಗಳ ಸಹಕಾರ, ಪ್ರೋತ್ಸಾಹ ಲಭ್ಯ. ಅನಿರೀಕ್ಷಿತ ಧನಾಗಮ ಯೋಗವಿದೆ. ಕ್ರೀಡಾಳುಗಳಿಗೆ ಹುಮ್ಮಸ್ಸಿನ ವಾತಾವರಣ. ವಿದ್ಯಾರ್ಥಿಗಳ ಪ್ರತಿಭಾ ವಿಕಸನಕ್ಕೆ ಕಾರ್ಯಯೋಜನೆ. ಗಣೇಶ ಕವಚ, ಸುಬ್ರಹ್ಮಣ್ಯ ಭುಜಂಗ ಸ್ತೋತ್ರ, ನವಗ್ರಹ ಸ್ತೋತ್ತ ಓದಿ.


೧೨.ಮೀನ:

 ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಯಶಸ್ಸು ತೃಪ್ತಿಕರ. ಭೂ ವ್ಯವಹಾರ, ಕಟ್ಟಡ ನಿರ್ಮಾಣ  ವ್ಯವಹಾರಸ್ಥರಿಗೆ ಅಡಚಣೆ. ಕಾರ್ಮಿಕ ವರ್ಗದವರಿಗೆ ತಾತ್ಕಾಲಿಕ ತೊಂದರೆ. ಸಂಸಾರದಲ್ಲಿ ಸಹಕಾರ, ಸಂತೃಪ್ತಿಯ ವಾತಾವರಣ. ಹೊಸ ಉದ್ಯಮಗಳಲ್ಲಿ ಸ್ಥಿರವಾದ ಪ್ರಗತಿ. ಗಣೇಶ ಕವಚ, ದತ್ತಾತ್ರೇಯ ಸ್ತೋತ್ರ, ಶನಿಮಹಾತ್ಮೆ ಓದಿ.